Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....