Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ತಿಳಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಅವರ ‘ಐಯಾಮ್‌ ಆರ್‌’ ಸಿನಿಮಾದ ಟೈಟಲ್‌ ಲಾಂಚ್‌ನಲ್ಲಿ ಮಾತನಾಡಿದ್ದ ನಟ ಕಿಚ್ಚ ಸುದೀಪ್‌, ನಿರೂಪಕಿಯ ಮಾತಿಗೆ ಪ್ರತಿಕ್ರಿಯೆ ನೀಡುತ್ತಾ,  “ಪ್ಯಾನ್‌ ಇಂಡಿಯಾ ಸಿನಿಮಾವನ್ನು ಕನ್ನಡದಲ್ಲಿ ಮಾಡಲಾಗಿದೆ ಎಂದು ಹೇಳಿದ್ದೀರಿ. ಒಂದು ಸಣ್ಣ ಕರೆಕ್ಷನ್. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ. ಬಾಲಿವುಡ್‌ ಮಂದಿ ಈಗ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿ ಅದನ್ನು ಎಲ್ಲಾ ಕಡೆ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನಮ್ಮ ಚಿತ್ರ ಈಗ ಎಲ್ಲಾ ಭಾಷೆಗಳಿಗೂ ಹೋಗುತ್ತಿದೆ” ಎಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದಕ್ಕೆ ಸುದೀಪ್‌ ಪೆಟ್ಟು ನೀಡಿದ್ದನ್ನು ಆಕ್ಷೇಪ ವ್ಯಕ್ತಪಡಿಸಿ ಅಜಯ್ ದೇವಗನ್‌ ಟ್ವೀಟ್ ಮಾಡಿದ್ದು, ಅದಕ್ಕೂ ಸುದೀಪ್‌ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಕೇಳಿದ್ದಾರೆ.

“ಸರ್‌, ನಾನು ಯಾಕೆ ಇದನ್ನು ಹೇಳಿದೆ ಎಂಬುದು ನಿಮಗೆ ಅರ್ಥವಾಗಿಲ್ಲ. ನಿಮ್ಮನ್ನು ನೇರವಾಗಿ ಭೇಟಿಯಾದಾಗ ತಿಳಿಸುವೆ. ನೋವು ನೀಡುವುದಕ್ಕಾಗಲೀ ನೀಡಲಾಗಲೀ, ಪ್ರಚೋದನೆಗಾಗಲೀ, ಯಾವುದೇ ಚರ್ಚೆ ಹುಟ್ಟುಹಾಕುವುದಕ್ಕಾಗಿ ಈ ಮಾತು ಹೇಳಿಲ್ಲ. ನಾನು ಎಲ್ಲ ಭಾಷೆಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೇವಗನ್‌ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.

“ಮಿಸ್ಟರ್‌ ದೇವಗನ್‌, ದಕ್ಷಿಣ ಭಾರತದಲ್ಲಿ ನಾವು ಯಾವುದೇ ಸಮಯದಲ್ಲಿ ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸುವುದಿಲ್ಲ. ಹಿಂದಿ ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿದೆ. ಹಿಂದಿಯೇತರ ರಾಜ್ಯಗಳು ರಾಷ್ಟ್ರಕ್ಕೆ ಹೆಚ್ಚು ಆದಾಯ ಮತ್ತು ಜಿಎಸ್‌ಟಿ ನೀಡುತ್ತಿವೆಯೇ ಹೊರತು ಹಿಂದಿ ರಾಜ್ಯಗಳಲ್ಲ” ಎಂದು ವಿಕ್ಕಿ ಎಂಬವರು ಪ್ರತಿಕ್ರಿಯೆ ನೀಡಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ. ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ” ಎಂದು ಕತ್ಯುಶಾ ಎಂಬವರು ಆಗ್ರಹಿಸಿದ್ದಾರೆ.

ಎರಡು ವಿಷಯಗಳನ್ನು ಕನ್ನಡಿಗ ಸಜಿತ್‌ ಪ್ರಸ್ತಾಪಿಸಿದ್ದಾರೆ. “1) ಗುಟ್ಕಾ ಜಾಹೀರಾತು ನಿಲ್ಲಿಸಿ. 2) ಸಂವಿಧಾನವನ್ನು ಓದಿ. ಭಾರತಕ್ಕೆ  ರಾಷ್ಟ್ರೀಯ ಭಾಷೆ ಇಲ್ಲ ಎಂದು ನೀವೇ ತಿಳಿದುಕೊಳ್ಳಿ. ಹಿಂದಿ “ಕೇಂದ್ರ ಸರ್ಕಾರದ” ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದ್ದಾರೆ.

ಹೀಗೆ ಅನೇಕರು ದೇವಗನ್‌ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...