Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...