Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...