Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...