Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...