Homeಕರ್ನಾಟಕಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

ಹಿಂದಿ ರಾಷ್ಟ್ರೀಯ ಭಾಷೆಯಲ್ಲ: ಸುದೀಪ್‌ ಹೇಳಿಕೆಗೆ ಅಜಯ್‌ ದೇವಗನ್‌ ಆಕ್ಷೇಪ- ಜನರ ತರಾಟೆ

- Advertisement -
- Advertisement -

“ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ” ಎಂದು ಕನ್ನಡದ ಜನಪ್ರಿಯ ನಟ ಕಿಚ್ಚ ಸುದೀಪ್‌ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ಅಜಯ್‌ ದೇವಗನ್‌ “ಹಿಂದಿ ರಾಷ್ಟ್ರೀಯ ಭಾಷೆ” ಎಂದು ತಿಳಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅಜಯ್ ದೇವಗನ್‌, “ಸಹೋದರ ಕಿಚ್ಚ ಸುದೀಪ್‌, ನಿಮ್ಮ ಪ್ರಕಾರ ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದಾದರೆ ನಿಮ್ಮ ಮಾತೃಭಾಷೆಯ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಿ ಯಾಕೆ ಬಿಡುಗಡೆ ಮಾಡುತ್ತೀರಿ? ಹಿಂದಿ ನಮ್ಮ ಮಾತೃಭಾಷೆ ಮತ್ತು ರಾಷ್ಟ್ರಭಾಷೆ ಆಗಿದೆ. ಇಂದು ಮತ್ತು ಎಂದೆಂದೂ ಆಗಿರುತ್ತದೆ” ಎಂದಿದ್ದಾರೆ.

ರಾಮ್‌ಗೋಪಾಲ್ ವರ್ಮಾ ಹಾಗೂ ಉಪೇಂದ್ರ ಅವರ ‘ಐಯಾಮ್‌ ಆರ್‌’ ಸಿನಿಮಾದ ಟೈಟಲ್‌ ಲಾಂಚ್‌ನಲ್ಲಿ ಮಾತನಾಡಿದ್ದ ನಟ ಕಿಚ್ಚ ಸುದೀಪ್‌, ನಿರೂಪಕಿಯ ಮಾತಿಗೆ ಪ್ರತಿಕ್ರಿಯೆ ನೀಡುತ್ತಾ,  “ಪ್ಯಾನ್‌ ಇಂಡಿಯಾ ಸಿನಿಮಾವನ್ನು ಕನ್ನಡದಲ್ಲಿ ಮಾಡಲಾಗಿದೆ ಎಂದು ಹೇಳಿದ್ದೀರಿ. ಒಂದು ಸಣ್ಣ ಕರೆಕ್ಷನ್. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ. ಬಾಲಿವುಡ್‌ ಮಂದಿ ಈಗ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಿ ಅದನ್ನು ಎಲ್ಲಾ ಕಡೆ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಆದರೆ ನಮ್ಮ ಚಿತ್ರ ಈಗ ಎಲ್ಲಾ ಭಾಷೆಗಳಿಗೂ ಹೋಗುತ್ತಿದೆ” ಎಂದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದಿ ರಾಷ್ಟ್ರೀಯ ಭಾಷೆ ಎಂಬ ವಾದಕ್ಕೆ ಸುದೀಪ್‌ ಪೆಟ್ಟು ನೀಡಿದ್ದನ್ನು ಆಕ್ಷೇಪ ವ್ಯಕ್ತಪಡಿಸಿ ಅಜಯ್ ದೇವಗನ್‌ ಟ್ವೀಟ್ ಮಾಡಿದ್ದು, ಅದಕ್ಕೂ ಸುದೀಪ್‌ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಹಿಂದಿಯಲ್ಲಿ ಕಳುಹಿಸಿದ ಟೆಕ್ಸ್ಟ್‌‌ ನನಗೆ ಅರ್ಥವಾಯಿತು. ನಾವೆಲ್ಲರೂ ಗೌರವಿಸಿದ್ದೇವೆ, ಪ್ರೀತಿಸುತ್ತೇವೆ ಮತ್ತು ಹಿಂದಿಯನ್ನು ಕಲಿತಿದ್ದೇವೆ. ತಪ್ಪಿಲ್ಲ ಸರ್, ಆದರೆ ನನ್ನ ಪ್ರತಿಕ್ರಿಯೆಯನ್ನು ಕನ್ನಡದಲ್ಲಿ ಟೈಪ್ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಆಶ್ಚರ್ಯವಾಗುತ್ತಿದೆ. ನಾವೂ ಭಾರತಕ್ಕೆ ಸೇರಿದವರಲ್ಲವೇ ಸರ್” ಎಂದು ಕೇಳಿದ್ದಾರೆ.

“ಸರ್‌, ನಾನು ಯಾಕೆ ಇದನ್ನು ಹೇಳಿದೆ ಎಂಬುದು ನಿಮಗೆ ಅರ್ಥವಾಗಿಲ್ಲ. ನಿಮ್ಮನ್ನು ನೇರವಾಗಿ ಭೇಟಿಯಾದಾಗ ತಿಳಿಸುವೆ. ನೋವು ನೀಡುವುದಕ್ಕಾಗಲೀ ನೀಡಲಾಗಲೀ, ಪ್ರಚೋದನೆಗಾಗಲೀ, ಯಾವುದೇ ಚರ್ಚೆ ಹುಟ್ಟುಹಾಕುವುದಕ್ಕಾಗಿ ಈ ಮಾತು ಹೇಳಿಲ್ಲ. ನಾನು ಎಲ್ಲ ಭಾಷೆಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ದೇವಗನ್‌ ಹೇಳಿಕೆಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂಬುದನ್ನು ಮತ್ತೆ ನೆನಪಿಸಿದ್ದಾರೆ.

“ಮಿಸ್ಟರ್‌ ದೇವಗನ್‌, ದಕ್ಷಿಣ ಭಾರತದಲ್ಲಿ ನಾವು ಯಾವುದೇ ಸಮಯದಲ್ಲಿ ಹಿಂದಿಯನ್ನು ನಮ್ಮ ರಾಷ್ಟ್ರೀಯ ಭಾಷೆಯನ್ನಾಗಿ ಸ್ವೀಕರಿಸುವುದಿಲ್ಲ. ಹಿಂದಿ ಅಧಿಕೃತ ಭಾಷೆಯಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿದೆ. ಹಿಂದಿಯೇತರ ರಾಜ್ಯಗಳು ರಾಷ್ಟ್ರಕ್ಕೆ ಹೆಚ್ಚು ಆದಾಯ ಮತ್ತು ಜಿಎಸ್‌ಟಿ ನೀಡುತ್ತಿವೆಯೇ ಹೊರತು ಹಿಂದಿ ರಾಜ್ಯಗಳಲ್ಲ” ಎಂದು ವಿಕ್ಕಿ ಎಂಬವರು ಪ್ರತಿಕ್ರಿಯೆ ನೀಡಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ. ಹಿಂದಿ ನನ್ನ ಮಾತೃಭಾಷೆಯಲ್ಲ. ಇದು ಕೇವಲ 23 ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. 2021 ರಲ್ಲಿ ದಕ್ಷಿಣ ಭಾರತದ ಚಲನಚಿತ್ರಗಳು ₹2,400 ಕೋಟಿ ಮತ್ತು ಬಾಲಿವುಡ್ ಕೇವಲ ₹800 ಕೋಟಿ ಗಳಿಸಿವೆ. ಬಡಾಯಿ ಕೊಚ್ಚಿಕೊಳ್ಳುವುದನ್ನು ನಿಲ್ಲಿಸಿ” ಎಂದು ಕತ್ಯುಶಾ ಎಂಬವರು ಆಗ್ರಹಿಸಿದ್ದಾರೆ.

ಎರಡು ವಿಷಯಗಳನ್ನು ಕನ್ನಡಿಗ ಸಜಿತ್‌ ಪ್ರಸ್ತಾಪಿಸಿದ್ದಾರೆ. “1) ಗುಟ್ಕಾ ಜಾಹೀರಾತು ನಿಲ್ಲಿಸಿ. 2) ಸಂವಿಧಾನವನ್ನು ಓದಿ. ಭಾರತಕ್ಕೆ  ರಾಷ್ಟ್ರೀಯ ಭಾಷೆ ಇಲ್ಲ ಎಂದು ನೀವೇ ತಿಳಿದುಕೊಳ್ಳಿ. ಹಿಂದಿ “ಕೇಂದ್ರ ಸರ್ಕಾರದ” ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ” ಎಂದು ತಿಳಿಸಿದ್ದಾರೆ.

ಹೀಗೆ ಅನೇಕರು ದೇವಗನ್‌ ಅವರ ವಾದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...