Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....