Homeಕರ್ನಾಟಕಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

ಸುಳ್ಳು ಜಾತಿ ಪ್ರಮಾಣ ಪತ್ರ: ಶಿಕ್ಷಿಸಲು ಪ್ರತ್ಯೇಕ ಕಾಯ್ದೆಯಾಗಲಿ

- Advertisement -
- Advertisement -

ಶಾಸಕ ರೇಣುಕಾಚಾರ್ಯ ಮಗಳು ಹಾಗೂ ಅವರ ತಮ್ಮನ ಮಕ್ಕಳು ಬೇಡ ಜಂಗಮ ಎಂದು ಸುಳ್ಳು ಜಾತಿ ದಾಖಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ. ಈ ಮೂಲಕ ಸಂವಿಧಾನಬದ್ಧ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸಿ ಖಾತ್ರಿಪಡಿಸಿಕೊಳ್ಳಬೇಕಾದ ಶಾಸಕರೇ ಅನ್ಯಾಯಕ್ಕಿಳಿದಿರುವುದು ಹಾಗೂ ಕಾನೂನು ವಿರೋಧಿ ಕಾರ್ಯವೆಸಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಕೃತ್ಯ ಅಪರಾಧವೆಂಬುದರಲ್ಲಿ ಎರಡು ಮಾತಿಲ್ಲ.

ಶಾಸಕರು ಆ ಜಾತಿಪ್ರಮಾಣ ಪತ್ರದಿಂದ ಯಾವುದೇ ಸವಲತ್ತು ಪಡೆದಿಲ್ಲವೆಂದು ಸಮಜಾಯಿಷಿ ನೀಡಿದ್ದರೂ ಅಕ್ರಮವೆಸಗಿರುವುದಂತು ಸಾಬೀತಾಗಿದೆ. ಸಾಮಾನ್ಯ ಜನತೆಗೆ ಸಾವಿರ ದಾಖಲೆ ಕೇಳುವ ತಾಲ್ಲೂಕು ಆಡಳಿತ ಅಧಿಕಾರಿ ಶಾಸಕರ ಕುಟುಂಬಕ್ಕೆ ಸುಳ್ಳು ಜಾತಿಪ್ರಮಾಣ ಪತ್ರ ನೀಡಿರುವುದು ಶಿಕ್ಷಾರ್ಹ ಅಪರಾಧವಾಗಿದೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಜಾತಿಯನ್ನು ಹೇಳಿಕೊಂಡು ಸುಳ್ಳು ಜಾತಿಪ್ರಮಾಣ ಪತ್ರ ಪಡೆಯುವುದು ಇದೇ ಮೊದಲಲ್ಲ. ಸ್ವತಂತ್ರ ಭಾರತದ ಆರಂಭಿಕ ಕಾಲದಿಂದಲೂ ಈ ಹಾವಳಿ ಹೆಚ್ಚುತ್ತಲೇ ಬಂದಿದೆ. 2018ರಲ್ಲಿ ಇಂತಹುದೇ ಕೃತ್ಯವೆಸಗಿದ ನಾಲ್ವರನ್ನು ಕರ್ನಾಟಕ ಸರ್ಕಾರ ಅಮಾನತು ಮಾಡಿತ್ತು. ಆದರೆ ಈ ಅಪರಾಧಕ್ಕೆ ಸರಿಯಾದ ಕಾನೂನಿನ ನಿರ್ಬಂಧ ಇಲ್ಲದಿರುವ ಕಾರಣ ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಎಲ್ಲರಿಗೂ ಎದ್ದು ಕಾಣುವ ಶಾಸಕನ ಮಗಳೇ ಈ ಕೆಲಸ ಮಾಡಿರುವಾಗ ಕಾನೂನು ಅದೆಷ್ಟು ಸಡಿಲವಾಗಿದೆ ಎಂಬುದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದಾಗಿದೆ.

2015ರಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಆಯೋಗ ಸುಳ್ಳು ಜಾತಿಪ್ರಮಾಣ ಪತ್ರದ ಬಗೆಗಿನ 6 ಲಕ್ಷ ದೂರುಗಳನ್ನು ಸ್ವೀಕರಿಸಿತ್ತು. ಹಿಂದೆ ಸುಪ್ರೀಂಕೋರ್ಟ್‌ನಲ್ಲಿ 50 ಸಾವಿರ ಪ್ರಕರಣಗಳ ಬಗ್ಗೆ ಪ್ರಸ್ತಾಪವಾಗಿತ್ತು. ರಾಜ್ಯಸಭೆಯಲ್ಲಿಯೂ ಇಂತಹುದೇ 1000 ಪ್ರಕರಣಗಳು ಸದ್ದು ಮಾಡಿದ್ದವು. 2020ರಲ್ಲಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವು ಸುಮಾರು 591 ಸುಳ್ಳು ಜಾತಿಪ್ರಮಾಣ ಪತ್ರಗಳ ಬಗ್ಗೆ ದೂರುಗಳನ್ನು ಪಡೆದಿತ್ತು.

ಅಷ್ಟೂ ಪ್ರಕರಣಗಳಲ್ಲಿ ಮೇಲ್ಜಾತಿಗಳವರು ಪರಿಶಿಷ್ಟರ ಹಾಗೂ ಹಿಂದುಳಿದ ಜಾತಿಗಳ ಪ್ರಮಾಣಪತ್ರ ಪಡೆದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಉದ್ಯೋಗವನ್ನು ಪಡೆದಿದ್ದರು. ಆಶ್ಚರ್ಯವೆಂದರೆ ಅವರಲ್ಲಿನ ಹೆಚ್ಚಿನವರು ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಗಳಾಗಿದ್ದರು. ಜೊತೆಗೆ ವಿದ್ಯಾರ್ಥಿವೇತನ ಹಾಗೂ ದಲಿತರ, ಹಿಂದುಳಿದ ಜಾತಿಗಳ ಭೂಮಿ ಪಡೆಯಲೂ ಬಳಸಿಕೊಂಡಿದ್ದರು. ಈ ಪ್ರಕರಣ ವಿಚಾರಣೆಗೆ ಬರುವಷ್ಟರಲ್ಲಿ 12 ಉದ್ಯೋಗಿಗಳು ನಿವೃತ್ತಿಯನ್ನೂ ಹೊಂದಿದ್ದರು. ಹಲವರ ಮೇಲೆ ಪ್ರಕರಣ ದಾಖಲಿಸಲಾಯಿತಾದರೂ ಯಾರನ್ನೂ ಸೇವೆಯಿಂದ ವಜಾಗೊಳಿಸಿದ್ದು ಕಂಡುಬರಲಿಲ್ಲ. ಸಂಬಂಧಪಟ್ಟ ತಹಸಿಲ್ದಾರ್ ಹಾಗೂ ಉದ್ಯೋಗಿಗಳ ನಡುವಿನ ಒಳಒಪ್ಪಂದಗಳು ಹಾಗೂ ಸರ್ಕಾರದ ಬೇಜವಾಬ್ದಾರಿತನದಿಂದ ನ್ಯಾಯ ನೇಣಿಗೇರಿತು.

ಇಂದು ರಾಷ್ಟ್ರೀಯ ಹಾಗೂ ರಾಜ್ಯ ಪರಿಶಿಷ್ಟರ ಆಯೋಗಗಳು, ವಿವಿಧ ರಾಜ್ಯಗಳ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಶಿಗಟ್ಟಲೆ ಸುಳ್ಳು ಜಾತಿಪ್ರಮಾಣ ಪತ್ರ ಪಡೆದ ಪ್ರಕರಣಗಳು ಬಿದ್ದಿವೆ. ಭಾರತದಾದ್ಯಂತ ಇಂತಹ ಕೋಟಿಗಟ್ಟಲೆ ಪ್ರಕರಣಗಳು ಕಂಡುಬರುತ್ತಿವೆ. ಆದರೆ ಸರ್ಕಾರ ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ.

ಶಾಸಕನೇ ಇಂತಹ ಕೆಲಸ ಮಾಡಿರುವುದು ಸರ್ಕಾರದ ಮೇಲಿನ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ. ತನ್ನ ಘನತೆಯನ್ನು ಉಳಿಸಿಕೊಳ್ಳಲು ಸರ್ಕಾರ ಈ ಕೂಡಲೇ ಶಾಸಕರನ್ನು ಹಾಗೂ ಸಂಬಂಧಪಟ್ಟ ತಹಸೀಲ್ದಾರರನ್ನು ಅಮಾನತುಗೊಳಿಸಬೇಕಿದೆ. ಬಹುಮುಖ್ಯವಾಗಿ ಇದೇ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್ ಅಟ್ರಾಸಿಟಿ ಕಾಯ್ದೆಯನ್ವಯ ಶಿಕ್ಷೆ ನೀಡಲು ಸಾಧ್ಯಲ್ಲವೆಂದು ತೀರ್ಪಿತ್ತಿರುವುದರಿಂದ ಅಟ್ರಾಸಿಟಿ ಕಾಯ್ದೆಯನ್ನು ತಿದ್ದುಪಡಿ ಮಾಡಲು ಒಕ್ಕೂಟ ಸರ್ಕಾರಕ್ಕೆ ಮನವಿ ಸಲ್ಲಿಸಿ ತಿದ್ದುಪಡಿಯಾಗುವವರೆಗೆ ಸುಳ್ಳು ಜಾತಿಪ್ರಮಾಣ ಪತ್ರದ ಅನ್ಯಾಯ ತಡೆಯಲು ಈ ಕೂಡಲೇ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯೊಂದನ್ನು ಜಾರಿಗೊಳಿಸಬೇಕಿದೆ. ಬಡವರ ತಟ್ಟೆಗೂ ಕೈ ಹಾಕುವ ಮೋಸಗಾರರಿಗೆ ತಕ್ಕ ಶಿಕ್ಷೆ ವಿಧಿಸಬೇಕಿದೆ.

ಸಿದ್ಧಾರ್ಥ ಎಂ.
ಸಾಮಾಜಿಕ ಕಾರ್ಯಕರ್ತರು


ಇದನ್ನೂ ಓದಿ: ನಕಲಿ ಜಾತಿ ಸರ್ಟಿಫಿಕೇಟ್‌: ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ವಿರುದ್ಧ ಎಫ್‌ಐಆ‌‌ರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ನನ್ನ ಅಭಿಪ್ರಾಯ.

  2. ತಾಯಿ ಲಿಂಗಾಯತ ಆಗಿದ್ದರೂ ಮಕ್ಕಳು ದಲಿತ ಗಂಡನಿಗೆ ಹುಟ್ಟಿದ್ದರೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಿದ್ದರೆ ಸಿಂಧುತ್ವಕ್ಕೆ ಅಡ್ಡಿಯಿಲ್ಲ ಎಂದೆನಿಸುತ್ತದೆ. ಇದು ನನ್ನ ಅಭಿಪ್ರಾಯ. ಕಾನೂನು ಏನು ಹೇಳುತ್ತೋ ಗೊತ್ತಿಲ್ಲ.

  3. ಈ ದೇಶದ ಸಂವಿಧಾನದ ಮೂಲವೇ  ಬ್ರಿಟಿಷ್ ರ Govt. of India Act 1935. ಅದರ ಪೂರ್ವದ 1921 ರ ಹೈದರಾಬಾದ್ ನಿಜಾಮರ Depressed Class ಪಟ್ಟಿಯಲ್ಲಿ Jangam ಬರುತ್ತದೆ. 1936 ರ ಭಂಡಾರ ಜಿಲ್ಲೆಗೆ ಸಂಬಂಧಿಸಿದಂತೆ Schedule Caste ಪಟ್ಟಿಯಲ್ಲೂ ಜಂಗಮ ಜಾತಿ ಇರುತ್ತದೆ. ಮರಾಠರ ಆಳ್ವಿಕೆಯಲ್ಲಿ ಮುಂಬೈ ಕರ್ನಾಟಕದ ಪ್ರದೇಶಗಳೂ ಸೇರಿದಂತೆ ಜಂಗಮ ಜಾತಿಯು Beggers ಪಟ್ಟಿಯಲ್ಲಿ, ಮೈಸೂರು ಸಂಸ್ಥಾನದಲ್ಲಿ Inferior Religious Mendicants ಪಟ್ಟಿಯಲ್ಲೂ ಜಂಗಮ ಜಾತಿ ಗುರ್ತಿಸಲ್ಪಟ್ಟಿದೆ. ಜಂಗಮರು ಯಾರು ಎಂಬುದು ಬ್ರಿಟಿಷ್ ಚಿಂತಕ C.P. Brown ಇವರ ಗ್ರಂಥದಲ್ಲಿ ವಿವರಿಸಲ್ಪಟ್ಟಿದೆ. ಇದೆಲ್ಲವೂ ಸ್ವತಂತ್ರ ಪೂರ್ವ ದಾಖಲೆಗಳು. ಇವು ಪ್ರಮಾಣೀಕೃತ ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯ ಹಲವು ತೀರ್ಪುಗಳಲ್ಲಿ ವಿವರಿಸಿದೆ. “Pre-independent Documents are more reliable and they have got Probative Value”  ಎಂದಿದೆ. ಸರ್ಕಾರದ ಈವರೆಗಿನ ಎಲ್ಲ ಸುತ್ತೋಲೆಗಳು ವೀರಶೈವ ಜಂಗಮರೇ ಬೇಡಜಂಗಮರು ಎನ್ನುತ್ತವೆ. ಸೂರ್ಯನಾಥ ಕಾಮತರ ಅಧ್ಯಯನ ವರದಿ ಮಾನ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷ್ಯವಾಗಿದೆ.

    ಜಂಗಮರು ಬೇಡಜಂಗಮರಲ್ಲದಿದ್ದರೆ, ಜಂಗಮ ಜಾತಿಯನ್ನು ಕೇಂದ್ರದ OBC ಮತ್ತು ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿಕೊಡಲು ಸಂವಿಧಾನದ ಸದಾಶಯ ಜಾರಿ ವಿರೋಧಿಗಳು ಕ್ರಮವಹಿಸಬೇಕು.

    Article 147 ಅನುಸಾರ ಪ್ರಸ್ತುತ ಸಂವಿಧಾನದ ಜಾರಿಯ ತೊಂದರೆಯಲ್ಲಿ , ಅನುಸರಿಸಲು ದಾರಿ ತೋರಿದೆ. ಅದನ್ನು ಗ್ರಹಿಸಿ.

    ಜಂಗಮ ತನ್ನ ಹಕ್ಕುಗಳಿಂದ ವಂಚಿತನಾಗಿದ್ದು, ಯಾರ ಹಕ್ಕನ್ನೂ ಕಸಿಯುವ ಪ್ರಶ್ನೆ ಉದ್ಭವಿಸಿಯೇ ಇಲ್ಲ.

    ಕೇಂದ್ರ ಸರ್ಕಾರಕ್ಕೆ ಬರೆದ ಪತ್ರದಲ್ಲಿ, ಕೇಂದ್ರವು ರಾಜ್ಯಕ್ಕೆ ಪ್ರತಿಕ್ರಿಯಿಸಲು ನಿರ್ದೇಶನ ನೀಡಿದರೂ, 6-7 ತಿಂಗಳಿನಿಂದ ರಾಜ್ಯ ಕೇಂದ್ರಕ್ಕೇ ಪ್ರತಿಕ್ರಿಯಿಸಿಲ್ಲ. ಇನ್ನು ಸಾಮಾನ್ಯರಿಗೆ ಏನು ಉತ್ತರ ಕೊಡುತ್ತಾರೆ..!?

    ಪರಿಶಿಷ್ಟ ಜಾತಿ ಪಟ್ಟಿ ಅನುಸೂಚಿತ ಜಾತಿಗಳ ಪಟ್ಟಿ ಮಾತ್ರವಾಗಿದ್ದು, ಅದಕ್ಕೆ ವಿಪರೀತ ಅರ್ಥವನ್ನು ಮಾನ್ಯ ಸಂವಿಧಾನ ಕೊಟ್ಟಿರುವುದಿಲ್ಲ.

    ಜಂಗಮರು, ಬೇಡಜಂಗಮರಲ್ಲ ಎಂದು ಮಾನ್ಯ ಸುಪ್ರೀಂ ಮುಂದೆ ಹೋಗಿ ವಾದ ಮಂಡಿಸಿದರೆ, ಸುಲಭದಲ್ಲಿ ಸಮಸ್ಯೆ ಪರಿಹಾರವಾಗಬಹುದಲ್ಲವೇ..!?

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...