Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...