Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...