Homeರಾಷ್ಟ್ರೀಯ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ (ಇಂದು) ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ಪೀಠವು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಒಂದು ಅರ್ಜಿಯನ್ನು ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ ಮತ್ತು ಇನ್ನೊಂದು ಅರ್ಜಿಯನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿವೆ.

ಸ್ವಾತಂತ್ಯ್ರ ಹೋರಾಟದ ಸಮದಯಲ್ಲಿ ಮಹಾತ್ಮಾ ಗಾಂಧಿಯಂತಹವರನ್ನು ಮೌನಗೊಳಿಸಲು ಬ್ರಿಟಿಷರು ಬಳಸಿದ ನಿಬಂಧನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಕಾನೂನು ಪುಸ್ತಕದಲ್ಲಿ ಯಾಕೆ ಉಳಿದುಕೊಂಡಿವೆ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರವನ್ನು ಕೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ್ರೋಹವು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸೆಕ್ಷನ್ 124 ಎ ರದ್ದುಗೊಳಿಸುವಂತೆ ವಕೀಲರಾದ ಪಿ ಬಿ ಸುರೇಶ್ ಮತ್ತು ಪ್ರಸನ್ನ ಎಸ್ ಅವರು ಪ್ರತಿನಿಧಿಸಿದ ಜನರಲ್ (ನಿವೃತ್ತ) ವೊಂಬಟ್ಕೆರೆ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಕಿಶೋರ್ ಚಂದ್ರ ವಾಂಗ್ಕೆಮ್ಚಾ ಮತ್ತು ಶ್ರೀಮತಿ ಆಮೋದಾ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಇತರ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ಪೀಠವು ಹೇಳಿದೆ. ಈ ಎರಡೂ ಪ್ರಕರಣಗಳು ದೇಶದ್ರೋಹದ ಆರೋಪಗಳಿಗೆ ಸಂಬಂಧಿಸಿವೆ.

ಹಿರಿಯ ಪತ್ರಕರ್ತ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುವ ಎನ್‌ಜಿಒ ಕಾಮನ್ ಕಾಸ್ ಕೂಡ ಸೆಕ್ಷನ್ 124 ಎ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯು “ಸಂವಿಧಾನಪೂರ್ವ ಕಾನೂನುಗಳಿಗೆ ಸಾಂವಿಧಾನಿಕತೆಯ ಊಹೆಯು ಅನ್ವಯಿಸುವುದಿಲ್ಲ. ಯಾಕೆಂದರೆ ಆ ಕಾನೂನುಗಳು ವಿದೇಶಿ ಶಾಸಕಾಂಗ ಅಥವಾ ಸಂಸ್ಥೆಯಿಂದ ಮಾಡಲ್ಪಟ್ಟಿದೆ” ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....