Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...