Homeಕರ್ನಾಟಕಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

ಲಿಂಗಾಯತ ಧರ್ಮ ಮಾನ್ಯತೆ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಗರಿಗೆದರಿದೆ

- Advertisement -
- Advertisement -

| ವಿಶ್ವಾರಾಧ್ಯ ಸತ್ಯಂಪೇಟೆ |

ಇದುವರೆಗೆ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ಸುಳಿಯುತ್ತಿದ್ದ ಲಿಂಗಾಯತ ಧರ್ಮ ಹೋರಾಟದ ಅಸ್ಮಿತೆಯ ಪ್ರಶ್ನೆ ಮತ್ತೆ ಬುಗಿಲೆದ್ದಿದೆ. ತೀರಾ ಇತ್ತೀಚೆಗೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ, ಎಂ.ಬಿ.ಪಾಟೀಲ ಹಾಗೂ ಕೆಲವು ಜನ ಶಾಸಕರು ಮುಖ್ಯ ಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯನ್ನು ಭೇಟಿಯಾಗಿ ವೀರಶೈವ/ಲಿಂಗಾಯತ ಧರ್ಮದ ಜನಾಂಗಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸರಕಾರಕ್ಕೆ ಸಲ್ಲಿಸಿದ ಮನವಿಯವನ್ನು ಗಮನಿಸಿದ ಜಾಗತಿಕ ಲಿಂಗಾಯತ ಮಹಾಸಭೆ ದಿಡೀರನೆ ತನ್ನ ಮಹಾಮಂಡಳದ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಪತ್ರಿಕಾ ಹೇಳಿಕೆ ನೀಡಿದೆ. ವೀರಶೈವ ಮಹಾಸಭೆ ಸರಕಾರಕ್ಕೆ ಸಲ್ಲಿಸಿರುವ ಬೇಡಿಕೆಯ ಬಗೆಗೆ ನಮಗೆ ಯಾವುದೆ ತಕರಾರು ಇಲ್ಲ. ಆದರೆ ಆ ಬೇಡಿಕೆಯಲ್ಲಿ ವೀರಶೈವ ಪದ ಸೇರಿಸಿದ್ದನ್ನು ಜಾಗತಿಕ ಲಿಂಗಾಯತ ಮಹಾಸಭೆ ಕಟುವಾಗಿ ಟೀಕಿಸಿದೆ.

2002 ಕ್ಕೂ ಪೂರ್ವದಲ್ಲಿ ಸರಕಾರದ ಯಾವುದೆ ದಾಖಲೆಯಲ್ಲಿ ಇಲ್ಲದ ವೀರಶೈವ ಪದವನ್ನು ಸೇರಿಸಿ ಸಮಾಜದಲ್ಲಿ ಗೊಂದಲವನ್ನುಂಟು ಮಾಡಿದೆ. ನಿಜಕ್ಕೂ ಬ್ರಿಟಿಷ್ ಆಡಳಿತದ ಸಂದರ್ಭದಿಂದ ಹಿಡಿದು ಸರಕಾರದ ಯಾವ ದಾಖಲೆಯಲ್ಲಿಯೂ ಇಲ್ಲದ ವೀರಶೈವ ಪದವನ್ನು ಅಂದಿನ ವೀರಶೈವ ಮಹಾಸಭೆಯ ಅಧ್ಯಕ್ಷ ಭೀಮಣ್ಣ ಖಂಡ್ರೆಯವರ ಕುತಂತ್ರದಿಂದ ಸರಕಾರದ ನೋಟಿಫಿಕೇಶನ್ ಪಡೆಯಿತು. ಇದಕ್ಕೆ ಬಹು ಮುಖ್ಯ ಕಾರಣ ಭೀಮಣ್ಣ ಖಂಡ್ರೆ ಹಾಗೂ ವೀರಶೈವ ಮಹಾಸಭೆಯೇ ಆಗಿದೆ.

ವೀರಶೈವ ಎಂಬುದು ಲಿಂಗಾಯತ ಧರ್ಮದಲ್ಲಿ ಕೇವಲ ಒಂದು ಮತ. ಮತ ಹೇಗೆ ಧರ್ಮವಾಗುತ್ತದೆ? ಎಂಬುದು ಬಹಳಷ್ಟು ಜನ ಹೋರಾಟಗಾರರ ಪ್ರಶ್ನೆಯಾಗಿದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನಗಳ ಎಳೆಯನ್ನು ಇಟ್ಟುಕೊಂಡು ಜನ್ಮ ತಳೆದ ಲಿಂಗಾಯತ ಧರ್ಮ, ಕರ್ಮಠರ ಕಪಿಮುಷ್ಠಿ ಮತ್ತು ಧಾರ್ಮಿಕ ಅತ್ಯಾಚಾರಿಗಳ ಕೈಯಲ್ಲಿ ನಲುಗಿ ಹೋದದ್ದು ಸುಳ್ಳಲ್ಲ. ಬಸವಣ್ಣನವರು ಇದ್ದಾಗ ಹೇಗೆ ಪುರೋಹಿತಶಾಹಿ ಅವರ ವಿಚಾರಗಳ ಮೇಲೆ ಬರ್ಬರ ಹತ್ಯೆ ನಡೆಸಲು ಯತ್ನಿಸಿದಂತೆ, ಈಗಲೂ ಅದನ್ನು ದಮನ ಮಾಡಲು ಸನ್ನದ್ದವಾಗಿ ನಿಂತುಕೊಂಡಿದೆ.

ಲಿಂಗಾಯತ ಧರ್ಮಕ್ಕೆ ಸಂಬಂಧವೇ ಪಡದ ಕಲ್ಲಡ್ಕ ಪ್ರಭಾಕರ ಭಟ್ಟ, ಆರ್.ಎಸ್.ಎಸ್.ನ ಸಂತೋಷ್, ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಹಾಗೂ ಪೇಜಾವರ ಮಹಾಸ್ವಾಮಿಗಳು ಸುಖಾ ಸುಮ್ಮನೆ ಮಾತನಾಡುತ್ತಾರೆ. ಲಿಂಗಾಯತ ಧರ್ಮ ಅಥವಾ ವಚನ ಸಾಹಿತ್ಯದ ಬಗೆಗೆ ಎಳ್ಳಷ್ಟು ಗೊತ್ತಿಲ್ಲದ ಇವರುಗಳು ತಲೆ ಬುಡವಿಲ್ಲದೆ ಆಳಿಗೊಂದು ಮಾತಾಡಿ ಲಿಂಗಾಯತರ ದಿಕ್ಕು ತಪ್ಪಿಸಲು ಹೊರಟಿದ್ದಾರೆ.

ಕೆಲವು ಪತ್ರಿಕೆ ಹಾಗೂ ದೃಶ್ಯ ಮಾಧ್ಯಮಗಳಂತೂ ಕೈತೊಳೆದುಕೊಂಡು ಬೆನ್ನು ಹತ್ತಿದವರಂತೆ ಮತ್ತೆ ಶುರುವಾದ ಪ್ರತ್ಯೇಕ ಧರ್ಮದ ಕೂಗು ಎಂದು ಉಯಿಲೆಬ್ಬಿಸಿ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿವೆ. ಲಿಂಗಾಯತ ಧರ್ಮದ ಗಂಧಗಾಳಿ ಗೊತ್ತಿಲ್ಲದ ಇವು ಕಾಕೊಳಿಯಾಗಿಯೂ ನವಿಲಿನಂತೆ ನರ್ತಿಸುವ ಸೋಜಿಗ ಎಂಥವರಿಗೂ ಗೊತ್ತಾಗುತ್ತಿದೆ.

ಇಷ್ಟಕ್ಕೂ ಲಿಂಗಾಯತ ಧರ್ಮದ ಹೋರಾಟಕ್ಕೆ ಬಹುತೇಕ ರಾಜಕಾರಣಿಗಳು, ಧಾರ್ಮಿಕ ಮುಖಂಡರು, ಸ್ವಹಿತಾಸಕ್ತಿ ಗುಂಪುಗಳು ಯಾಕೆ ವಿರೋಧಿಸುತ್ತಿವೆ? ಎಂಬ ಪ್ರಶ್ನೆಯನ್ನು ಎತ್ತಿಕೊಂಡರೆ ಅದಕ್ಕೊಂದು ತಾರ್ಕಿಕ ಉತ್ತರ ದೊರೆಯುತ್ತದೆ. ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರು ಕಟ್ಟಿದ ಲಿಂಗಾಯತ ಧರ್ಮ ಕಾಯಕ ಜೀವಿಗಳ ಸಂಘಟನೆ. ಇಲ್ಲಿ ಅವರವರ ಕಾಯಕದ ಅನುಭವವೆ ಪ್ರಮಾಣು. ಶಾಸ್ತ್ರ, ಪುರಾಣ, ವೇದಾಂತಗಳೆಲ್ಲ ಕಟ್ಟುಕತೆಗಳು ಎಂಬುದು ಅವರಿಗೆಲ್ಲ ಮನದಟ್ಟಾಗಿತ್ತು. ವೇದವೆಂಬುದು ಓದಿನ ಮಾತು ಎಂಬುದು ಖಚಿತ. ವೇದ ಶಾಸ್ತ್ರ ಪುರಾಣ ಪ್ರಾಮಣ್ಯ ಒಪ್ಪದ ದುಡಿಯುವ ಜನ ತಮಗಾಗಿ ಕಟ್ಟಿಕೊಂಡ ಚಳುವಳಿಯ ಹೆಸರು ಲಿಂಗಾಯತ.

ಹೀಗಾಗಿ ಹನ್ನೆರಡನೆಯ ಶತಮಾನದಿಂದ ಇಲ್ಲಿಯವರೆಗೂ ಲಿಂಗಾಯತ ಧರ್ಮದ ಅಸ್ಮಿತೆಯನ್ನು ಮರೆ ಮಾಡುತ್ತಲೆ ಬಂದಿದೆ. ತೀರಾ ಇತ್ತೀಚೆಗೆ ಲಿಂಗಾಯತ ಧರ್ಮಿಯರಿಗೆ ವಚನ ಪ್ರಜ್ಞೆ ಮೂಡುತ್ತಿರುವಂತೆ ಮತ್ತೆ ಮತ್ತೆ ಹೋರಾಟದ ಕಿಚ್ಚು ಹುಟ್ಟಿಕೊಂಡಿದೆ. ಇದು ಯಾವುದೋ ರಾಜಕೀಯ ಒತ್ತಡಗಳಿಂದ ಪ್ರೇರಿತವಾದ ಕಿಚ್ಚಾಗಿದ್ದರೆ ಇಷ್ಟೊತ್ತಿಗೆ ಅದು ತಣ್ಣಗಾಗಿ ಹಳೆ ಕತೆಯಾಗುತ್ತಿತ್ತು. ಒಡಲಿನಿಂದ ಹೊಮ್ಮಿದ ಹೋರಾಟ ಯಾರೋ ನಾಲ್ಕು ಜನ ಪಡಪೋಶಿಗಳ ಮಾತಿಗೆ ತಲೆ ಬಾಗಿಸುವುದಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದ ಮೊಟ್ಟ ಮೊದಲ ಕನ್ನಡದ ಧರ್ಮ ಲಿಂಗಾಯತ. ಈ ಲಿಂಗಾಯತಕ್ಕೆ ಮಾದಾರ ಚೆನ್ನಯ್ಯ, ಡೋಹಾರ ಕಕ್ಕಯ್ಯ, ಸಮಗಾರ ಹರಳಯ್ಯ, ಹೊಲಿಯರ ನಾಗಿದೇವ, ಸೂಳೆ ಸಂಕವ್ವೆ, ಅಕ್ಕಮಹಾದೇವಿ, ಅಲ್ಲಮಪ್ರಭು,ಚೆನ್ನಬಸವಣ್ಣ, ಕದಿರೆಯ ರೆಮ್ಮವ್ವ ಮುಂತಾದವರೆಲ್ಲ ಬಸವಣ್ಣನವರ ನೇತೃತ್ವದಲ್ಲಿ ಕಟ್ಟಿದ ಅನುಭಾವಿಕ ಚಳುವಳಿ. ನಮ್ಮ ನಾಡಿದ ವಿಸ್ಮೃತಿ ಅಡಗಿರುವುದು ವಚನ ಸಾಹಿತ್ಯದ ಅನುಭಾವದ ಒಡಲಲ್ಲಿ ಎಂಬುದನ್ನು ಯಾರೂ ಮರೆಯುವಂತೆ ಇಲ್ಲ.

ಏಕಕಾಲಕ್ಕೆ ಪುರೋಹಿತಶಾಹಿ, ರಾಜಶಾಹಿ, ಮತ್ತು ಪಟ್ಟಭದ್ರರ ವಿರುದ್ಧ ಸಿಡಿದ ಸಿಡಿಗುಂಡುಗಳು ವಚನ ಸಾಹಿತ್ಯ. ವಚನ ಸಾಹಿತ್ಯದ ಪ್ರಜ್ಞೆ ಎಂದರೆ ಅದು ಸಕಲ ಜೀವಾತ್ಮರಿಗೆ ಲೇಸ ಬಯಸುವ ಪ್ರಜ್ಞೆ. ಈ ಪ್ರಜ್ಞೆ ಎಲ್ಲರಲ್ಲಿ ಮೂಡಿದರೆ ತಮ್ಮ ಕರಾಳ ಕೆಲಸಗಳಿಗೆ, ಧರ್ಮದ ಹೆಸರಿನ ನಂಗಾನಾಚ ಬಯಲಾಗಬಾರದು ಎಂಬುದು ಬಹುತೇಕರ ವಾಂಛೆ. ಆದ್ದರಿಂದಲೆ ಲಿಂಗಾಯತ ಧರ್ಮದ ಹೋರಾಟವನ್ನು ರಾಜಕೀಯ ಹೋರಾಟ ಎಂದು ದಿಕ್ಕು ತಪ್ಪಿಸಲು ಯತ್ನಿಸಿದರು. ಕೆಲವರಂತೂ ಧರ್ಮ ಒಡೆಯುವ ಷಡ್ಯಂತ್ರ ಎಂದೂ ದೂರಿದರು. ಇದರಲ್ಲಿ ಯಶಸ್ವಿಯೂ ಆದರು.

ಆದರೆ ಸತ್ಯಕ್ಕೆ ಶಕ್ತಿ ಹೆಚ್ಚು ಮತ್ತು ಅದು ಸಶಕ್ತವಾಗಿ ಪೆಡಸಿನಿಂದ ಹೊರ ಹೊಮ್ಮುತ್ತದೆ ಎಂಬುದಕ್ಕೆ ಸಾಕ್ಷಿಯಂತೆ ಬೆಂಗಳೂರಿನ ಬಸವ ಸಮಿತಿಯ ಅರಿವಿನ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಮೀಟಿಂಗ್ ಸಾಕ್ಷಿಯಾಗಿತ್ತು. ರಾಷ್ಟ್ರೀಯ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿ ಶಿವಾನಂದ ಜಾಮದಾರ ನಮ್ಮ ದೇಶದ ಸರ್ವೋಚ್ಛ ನ್ಯಾಯಾಲಯಕ್ಕೆ ಅಪೀಲು ಹೋಗುವ ಕುರಿತು ವಿವರವಾಗಿ ಮಾಹಿತಿ ಒದಗಿಸಿದರು.

ಲಿಂಗಾಯತ ಜನ ಸಮುದಾಯದಲ್ಲಿ ಇಂದಿಗೂ ಇರಬಹುದಾದ ಕೆಲವು ಗೊಂದಲಗಳಿಗೆ ಉತ್ತರವಾಗಿ 7-8 ಪುಸ್ತಕಗಳನ್ನು ಸಾವಿರ ಸಾವಿರ ಪ್ರತಿಗಳಲ್ಲಿ ಮುದ್ರಿಸುವುದಾಗಿ ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ಧರಾಮ ಸ್ವಾಮಿಗಳು, ಡಾ.ಬಸವಲಿಂಗ ಪಟ್ಟದ್ದೇವರು, ಕೂಡಲಸಂಗಮದ ಜಯ ಮೃತ್ಯುಂಜಯ ಜಗದ್ಗುರುಗಳು, ಚೆನ್ನಬಸವಾನಂದ ಸ್ವಾಮೀಜಿ ಕೂಡಲ ಸಂಗಮ ಮುಂತಾದ ಮಠಾಧೀಶರು ನೂರಾರು ಜನ ಪ್ರಗತಿ ಪರರು, ವಿಚಾರವಾದಿಗಳು, ಜಾಗತಿಕ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು ತೊಡೆತಟ್ಟಿ ನಿಂತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...