Homeಮುಖಪುಟಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪು

- Advertisement -
- Advertisement -

ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದಿರುವ ಕೋರ್ಟ್, “ವಿವಿಧ ಕಲ್ಯಾಣ ಯೋಜನೆಗಳ ಬೆನ್ನೆಲುಬಾಗಿರುವ ಮತ್ತು ಸಮಾಜಕ್ಕೆ ಪ್ರಮುಖ ಸೇವೆಗಳನ್ನು ಸಲ್ಲಿಸುತ್ತಿರುವ ಈ ವರ್ಗಕ್ಕೆ ಕಡಿಮೆ ಸಂಭಾವನೆ ಕೊಡಲಾಗುತ್ತಿದೆ” ಎಂಬುದನ್ನು ಗಮನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯನ್ನು ತಿರಸ್ಕರಿಸಿದೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಗ್ರಾಚ್ಯುಟಿಗೆ ಅರ್ಹರಲ್ಲ ಎಂದು ಸರ್ಕಾರಗಳು ವಾದಿಸಿದ್ದವು. ಗುಜರಾತ್‌ನ ಐವರು ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ 16 ವರ್ಷಗಳ ಕಾನೂನು ಹೋರಾಟಕ್ಕೆ ತಾರ್ಕಿಕ ಅಂತ್ಯ ದೊರೆತಿದೆ.

ಇದನ್ನೂ ಓದಿರಿ: ದಾದಾಗಿರಿ ಮಾಡಲು ಬಂದರೆ ‘ಮಹಾರುದ್ರ’ ತೋರಿಸಿ ಕೊಡುತ್ತೇವೆ: ಬಿಜೆಪಿಗೆ ಶಿವಸೇನೆ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ತೀರ್ಪನ್ನು ನೀಡಿದೆ. “ಧ್ವನಿಯಿಲ್ಲದವರಿಗೆ ಅವರ ಕೆಲಸದ ಸ್ವರೂಪಕ್ಕೆ ಅನುಗುಣವಾಗಿ ಉತ್ತಮ ಸೇವಾ ಪರಿಸ್ಥಿತಿಗಳನ್ನು ಒದಗಿಸುವ ವಿಧಾನಗಳನ್ನು ಕಂಡುಕೊಳ್ಳಿರಿ” ಎಂದು ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

2017ರಲ್ಲಿ ಗುಜರಾತ್ ಹೈಕೋರ್ಟ್‌ನಲ್ಲಿ ನಡೆದ ಹೋರಾಟದಲ್ಲಿ ಸೋತ ನಂತರ, ಅಂಗನವಾಡಿ ಕಾರ್ಯಕರ್ತೆಯರು ಸುಪ್ರೀಂ ಮೆಟ್ಟಿಲೇರಿದ್ದರು.

“ಅವರು ಪೂರ್ಣಾವಧಿ ನೌಕರರಲ್ಲ” ಎಂಬ ಸರ್ಕಾರಗಳ ಮನವಿಯನ್ನು ಸುಪ್ರೀಂ ತಿರಸ್ಕರಿಸಿದೆ. ಇಬ್ಬರೂ ನ್ಯಾಯಾಧೀಶರು ಈ ವಿಷಯದ ಬಗ್ಗೆ ಒಮ್ಮತವನ್ನು ಹೊಂದಿದ್ದರು. ಆದರೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರು. ಸಾಮಾಜಿಕ ಭದ್ರತಾ ಶಾಸನಗಳನ್ನು ಯಾವಾಗಲೂ ಉದಾರವಾಗಿ ಅರ್ಥೈಸಬೇಕು ಎಂದಿರುವ ನ್ಯಾಯಮೂರ್ತಿ ರಸ್ತೋಗಿ ಅಭಿಪ್ರಾಯಪಟ್ಟರು.

“ಎಡಬ್ಲ್ಯೂಡಬ್ಲ್ಯೂಗಳು ಮತ್ತು ಎಡಬ್ಲ್ಯೂಎಚ್‌ಗಳಿಗೆ ಎಲ್ಲಾ ವ್ಯಾಪಕ ಕರ್ತವ್ಯಗಳನ್ನು ನಿಯೋಜಿಸಲಾಗಿದೆ. ಫಲಾನುಭವಿಗಳ ಗುರುತಿಸುವಿಕೆ, ಪೌಷ್ಠಿಕಾಂಶದ ಆಹಾರವನ್ನು ಬೇಯಿಸುವುದು, ಮಕ್ಕಳಿಗೆ ಪ್ರಿಸ್ಕೂಲ್ ನಡೆಸುವುದು, ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳ ಅನುಷ್ಠಾನವನ್ನು ಇವರಿಗೆ ವಹಿಸಲಾಗಿದೆ. ಆದ್ದರಿಂದ ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ನಿಯೋಜಿಸಲಾದ ಕೆಲಸವು ಅರೆಕಾಲಿಕ ಕೆಲಸ ಎಂಬ ವಾದವನ್ನು ಒಪ್ಪಿಕೊಳ್ಳುವುದು ಅಸಾಧ್ಯ” ಎಂದು ಜಸ್ಟೀಸ್ ಓಕಾ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

“ಎಡಬ್ಲ್ಯೂಡಬ್ಲ್ಯೂ ಮತ್ತು ಎಡಬ್ಲ್ಯೂಎಚ್‌ಗಳಿಗೆ ಕಾಡುತ್ತಿರುವ ಸಮಸ್ಯೆಗಳ ಕಡೆಗೆ ನಾವು ನೋಡಿದರೆ ಅವರು ಸಂಬಳದಿಂದ ವಂಚಿತರಾಗಿದ್ದಾರೆ ಮತ್ತು ರಾಜ್ಯದ ಉದ್ಯೋಗಿಗಳಿಗೆ ಇತರ ಪ್ರಯೋಜನಗಳು ಲಭ್ಯವಿವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಸ್ವರೂಪದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿದ್ದು, ಗುಜರಾತ್, ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ಗಳು ವ್ಯತಿರಿಕ್ತ ತೀರ್ಪುಗಳನ್ನು ನೀಡಿವೆ. ಈಗ ಸುಪ್ರೀಂ ತೀರ್ಪು ನೀಡುವ ಮೂಲಕ ಕಾನೂನನ್ನು ಇತ್ಯರ್ಥಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...