Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...