Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...