Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...