Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ತಿಳಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಅವರ ‘ಐಯಾಮ್‌ ಆರ್‌’ ಸಿನಿಮಾದ ಟೈಟಲ್‌ ಲಾಂಚ್‌ನಲ್ಲಿ ಮಾತನಾಡಿದ್ದ ನಟ ಕಿಚ್ಚ ಸುದೀಪ್‌, ನಿರೂಪಕಿಯ ಮಾತಿಗೆ ಪ್ರತಿಕ್ರಿಯೆ ನೀಡುತ್ತಾ,  “ಪ್ಯಾನ್‌ ಇಂಡಿಯಾ ಸಿನಿಮಾವನ್ನು ಕನ್ನಡದಲ್ಲಿ ಮಾಡಲಾಗಿದೆ ಎಂದು ಹೇಳಿದ್ದೀರಿ. ಒಂದು ಸಣ್ಣ ಕರೆಕ್ಷನ್. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ. ಬಾಲಿವುಡ್‌ ಮಂದಿ ಈಗ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿ ಅದನ್ನು ಎಲ್ಲಾ ಕಡೆ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನಮ್ಮ ಚಿತ್ರ ಈಗ ಎಲ್ಲಾ ಭಾಷೆಗಳಿಗೂ ಹೋಗುತ್ತಿದೆ” ಎಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದಕ್ಕೆ ಸುದೀಪ್‌ ಪೆಟ್ಟು ನೀಡಿದ್ದನ್ನು ಆಕ್ಷೇಪ ವ್ಯಕ್ತಪಡಿಸಿ ಅಜಯ್ ದೇವಗನ್‌ ಟ್ವೀಟ್ ಮಾಡಿದ್ದು, ಅದಕ್ಕೂ ಸುದೀಪ್‌ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಕೇಳಿದ್ದಾರೆ.

“ಸರ್‌, ನಾನು ಯಾಕೆ ಇದನ್ನು ಹೇಳಿದೆ ಎಂಬುದು ನಿಮಗೆ ಅರ್ಥವಾಗಿಲ್ಲ. ನಿಮ್ಮನ್ನು ನೇರವಾಗಿ ಭೇಟಿಯಾದಾಗ ತಿಳಿಸುವೆ. ನೋವು ನೀಡುವುದಕ್ಕಾಗಲೀ ನೀಡಲಾಗಲೀ, ಪ್ರಚೋದನೆಗಾಗಲೀ, ಯಾವುದೇ ಚರ್ಚೆ ಹುಟ್ಟುಹಾಕುವುದಕ್ಕಾಗಿ ಈ ಮಾತು ಹೇಳಿಲ್ಲ. ನಾನು ಎಲ್ಲ ಭಾಷೆಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೇವಗನ್‌ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.

“ಮಿಸ್ಟರ್‌ ದೇವಗನ್‌, ದಕ್ಷಿಣ ಭಾರತದಲ್ಲಿ ನಾವು ಯಾವುದೇ ಸಮಯದಲ್ಲಿ ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸುವುದಿಲ್ಲ. ಹಿಂದಿ ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿದೆ. ಹಿಂದಿಯೇತರ ರಾಜ್ಯಗಳು ರಾಷ್ಟ್ರಕ್ಕೆ ಹೆಚ್ಚು ಆದಾಯ ಮತ್ತು ಜಿಎಸ್‌ಟಿ ನೀಡುತ್ತಿವೆಯೇ ಹೊರತು ಹಿಂದಿ ರಾಜ್ಯಗಳಲ್ಲ” ಎಂದು ವಿಕ್ಕಿ ಎಂಬವರು ಪ್ರತಿಕ್ರಿಯೆ ನೀಡಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ. ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ” ಎಂದು ಕತ್ಯುಶಾ ಎಂಬವರು ಆಗ್ರಹಿಸಿದ್ದಾರೆ.

ಎರಡು ವಿಷಯಗಳನ್ನು ಕನ್ನಡಿಗ ಸಜಿತ್‌ ಪ್ರಸ್ತಾಪಿಸಿದ್ದಾರೆ. “1) ಗುಟ್ಕಾ ಜಾಹೀರಾತು ನಿಲ್ಲಿಸಿ. 2) ಸಂವಿಧಾನವನ್ನು ಓದಿ. ಭಾರತಕ್ಕೆ  ರಾಷ್ಟ್ರೀಯ ಭಾಷೆ ಇಲ್ಲ ಎಂದು ನೀವೇ ತಿಳಿದುಕೊಳ್ಳಿ. ಹಿಂದಿ “ಕೇಂದ್ರ ಸರ್ಕಾರದ” ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದ್ದಾರೆ.

ಹೀಗೆ ಅನೇಕರು ದೇವಗನ್‌ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...