Homeರಾಷ್ಟ್ರೀಯದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಉತ್ತರಾಖಂಡದ ರೂರ್ಕಿಯಲ್ಲಿ ಬುಧವಾರ ನಡೆಯಲಿರುವ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ವಿಶಿಷ್ಟ ‘ದ್ವೇಷ ಉತ್ಸವ’ವಾಗಿ ಬದಲಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ತಿಂಗಳ ಆರಂಭದಲ್ಲಿ ನಡೆದ ಇದೇ ರೀತಿಯ ಘಟನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೆರೆಯ ಹಿಮಾಚಲ ಪ್ರದೇಶಕ್ಕೂ ತೀಕ್ಷ್ಣವಾದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್‌ ಕೇಳಿದೆ.

“ದ್ವೇಷದ ಭಾಷಣವನ್ನು ನಿಲ್ಲಿಸದಿದ್ದರೆ, ಉತ್ತರಾಖಂಡ ಮುಖ್ಯ ಕಾರ್ಯದರ್ಶಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ನಾವು ಮುಖ್ಯ ಕಾರ್ಯದರ್ಶಿಯನ್ನು ನ್ಯಾಯಾಲಯಕ್ಕೆ ಕರೆಸುತ್ತೇವೆ” ಎಂದು ನ್ಯಾಯಾಮೂರ್ತಿಗಳು ಹೇಳಿದ್ದು, ‘ಧರಮ್ ಸಂಸದ್’ನಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡಲಾಗುವುದಿಲ್ಲ ಎಂದು ಖಚಿತಪಡಿಸಲು ರಾಜ್ಯದ ಉನ್ನತ ಅಧಿಕಾರಿಗಳಿಗೆ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಯನ್ನು ಅನುಸರಿಸಿ. ದ್ವೇಷದ ಭಾಷಣವನ್ನು ನಿಲ್ಲಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ಸುಪ್ರೀಂಕೋರ್ಟ್‌ ಮುಂದಿನ ಬುಧವಾರದಂದು ನಿಗದಿಪಡಿಸಲಾದ ಕಾರ್ಯಕ್ರಮಕ್ಕೆ ಮುಂಚಿತವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಪ್ರತ್ಯೇಕ ವಿಚಾರಣೆಯೊಂದರಲ್ಲಿ, ಈ ತಿಂಗಳ ಆರಂಭದಲ್ಲಿ ಮುಸ್ಲಿಮರ ವಿರುದ್ಧ ಮಾಡಲಾದ ದ್ವೇಷಪೂರಿತ ಭಾಷಣಗಳು ಮತ್ತು ಹಿಂದೂಗಳು ಹಿಂಸಾಚಾರ ನಡೆಸುವಂತೆ ಕರೆ ನೀಡಿದ ಘಟನೆಯ ಕುರಿತು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

“ಸರ್ಕಾರವು ಇಂತಹ ಚಟುವಟಿಕೆಯನ್ನು ನಿಲ್ಲಿಸಬೇಕು. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಯಾವುದಾದರೂ ಕ್ರಮಗಳನ್ನು ತೆಗೆದುಕೊಂಡಿದೆಯೇ ಅಥವಾ ಇಲ್ಲವೇ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಹೇಳಿದ ನ್ಯಾಯಾಲಯವು, ದ್ವೇಷ ಭಾಷಣಕಾರರ ವಿರುದ್ಧ ತಕ್ಷಣವೇ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆಡಳಿತವನ್ನು ಕೇಳಿದೆ.

“ಈ ಬಗ್ಗೆ ಸರ್ಕಾರವು ಮೇ 7ರೊಳಗೆ ಅಫಿಡವಿಟ್ ಸಲ್ಲಿಸಬೇಕು. ಅಂತಹ ಘಟನೆಗಳನ್ನು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಅದು ಹೇಳಿದ್ದು, ಪ್ರಕರಣವನ್ನು ಮೇ 9 ರಂದು ವಿಚಾರಣೆ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ಈ ಘಟನೆಗಳು ಇದ್ದಕ್ಕಿದ್ದಂತೆ, ರಾತ್ರೋರಾತ್ರಿ ಸಂಭವಿಸುವುದಿಲ್ಲ. ಕಾರ್ಯಕ್ರಮಗಳನ್ನು ಮುಂಚಿತವಾಗಿ ಘೋಷಿಸಲಾಗಿರುತ್ತದೆ. ನೀವು ಆಗಿನಿಂದಲೇ ಏಕೆ ಕಾರ್ಯನಿರ್ವಹಿಸಲಿಲ್ಲ? ದ್ವೇಷ ಭಾಷಣಗಳ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಬುಧವಾರ ಉತ್ತರಾಖಂಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡುವುದಿಲ್ಲ ಮತ್ತು ನ್ಯಾಯಾಲಯದ ಆದೇಶಗಳ ಪ್ರಕಾರ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ” ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಕಳೆದ ಡಿಸೆಂಬರ್‌ನಲ್ಲಿ ಬಿಜೆಪಿ ಆಡಳಿತವಿರುವ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಮೂರು ದಿನಗಳ ಧರಮ್ ಸಂಸದ್‌ನಲ್ಲಿ ಪಾಲ್ಗೊಂಡ ದುಷ್ಕರ್ಮಿಗಳು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡಿದ್ದರು. ಈ ಭಾಷಣಗಳು ಮುಸ್ಲಿಮರ ನರಮೇಧಕ್ಕೆ ಕರೆ ನೀಡುವವರೆಗೂ ಹೋಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಪ್ರಕರಣ ದಾಖಲಾಗಿ ಬಂಧನಗಳು ನಡೆದವು.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಈ ತಿಂಗಳ ಆರಂಭದಲ್ಲಿ, ಕಾರ್ಯಕ್ರಮದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯತಿ ನರಸಿಂಹಾನಂದ್‌ ತನ್ನ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾನೆ. ಹಿಮಾಚಲ ಪ್ರದೇಶದ ಉನಾದ ‘ಧಾರ್ಮಿಕ ಸಮಾವೇಶ’ದಲ್ಲಿ ಮಾತನಾಡಿದ ದುಷ್ಕರ್ಮಿ, “ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳುವಂತೆ ಮತ್ತು ಮುಸ್ಲಿಮರ ಹತ್ಯೆಗಳನ್ನು ಮಾಡುವಂತೆ’ ಹಿಂದೂಗಳಿಗೆ ಬಹಿರಂಗವಾಗಿ ಕರೆ ನೀಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....