Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

- Advertisement -
- Advertisement -

ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿರುವ ಕೋರ್ಟ್, “ವಿವಿಧ ಕಲ್ಯಾಣ ಯೋಜನೆಗಳ ಬೆನ್ನೆಲುಬಾಗಿರುವ ಮತ್ತು ಸಮಾಜಕ್ಕೆ ಪ್ರಮುಖ ಸೇವೆಗಳನ್ನು ಸಲ್ಲಿಸುತ್ತಿರುವ ಈ ವರ್ಗಕ್ಕೆ ಕಡಿಮೆ ಸಂಭಾವನೆ ಕೊಡಲಾಗುತ್ತಿದೆ” ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ಸರ್ಕಾರಗಳು ವಾದಿಸಿದ್ದವು. ಗುಜರಾತ್‌ನ ಐವರು ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ 16 ವರ್ಷಗಳ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ.

ಇದನ್ನೂ ಓದಿರಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ತೀರ್ಪನ್ನು ನೀಡಿದೆ. “ಧ್ವನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಿರಿ” ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

2017ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದ ಹೋರಾಟದಲ್ಲಿ ಸೋತ ನಂತರ, ಅಂಗನವಾಡಿ ಕಾರ್ಯಕರ್ತೆಯರು ಸುಪ್ರೀಂ ಮೆಟ್ಟಿಲೇರಿದ್ದರು.

“ಅವರು ಪೂರ್ಣಾವಧಿ ನೌಕರರಲ್ಲ” ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇಬ್ಬರೂ ನ್ಯಾಯಾಧೀಶರು ಈ ವಿಷಯದ ಬಗ್ಗೆ ಒಮ್ಮತವನ್ನು ಹೊಂದಿದ್ದರು. ಆದರೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರು. ಸಾಮಾಜಿಕ ಭದ್ರತಾ ಶಾಸನಗಳನ್ನು ಯಾವಾಗಲೂ ಉದಾರವಾಗಿ ಅರ್ಥೈಸಬೇಕು ಎಂದಿರುವ ನ್ಯಾಯಮೂರ್ತಿ ರಸ್ತೋಗಿ ಅಭಿಪ್ರಾಯಪಟ್ಟರು.

“ಎಡಬ್ಲ್ಯೂಡಬ್ಲ್ಯೂಗಳು ಮತ್ತು ಎಡಬ್ಲ್ಯೂಎಚ್‌ಗಳಿಗೆ ಎಲ್ಲಾ ವ್ಯಾಪಕ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಫಲಾನುಭವಿಗಳ ಗುರುತಿಸುವಿಕೆ, ಪೌಷ್ಠಿಕಾಂಶದ ಆಹಾರವನ್ನು ಬೇಯಿಸುವುದು, ಮಕ್ಕಳಿಗೆ ಪ್ರಿಸ್ಕೂಲ್ ನಡೆಸುವುದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳ ಅನುಷ್ಠಾನವನ್ನು ಇವರಿಗೆ ವಹಿಸಲಾಗಿದೆ. ಆದ್ದರಿಂದ ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ನಿಯೋಜಿಸಲಾದ ಕೆಲಸವು ಅರೆಕಾಲಿಕ ಕೆಲಸ ಎಂಬ ವಾದವನ್ನು ಒಪ್ಪಿಕೊಳ್ಳುವುದು ಅಸಾಧ್ಯ” ಎಂದು ಜಸ್ಟೀಸ್ ಓಕಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

“ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ಕಾಡುತ್ತಿರುವ ಸಮಸ್ಯೆಗಳ ಕಡೆಗೆ ನಾವು ನೋಡಿದರೆ ಅವರು ಸಂಬಳದಿಂದ ವಂಚಿತರಾಗಿದ್ದಾರೆ ಮತ್ತು ರಾಜ್ಯದ ಉದ್ಯೋಗಿಗಳಿಗೆ ಇತರ ಪ್ರಯೋಜನಗಳು ಲಭ್ಯವಿವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಸ್ವರೂಪದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಗುಜರಾತ್, ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ವ್ಯತಿರಿಕ್ತ ತೀರ್ಪುಗಳನ್ನು ನೀಡಿವೆ. ಈಗ ಸುಪ್ರೀಂ ತೀರ್ಪು ನೀಡುವ ಮೂಲಕ ಕಾನೂನನ್ನು ಇತ್ಯರ್ಥಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....