Homeಕರ್ನಾಟಕಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಲಿಂಗಾಯತ ಜಾತಿಯ ಆರೋಪಿ ಸೇರಿ ಕೆಲವರ ಬಂಧನ

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಕೊಲೆಯಾಗಿದ್ದು ಲಿಂಗಾಯತ ಸಮುದಾಯದ ಆರೋಪಿ ಸೇರಿದಂತೆ ಕೆಲವರನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.

ಪೆದ್ದನಹಳ್ಳಿಯ ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಪಿ.ಎಂ.ಗಿರೀಶ್‌ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡ ನಾಯಕ ಸಮುದಾಯಕ್ಕೆ ಸೇರಿದ ಗಿರೀಶ್‌ ಅವರನ್ನು ಕೊಲೆ ಮಾಡಿರುವ ಸಂಬಂಧ ದೂರು ಸಲ್ಲಿಕೆಯಾಗಿದ್ದು, ಪೆದ್ದನಹಳ್ಳಿ ಗ್ರಾಮದ ಲಿಂಗಾಯತ ಜಾತಿಗೆ ಸೇರಿದ ನಂದೀಶ್‌ ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ನಂದೀಶ್ ಹೆಸರು ಮಾತ್ರ ಉಲ್ಲೇಖವಾಗಿದ್ದು, ಇತರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಐಪಿಸಿ ಸೆಕ್ಷನ್‌ 302, 201 ಹಾಗೂ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ಹಿಂದಿನ ರಾತ್ರಿ ಆರೋಪಿ ನಂದೀಶ್‌, ಪೆದ್ದನಹಳ್ಳಿಯ ಪಿ.ಎಂ.ಗಿರೀಶ್‌ ಮನೆಗೆ ಬಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ ಶುಕ್ರವಾರ ಬೆಳಿಗ್ಗೆ ಗ್ರಾಮದ ನೀರಿನ ಕಟ್ಟೆಯಲ್ಲಿ ಗಿರೀಶ್ ಶವ ಪತ್ತೆಯಾಗಿದ್ದು, ದಾರಿಹೋಕರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ದೂರದಲ್ಲಿ ಹಾಗಲವಾಡಿ ಹೋಬಳಿಯ ಮಂಚಲದೊರೆ ಗ್ರಾಮದ ಮತ್ತೊಬ್ಬ ಯುವಕ ಗಿರೀಶ್‌ ಶವ ದೊರೆತಿದೆ. ಇಬ್ಬರ ದೇಹದ ಮೇಲೂ ಗಾಯದ ಗುರುತುಗಳು ಕಂಡು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪೆದ್ದನಹಳ್ಳಿಯ ಗಿರೀಶ್ ಸಹೋದರ ಪಿ.ಎಂ.ಶ್ರೀಧರ್‌ ದೂರು ನೀಡಿದ್ದು, “ನಂದೀಶ್‌ ಹಾಗೂ ಇತರರು ಸೇರಿಕೊಂಡು ಈ ಇಬ್ಬರನ್ನೂ ಕೊಂದಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಲೇಟ್‌ ಮೂಡ್ಲಗಿರಿಯಪ್ಪ ದಂಪತಿಗೆ ಐವರು ಮಕ್ಕಳಿದ್ದು, ಮೊದಲನೆಯವರು ಶ್ರೀಧರ್‌ ಪಿ.ಎಂ., ಕೊಲೆಯಾಗಿರುವ ಗಿರೀಶ್ ಅವಿವಾಹಿತರಾಗಿದ್ದರು. ತಾಯಿ ಗೌರಮ್ಮ ಕೂಲಿ ಮಾಡಿಕೊಂಡು ಊರಿನಲ್ಲಿ ವಾಸವಿದ್ದಾರೆ.

ನಿಟ್ಟೂರು ಹೋಬಳಿ ಅದಲಗೆರೆ ಗ್ರಾಮದಲ್ಲಿ ಅಜ್ಜಿಯ ಮನೆಯಲ್ಲಿ ಸಂಸಾರ ಸಮೇತ ಪಿ.ಎಂ.ಶ್ರೀಧರ್‌ ವಾಸವಿದ್ದು, ದಿನಾಂಕ 22.04.2022ರಂದು ತಾಯಿ ಗೌರಮ್ಮನವರು ಬೆಳಿಗ್ಗೆ 6 ಗಂಟೆ ಸುಮಾರಿಗೆ ಶ್ರೀಧರ್‌ಗೆ ಕರೆ ವಿಷಯ ತಿಳಿಸಿದ್ದಾರೆ.

“ದಿನಾಂಕ 21.04.2022ರಂದು ರಾತ್ರಿ 8.30ರಿಂದ 9 ಗಂಟೆ ಸಮಯದಲ್ಲಿ ಮನೆಯ ಬಳಿ ಬಂದ ಪೆದ್ದನಹಳ್ಳಿ ನಿವಾಸಿ, ಲಿಂಗಾಯತ ಜಾತಿಗೆ ಸೇರಿದ ಪರಮೇಶ್ವರಪ್ಪನವರ ಮಗ ನಂದೀಶ್‌ ಮತ್ತು ಇತರರು ಗಿರೀಶ್‌ ಅವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾರೆ. ವಾಪಸ್ ಮನೆಗೆ ಬಂದಿರಲಿಲ್ಲ. ಸಹೋದರ ಗಿರೀಶ್‌ ಶವ ಶಿರಾ- ನೆಲ್ಲಿಗೆರೆ ರಸ್ತೆಯಲ್ಲಿನ ಪೆದ್ದನಹಳ್ಳಿ ಗ್ರಾಮ ಸಮೀಪದ ಗುಂಡಿಯ ನೀರಿನಲ್ಲಿ ಪತ್ತೆಯಾದರೆ, ಇಲ್ಲಿಂದ ಸುಮಾರು ದೂರದಲ್ಲಿ ಮತ್ತೊಬ್ಬರನ್ನು ಕೊಲೆ ಮಾಡಿ ಕಾಲುವೆ ದಂಡೆಗೆ ಹೋಗುವ ಮಣ್ಣಿನ ರಸ್ತೆಯಲ್ಲಿ ಹಾಕಿದ್ದಾರೆ” ಎಂದು ಎಫ್‌ಆರ್‌ಐನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿರಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

“ಈ ಇಬ್ಬರನ್ನು ನಂದೀಶ್‌ ಮತ್ತು ಇತರರು ದಿನಾಂಕ 21.04.2022ರಂದು ರಾತ್ರಿ ಯಾವುದೋ ಸಮಯದಲ್ಲಿ ಯಾವುದೋ ಉದ್ದೇಶದಿಂದ ಯಾವುದೋ ಆಯುಧಗಳಿಂದ ಎಲ್ಲಿಯೋ ಹೊಡೆದು ಕೊಲೆ ಮಾಡಿ ಸತ್ಯ ಸಂಗತಿಯನ್ನು ಮರೆಮಾಚಲು ಪಿ.ಎಂ.ಗಿರೀಶ್ ಅವರ ಶವವನ್ನು ಮಟ್ಟದ ಗುಂಡಿಯ ನೀರಿನ ಅಂಚಿಗೆ ಹಾಕಿರುತ್ತಾರೆ. ಮಂಚಲಗೆರೆ ಗಿರೀಶ್‌ ಅವರನ್ನು ಮಟ್ಟದ ಗುಂಡಿಯಿಂದ ಸುಮಾರು 150 ಅಡಿ ದೂರದ ಬಂಡಿ ರಸ್ತೆಯ ಮೇಲೆ ಕೊಲೆ ಮಾಡಿ ಹಾಕಿರುತ್ತಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಗ್ರಾಮಕ್ಕೆ ಶ್ವಾನದಳ ಕರೆಸಿದ್ದಾಗ, ಶ್ವಾನಗಳು ಹಲವು ಮನೆಗಳ ಬಳಿ ಹೋಗಿದ್ದವು. ಇದರಿಂದ ಕೆಲವರು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೊಲೆಯಾದವರ ಮೇಲೆ ಕಳ್ಳತನದ ಆರೋಪ ಹೊರಿಸಿ ಪ್ರಕರಣವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...