Homeಅಂತರಾಷ್ಟ್ರೀಯಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ - ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆ – ತೀವ್ರ ಬಲಪಂಥೀಯ ಲಿ ಪೆನ್‌ಗೆ ಸೋಲು

"ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ." - ಮ್ಯಾಕ್ರಾನ್

- Advertisement -
- Advertisement -

ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿನಿಂದ ಕೂಡಿದ್ದ ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಇಮ್ಯಾನುಯೆಲ್ ಮ್ಯಾಕ್ರಾನ್ ಪುನಾರಾಯ್ಕೆಯಾಗಿದ್ದಾರೆ. ತೀವ್ರ ಬಲಪಂಥೀಯ ನಾಯಕಿಯಾದ ಮರೀನ್ ಲಿ ಪೆನ್ ಪೈಪೋಟಿ ನೀಡಿದರೂ ಸೋಲು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಕ್ಷದ ಇಮ್ಯಾನುಯೆಲ್ ಮ್ಯಾಕ್ರಾನ್ ಶೇ.58.6 ರಷ್ಟು ಮತಗಳನ್ನು ಪಡೆದರೆ ಕನ್ಸರ್ವೇಟಿವ್ ಪಾರ್ಟಿಯ ಲಿ ಪೆನ್ ಶೇ.41.4 ಮತಗಳಿಗೆ ತೃಪ್ತಿಪಟ್ಟುಕೊಂಡರು. ಕಳೆದ 20 ವರ್ಷದ ಫ್ರಾನ್ಸ್ ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಕೀರ್ತಿಗೆ ಮ್ಯಾಕ್ರಾನ್ ಭಾಜನರಾಗಿದ್ದಾರೆ.

ಮತದಾರರಿಗೆ ಕೃತಜ್ಞತೆ ಅರ್ಪಿಸಿರುವ ಮ್ಯಾಕ್ರಾನ್, “ನಮ್ಮ ಅನೇಕ ದೇಶವಾಸಿಗಳು ತೀವ್ರ ಬಲಪಂಥಕ್ಕೆ ಮತ ಹಾಕಲು ಕಾರಣ ಮತ್ತು ಭಿನ್ನಾಭಿಪ್ರಾಯಗಳಿಗೆ ಉತ್ತರ ಕಂಡುಹಿಡಿಯುವುದು ನನ್ನ ಮತ್ತು ನನ್ನ ಸುತ್ತಲಿನವರ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಐಫೆಲ್ ಟವರ್‌ನ ಬುಡದಲ್ಲಿರುವ ಸೆಂಟ್ರಲ್ ಪ್ಯಾರಿಸ್‌ನ ಚಾಂಪ್ ಡಿ ಮಾರ್ಸ್‌ನಲ್ಲಿ ವಿಜಯ ಭಾಷಣ ಮಾಡಿದ ಅವರು, “ಹಿಂದಿನ ಆಡಳಿತದಂತೆಯೇ ಮುಂದುವರೆಯುತ್ತೇನೆ, ಇದು ಹೊಸ ಯುಗವಾಗಿದೆ” ಎಂದಿದ್ದಾರೆ.

ಮ್ಯಾಕ್ರಾನ್ ಕುರಿತು

2017ರಲ್ಲಿ ಲಿ ಪೆನ್ ಅವರನ್ನು ಭಾರೀ ಅಂತರದಿಂದ ಸೋಲಿಸಿದ್ದ 46 ವರ್ಷದ ಮ್ಯಾಕ್ರಾನ್, ಈ ಬಾರಿ ಗೆಲ್ಲಲು ತೀವ್ರ ಬೆವರು ಹರಿಸಿದ್ದರು. 2017ರಲ್ಲಿ ಮ್ಯಾಕ್ರಾನ್ ಹೊಸ ಮುಖವಾಗಿದ್ದರು ಮತ್ತು ಉದಾರವಾದಿ ಪ್ರಗತಿಪರ ಎಂದು ಬಿಂಬಿಸಿಕೊಂಡಿದ್ದರು. ಹಾಗಾಗಿ ಅಲ್ಲಿನ ಎಡಪಕ್ಷಗಳು, ಅಲ್ಪ ಸಂಖ್ಯಾತರರು ಸಹ ಅವರನ್ನು ಬೆಂಬಲಿಸಿದ್ದರು. ಆದರೆ ನಂತರದ ಆಡಳಿತದಲ್ಲಿ ಅವರ ವ್ಯಾಪಾರೋದ್ಯಮ ಪರವಾದ ನೀತಿ ನಿರ್ಧಾರಗಳು ಎಡಪಂಥೀಯರಿಂದ ಟೀಕೆಗೆ ಗುರಿಯಾಗಿದ್ದವು. ಧಾರ್ಮಿಕ ಸಂಘಟನೆಗಳ ಮೇಲೆ ಕಠಿಣ ಕ್ರಮ ಜರುಗಿಸಿದ ಮ್ಯಾಕ್ರಾನ್ ತೀರ್ಮಾನಗಳು ಅಲ್ಪಸಂಖ್ಯಾತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದವು. ಆದರೆ ಈ ಎಲ್ಲದರ ನಡುವೆಯು ಅವರು ಗೆಲ್ಲಲು ಸಾಧ್ಯವಾಗಿದ್ದು ಎದುರಾಳಿ ಲಿ ಪೆನ್‌ರವರ ಉಗ್ರ ರಾಷ್ಟ್ರೀಯತೆ ಮತ್ತು ಬಲಪಂಥೀಯತೆಯಿಂದ.

ಯಾರಿದು ಮರೀನ್ ಲಿ ಪೆನ್

ವಲಸೆ ವಿರೋಧಿಯಾದ ಮತ್ತು ತೀವ್ರ ಬಲಪಂಥೀಯ ಸಿದ್ದಾಂತ ಪ್ರತಿಪಾದಿಸುವ 53 ವರ್ಷದ ಲಿ ಪೆನ್ 2017 ರಲ್ಲಿ ಹೀನಾಯವಾಗಿ ಸೋತಿದ್ದರು. ಅವರ ಅಪಾಯಕಾರಿ ರಾಜಕಾರಣ ಪ್ರೆಂಚ್ ಗಣರಾಜ್ಯಕ್ಕೆ ಮಾರಕ ಎಂದು ಹೇಳಲಾಗಿತ್ತು. ಆದರೆ ನಂತರ ಅವರು ಉಗ್ರ ರಾಷ್ಟ್ರೀಯತೆ ಮತ್ತು ವ್ಯವಸ್ಥೆಯ ವಿರೋಧಿ ರಾಜಕಾರಣದ ಮತ್ತೇರಿಸುವ ಮಿಶ್ರಪೇಯವನ್ನು ಮತದಾರರ ಮುಂದೆ ಇಟ್ಟು ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ತಮ್ಮ ತೀವ್ರ ಬಲಪಂಥೀಯ ಬೆಂಬಲ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡು ಬೆಲೆ ಏರಿಕೆ, ಹಣದುಬ್ಬರ ಕುರಿತು ಅಸಮಾಧಾನ ಹೆಚ್ಚಿದ ಅಸಮಾಧಾನವನ್ನು ಬಳಸಿ ಮ್ಯಾಕ್ರಾನ್ ಆಡಳಿತದ ಕುರಿತು ಭ್ರಮನಿರಸನ ಹೊಂದಿದ ಮತದಾರರನ್ನೂ ತಮ್ಮತ್ತ ಸೆಳೆದುಕೊಂಡಿದ್ದಾರೆ. ಹಾಗಾಗಿ ಅವರು ಈ ಬಾರಿ ತೀವ್ರ ಪೈಪೋಟಿ ನೀಡಲು ಸಾಧ್ಯವಾಯಿತು ಎನ್ನಲಾಗಿದೆ.

ಮರೀನ್ ಲಿ ಪೆನ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಫ್ರಾನ್ಸ್‌ನ ಮಸೀದಿಯಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆದಿದೆಯೇ?

ಉಕ್ರೇನ್ ವಿರುದ್ಧದ ಯುದ್ಧವನ್ನು ಲಿ ಪೆನ್ ವಿರೋಧಿಸುವ ಜೊತೆಗೆ ರಷ್ಯಾದ ಮೇಲೆ ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಸಾರಿರುವ ನಿರ್ಬಂಧಗಳನ್ನೂ ಟೀಕಿಸಿದ್ದರು. ಈ ನಿರ್ಬಂಧಗಳು ಫ್ರೆಂಚ್ ಗ್ರಾಹಕರ ಹಿತಗಳನ್ನು ಬಾಧಿಸುತ್ತಿವೆ ಎಂದು ವಾದಿಸಿದ್ದರು. ನ್ಯಾಟೋ ಕಮಾಂಡ್ ನಿಂದ ಫ್ರೆಂಚ್ ಪಡೆಗಳನ್ನು ವಾಪಸು ಕರೆಸಿಕೊಳ್ಳಬೇಕೆಂಬುದು ಮಾತನಾಡಿದ್ದರು. ಇವೆಲ್ಲವೂ ಯೂರೋಪ್ ಒಕ್ಕೂಟಕ್ಕೆ ಭಾರೀ ತಲೆನೋವಾಗಿದ್ದವು. ಸದ್ಯದ ಅವರ ಸೋಲಿನಿಂದ ಯೂರೋಪಿಯನ್ ಒಕ್ಕೂಟ ನಿಟ್ಟುಸಿರಿ ಬಿಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...