Homeಮುಖಪುಟರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ರಾಜ್ಯಗಳು ವ್ಯಾಟ್‌ ಕಡಿತಗೊಳಿಸಿ ಇಂಧನ ಬೆಲೆ ಏರಿಕೆ ತಗ್ಗಿಸಿ: ಮೋದಿ ಮನವಿಯ ಹಿಂದಿನ ವಾಸ್ತವವೇನು?

ಕೆಲವು ರಾಜ್ಯಗಳ ಹೆಸರನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ ‘ವ್ಯಾಟ್‌‌’ (ಮೌಲ್ಯವರ್ಧಿತ ತೆರಿಗೆ) ಹೆಚ್ಚಳದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದಿದ್ದಾರೆ. ಆದರೆ ಮೋದಿನಾಮಿಕ್ಸ್‌ ವಾಸ್ತವಾಂಶಗಳು ಬೇರೆಯೇ ಇವೆ...

- Advertisement -
- Advertisement -

“ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ರಾಜ್ಯಗಳು ಕಡಿಮೆ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ದೇಶದ ವಿವಿಧ ನಗರಗಳಲ್ಲಿನ ಇಂಧನ ಬೆಲೆಗಳನ್ನು ಪಟ್ಟಿ ಮಾಡಿದ ಪ್ರಧಾನಿ ಮೋದಿ, “ವ್ಯಾಟ್ ಅನ್ನು ಕಡಿಮೆ ಮಾಡಿದ ರಾಜ್ಯಗಳು ಕಡಿಮೆ ಇಂಧನ ಬೆಲೆಗಳನ್ನು ಹೊಂದಿವೆ‘” ಎಂದು ತಿಳಿಸಿದ್ದಾರೆ.

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಸಹಕಾರಿ ‌ಒಕ್ಕೂಟ ವ್ಯವಸ್ಥೆಯ ಕುರಿತು ಮಾತನಾಡಿರುವ ಅವರು, “ದೇಶವು ಸಹಕಾರಿ ಒಕ್ಕೂಟದ ಮೂಲಕ ಕೋವಿಡ್ ವಿರುದ್ಧ ಸುದೀರ್ಘವಾಗಿ ಹೋರಾಡಿದೆ. ಜಾಗತಿಕ ಆರ್ಥಿಕ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೂ ಇದೇ ರೀತಿಯ ಸಹಕಾರ ಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಒಂದು ಸಣ್ಣ ಉದಾಹರಣೆ ಕೊಡುತ್ತೇನೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಮತ್ತು ಅದರ ಲಾಭವನ್ನು ಜನರಿಗೆ ವರ್ಗಾಯಿಸಲು ವಿನಂತಿಸಿದ್ದೇವೆ” ಎಂದಿದ್ದಾರೆ.

“ಕೆಲವು ರಾಜ್ಯಗಳು ತೆರಿಗೆ ಕಡಿತಗೊಳಿಸಿವೆ. ಆದರೆ ಕೆಲವು ರಾಜ್ಯಗಳು ಜನರಿಗೆ ಅನುಕೂಲ ಮಾಡಿಕೊಡಲಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚುತ್ತಲೇ ಇವೆ. ಇದು ಒಂದು ರೀತಿಯಲ್ಲಿ ಈ ರಾಜ್ಯಗಳ ಜನರಿಗೆ ಮಾತ್ರ ಅನ್ಯಾಯವಾಗಿದೆ. ಇದು ನೆರೆಯ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

ವ್ಯಾಟ್‌ ಕಡಿಮೆ ಮಾಡದ ರಾಜ್ಯಗಳನ್ನು ಪಟ್ಟಿ ಮಾಡಿರುವ ಮೋದಿ, “ನಾನು ಯಾರನ್ನೂ ಟೀಕಿಸುವುದಿಲ್ಲ, ಕೇವಲ ಚರ್ಚಿಸುತ್ತಿದ್ದೇನೆ” ಎಂದಿದ್ದಾರೆ. “ಯಾವುದೋ ಕಾರಣಕ್ಕಾಗಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್‌ನಂತಹ ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಲು ಒಪ್ಪಲಿಲ್ಲ. ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಬಿದ್ದಿದೆ” ಎಂದು ತಿಳಿಸಿದ್ದಾರೆ.

“ತಮ್ಮ ತೆರಿಗೆಯನ್ನು ಕಡಿಮೆ ಮಾಡುವ ರಾಜ್ಯಗಳು ಆದಾಯದಲ್ಲಿ ನಷ್ಟವನ್ನು ಅನುಭವಿಸುವುದು ಸಹಜ. ಆದರೆ ಹಲವಾರು ರಾಜ್ಯಗಳು ಏನಾದರಾಗಲಿ ಎಂದು ಸಕಾರಾತ್ಮಕ ಹೆಜ್ಜೆ ಇರಿಸಿವೆ” ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.

ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಉಲ್ಲೇಖಿಸಿರುವ ಪ್ರಧಾನಿ ಮೋದಿ, “ಕರ್ನಾಟಕವು ತೆರಿಗೆಯನ್ನು ಕಡಿತಗೊಳಿಸದಿದ್ದರೆ, ಕಳೆದ ಆರು ತಿಂಗಳ ಅವಧಿಯಲ್ಲಿ ಅದು ಹೆಚ್ಚುವರಿಯಾಗಿ ₹ 5,000 ಕೋಟಿಗಳಷ್ಟು ಆದಾಯವನ್ನು ಸಂಗ್ರಹಿಸುತ್ತಿತ್ತು. ಗುಜರಾತ್ ಕೂಡ ₹ 3,500-4,000 ಕೋಟಿಗಳಷ್ಟು ಹೆಚ್ಚು ಸಂಗ್ರಹಿಸುತ್ತಿತ್ತು” ಎಂದಿದ್ದಾರೆ. “ವ್ಯಾಟ್ ಅನ್ನು ಕಡಿಮೆ ಮಾಡದ ರಾಜ್ಯಗಳು ಸಾವಿರಾರು ಕೋಟಿ ಹೆಚ್ಚುವರಿ ಆದಾಯ ಗಳಿಸಿದವು” ಎಂದು ದೂರಿದ್ದಾರೆ.

ಮೋದಿನಾಮಿಕ್ಸ್‌ ವಾಸ್ತವವೇನು?

ಮೋದಿಯವರ ಅರ್ಥಶಾಸ್ತ್ರ ಪರಿಕಲ್ಪನೆಯ ಕುರಿತು ಪ್ರತಿಕ್ರಿಯೆ ನೀಡಿದ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ವಾಸ್ತವಾಂಶಗಳನ್ನು ‘ನಾನುಗೌರಿ.ಕಾಂ’ನೊಂದಿಗೆ ಹಂಚಿಕೊಂಡರು.

ರಾಜಕೀಯ ಹಾಗೂ ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌‌

“ಇಂಧನಗಳ ಮೇಲೆ ಕೇಂದ್ರ ಸರ್ಕಾರದ ತೆರಿಗೆ, ರಾಜ್ಯ ಸರ್ಕಾರ ವಿಧಿಸುವ ವ್ಯಾಟ್‌ ಎಷ್ಟಿದೆ ಎಂಬ ಟೇಬಲ್‌ಗಳು ಕಣ್ಣಮುಂದಿವೆ. ಕೇಂದ್ರದ ತೆರಿಗೆ ರಾಜ್ಯದ ತೆರಿಗೆಗಿಂತ ಯಾವಾಗಲೂ ದ್ವಿಗುಣವಾಗಿರುತ್ತದೆ. ಮೊದಲೆಲ್ಲ ಇದು ಕಡಿಮೆ ಇರುತ್ತಿತ್ತು. ಉದಾಹರಣೆಗೆ 2013ರಲ್ಲಿ 6 ರೂ. ರಾಜ್ಯದ ತೆರಿಗೆಯಾಗಿದ್ದರೆ, 13 ರೂ. ಕೇಂದ್ರದ ತೆರಿಗೆಯಾಗಿರುತ್ತಿತ್ತು. ಈಗ ಕೇಂದ್ರದ ತೆರಿಗೆ 32 ರೂ. ಆಗಿದೆ. ರಾಜ್ಯ ವಿಧಿಸುವ ತೆರಿಗೆ ಸರಾಸರಿ 19 ರೂ. ಇದೆ. ಕೇಂದ್ರದ ತೆರಿಗೆಯೇ ಹೆಚ್ಚಿದೆ” ಎಂದು ಶಿವಸುಂದರ್‌ ವಿವರಿಸಿದರು.

ಇದನ್ನೂ ಓದಿರಿ: 5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

ಮುಂದುವರಿದು, “ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯ ಸರ್ಕಾರಗಳಿಗೆ ಹೊಡೆತ ಬಿದ್ದಿದೆ. ಹಿಂದೆಲ್ಲ ಕಮರ್ಷಿಯಲ್‌‌ ಟ್ಯಾಕ್ಸ್‌, ಸೇಲ್ಸ್‌ ಟ್ಯಾಕ್ಸ್‌ ಸೇರಿದಂತೆ ಹಲವು ಟ್ಯಾಕ್ಸ್‌ಗಳಿದ್ದವು. ಅವುಗಳೆಲ್ಲ ಜಿಎಸ್‌ಟಿಯಲ್ಲಿ ವಿಲೀನವಾದವು. ಈಗ ಕೇಂದ್ರಕ್ಕೆ ತೆರಿಗೆ ಹೋಗಿ, ಅಲ್ಲಿಂದ ರಾಜ್ಯದ ಪಾಲು ಬರಬೇಕು. ಹೀಗಾಗಿ ರಾಜ್ಯಗಳು ಪೆಟ್ರೊಲಿಯಂ, ಲಿಕ್ಕರ್‌ ಮತ್ತು ಸ್ಟ್ಯಾಂಪ್‌ ಅಂಡ್ ಡ್ಯೂಟೀಸ್ ಮೂಲಗಳನ್ನು ಅವಲಂಭಿಸಿವೆ. ‘ನೇರ ತೆರಿಗೆ’ (ಡೈರೆಕ್ಟ್‌ ಟ್ಯಾಕ್ಸ್‌) ಕೂಡ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ. ರಾಜ್ಯ ಸರ್ಕಾರಗಳು ನೇರ ತೆರಿಗೆ ಹಾಕಲು ಸಾಧ್ಯವಿಲ್ಲ. ಒಟ್ಟಾರೆ ತೆರಿಗೆಯಲ್ಲಿ ಶೇ. 35ರಷ್ಟು ನೇರ ತೆರಿಗೆ ಬರುತ್ತದೆ. ಇದರಲ್ಲಿ ರಾಜ್ಯಕ್ಕೂ ಪಾಲಿರುತ್ತದೆ. ಮೊದಲು ಶೇ. 42 ರಾಜ್ಯಕ್ಕೆ ಪಾಲಿರುತ್ತಿತ್ತು. ಈಗ ಅದನ್ನು ಶೇ.32ಕ್ಕೆ ಇಳಿಸಿದ್ದಾರೆ. ಟ್ಯಾಕ್ಸ್‌ ಮೇಲೆ ಸೆಸ್‌ ಹಾಕುತ್ತಾರೆ. ಅದನ್ನು ರಾಜ್ಯಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಇಂಧನಗಳ ಮೇಲೆ ರಾಜ್ಯ ಸರ್ಕಾರಗಳು ತೆರಿಗೆ ಹಾಕದಿದ್ದರೆ ಬೇರೆ ದಾರಿಗಳಿಲ್ಲ. ಜಿಎಸ್‌ಟಿ ಸಿಸ್ಟಮ್‌ ಇದಕ್ಕೆ ಕಾರಣ. ಜಿಎಸ್‌ಟಿಯಲ್ಲೂ ಸರಿಯಾಗಿ ರಾಜ್ಯದ ಪಾಲು ಕೊಡುತ್ತಿಲ್ಲ. ಹೀಗಾಗಿ ಇಂಧನದ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಮೊದಲು ಇಳಿಸಿ ಮಾರ್ಗದರ್ಶಿಯಾಗಿ ಉಳಿಯಬೇಕು” ಎಂದರು.

“ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿ ತೆರಿಗೆಯನ್ನು ಇಳಿಸಿಲ್ಲ. ಕೋವಿಡ್ ನಂತರದ ಸ್ಥಿತಿಯನ್ನು ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿ ತೆರಿಗೆಯನ್ನು ಇಳಿಸಿದ್ದಾರೆಯೇ? ಜನರ ಜೇಬಲ್ಲಿ ಉಳಿದ ದುಡ್ಡು ಸರ್ಕಾರಕ್ಕೆ ನಷ್ಟ ಎಂದು ಹೇಳಲು ಸಾಧ್ಯವೆ? ಜನರು ಹಣವನ್ನು ಖರ್ಚು ಮಾಡುತ್ತಾರಲ್ಲವೇ? ಯಾವುದಕ್ಕೆ ಖರ್ಚು ಮಾಡಿದರೂ ಶೇ. 18 ತೆರಿಗೆಯನ್ನು ಕಟ್ಟುತ್ತಾರಲ್ಲವೇ? ಜನರ ಬಳಿ ಹಣ ಉಳಿಸಿಕೊಂಡರೆ ರಾಜ್ಯ ಸರ್ಕಾರಕ್ಕೆ ನಷ್ಟವಾಯಿತು ಎಂಬ ದೃಷ್ಟಿಕೋನವೇ ತಪ್ಪು” ಎಂದು ಎಚ್ಚರಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...