Homeಮುಖಪುಟಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಮೇ 3 ರಂದು ರಾಜ್ಯಾದ್ಯಂತ ಬಸವ ಜಯಂತಿ ಆಚರಿಸಲು ನಿರ್ಧರಿಸಿದ ತೆಲಂಗಾಣ ಸರ್ಕಾರ

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ.

- Advertisement -
- Advertisement -

ಮೇ 3 ರಂದು ರಾಜ್ಯದೆಲ್ಲೆಡೆ ಮಹಾತ್ಮ ಬಸವೇಶ್ವರ ಜಯಂತಿ ಆಚರಿಸುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. ಇನ್ನು ಮುಂದೆ ಅಕ್ಷಯ ತೃತೀಯದಂದು ಪ್ರತಿ ವರ್ಷ ತೆಲಂಗಾಣ ರಾಜ್ಯಾದ್ಯಂತ ಬಸವ ಜಯಂತಿ ನಡೆಯಲಿದೆ ಎಂದು ಘೋಷಿಸಿದೆ.

ತೆಲಂಗಾಣ ಸರ್ಕಾರದ ಈ ನಡೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಸ್ವಾಗತಿಸಿದೆ. ಈ ಕುರಿತು ಟ್ವೀಟ್ ಮಾಡಿದ್ದು, “ಬಸವ ಜಯಂತಿಯನ್ನು ತೆಲಂಗಾಣ ರಾಜ್ಯದಲ್ಲಿ ಆಚರಿಸಲು ನಿರ್ಧರಿಸಿದ್ದಕ್ಕಾಗಿ ಶರಣು ಶರಣಾರ್ಥಿ. ನಿಮ್ಮ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ತೆಲಂಗಾಣದ ಎಲ್ಲಾ ನಾಗರಿಕರಿಗೆ ಬಸವ ಜಯಂತಿ 2022ರ ಶುಭಾಶಯಗಳು” ಎಂದು ತಿಳಿಸಿದೆ.

 

ಇತ್ತೀಚಿನ ದಿನಗಳಲ್ಲಿ ದಾರ್ಶನಿಕ ಬಸವಣ್ಣನವರನ್ನು ನೆನಪಿಸಿಕೊಳ್ಳುವ ಕ್ರಿಯೆ ಕರ್ನಾಟಕ ಮಾತ್ರವಲ್ಲದೆ ದಕ್ಷಿಣದ ಇತರ ರಾಜ್ಯಗಳಲ್ಲಿಯೂ ಜರುಗುತ್ತಿದೆ. ಕಳೆದ ವರ್ಷ ಬಸವ ಜಯಂತಿಯ ದಿನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಕನ್ನಡದಲ್ಲಿ ಬಸವಣ್ಣನವರ ವಚನವನ್ನು ಟ್ವೀಟ್‌ ಮಾಡುವ ಮೂಲಕ ಸಾವಿರಾರು ಕನ್ನಡ ಅಭಿಮಾನಿಗಳ ಮನಗೆದ್ದಿದ್ದರು.

ಬಸವ ಜಯಂತಿ ಶುಭಾಷಯಗಳು ಎಂಬ ವಾಕ್ಯಗಳಿಂದ ಆರಂಭವಾಗಿದ್ದ ಅವರ ಟ್ವೀಟ್‌ “ನಮ್ಮೊಳಗಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಮಹಾನ್‌ ಬಸವಣ್ಣನವರು ಮಾರ್ಗದರ್ಶಕರಾಗಲಿ. ನಾವು ವಿಭಜಿತವಾಗಿದ್ದರೆ ಈ ಸಾಂಕ್ರಾಮಿಕದ ವಿರುದ್ಧ ಜಯಿಸಲು ಸಾಧ್ಯವಿಲ್ಲ. ಗೆಲ್ಲಲ್ಲು ಅದು ನಮ್ಮ ಒಗ್ಗಟ್ಟನ್ನು ಕೇಳುತ್ತದೆ” ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದರು.

ಮುಂದುವರಿದು ”ಇವನಾರವ ಇವನಾರವ ಇವನಾರವನೆಂದು ಎನಿಸದಿರಯ್ಯ. ಇವ ನಮ್ಮವ ಇವ ನಮ್ಮವ, ಇವ ನಮ್ಮವನೆಂದು ಎನಿಸಯ್ಯ.” ಎಂಬ ಬಸವಣ್ಣನವರ ಖ್ಯಾತ ವಚನವನ್ನು ಟ್ವೀಟ್‌ ಮಾಡುವ ಮೂಲಕ ಬಸವಣ್ಣನವರನ್ನು ಸ್ಮರಿಸಿದ್ದರು.

ಇದನ್ನೂ ಓದಿ: ’ಅವ ನಮ್ಮವ, ಅವ ನಮ್ಮವ’ ಎಂದ ಕ್ರಾಂತಿಕಾರಿ ಬಸವಣ್ಣನ ಚಿಂತನೆಗಳು ಇಂದಿನ ವಿಷಮತೆಗೆ ಲಸಿಕೆ..: ಜಿ.ಬಿ ಪಾಟೀಲ್

ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ತೆಲಂಗಾಣ ಸಿಎಂ ಕೆ.ಸಿ ಚಂದ್ರಶೇಖರ್ ರಾವ್ ಈ ವರ್ಷದಿಂದ ತೆಲಂಗಾನದಲ್ಲಿ ಬಸವ ಜಯಂತಿ ಆಚರಿಸಲು ಆದೇಶಿಸಿದ್ದಾರೆ. ಆ ಮೂಲಕ ಬಸವಣ್ಣನವರ ಸತ್ಯ, ನ್ಯಾಯ ಮತ್ತು ಸಮಾನತೆ ಪರವಾಗಿನ ವಿಚಾರಗಳು ಎಲ್ಲಾ ಜನರಿಗೂ ತಲುಪಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...