Homeದಲಿತ್ ಫೈಲ್ಸ್ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ - ಕಣ್ಮುಚ್ಚಿ ಕುಳಿತ ತಾಲ್ಲೂಕು...

ಕೆ.ಆರ್ ಪೇಟೆ: ದಲಿತರು ರಸ್ತೆ ಬಳಸದಂತೆ ಸವರ್ಣಿಯ ಕುಟುಂಬದಿಂದ ಅಡ್ಡಿ – ಕಣ್ಮುಚ್ಚಿ ಕುಳಿತ ತಾಲ್ಲೂಕು ಆಡಳಿತ

- Advertisement -
- Advertisement -

ದಲಿತ ಕುಟುಂಬಗಳು ತಮಗಾಗಿ ನಿರ್ಮಿಸಿದ ರಸ್ತೆಯಲ್ಲಿ ಓಡಾಡಲು ಸವರ್ಣಿಯ ಕುಟುಂಬದವರು ಅಡ್ಡಿಪಡಿಸುತ್ತಿರುವ, ಅದನ್ನು ಬಗೆಹರಿಸುವಂತೆ ತಾಲ್ಲೂಕು ಆಡಳಿತಕ್ಕೆ ಹಲವು ಮನವಿ ಮಾಡಿದರೂ ಸ್ಪಂದಿಸದಿರುವ ಅಮಾನವೀಯ ಪ್ರಕರಣ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನಲ್ಲಿ ಜರುಗಿದೆ.

ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಪುಟ್ಟ ಗ್ರಾಮದ ಹೆಸರು ಅರೇನಹಳ್ಳಿ ಕಾಲೋನಿ. ಇಲ್ಲಿ 20 ಕ್ಕೂ ಹೆಚ್ಚು ದಲಿತ ಕುಟುಂಬಗಳು ಸುಮಾರು 150 ವರ್ಷದ ಹಿಂದಿನಿಂದಲೂ ವಾಸಿಸುತ್ತಾ ಬಂದಿವೆ. ಅವರ ಬಹುದಿನದ ಬೇಡಿಕೆಯಿಂದ 2018-19ರಲ್ಲಿ ಸರ್ಕಾರದ ವತಿಯಿಂದ ಕಾಂಕ್ರೀಟ್ ರಸ್ತೆಯೇನೊ ನಿರ್ಮಾಣವಾಗಿದೆ. ಆದರೆ ಆ ರಸ್ತೆಯಲ್ಲಿ ದಲಿತರು ಓಡಾಡುವಂತಿಲ್ಲ. ಏಕೆಂದರೆ ಅಲ್ಲಿಯೇ ಪಕ್ಕದಲ್ಲಿ ಮನೆ ಕಟ್ಟಿಕೊಂಡಿರುವ ತಮ್ಮೆಗೌಡ ಎಂಬ ಒಕ್ಕಲಿಗ ಸಮುದಾಯದ ಕುಟುಂಬದವರು ರಸ್ತೆಯ ಎರಡೂ ಬದಿಗೂ ತೆಂಗಿನ ಗರಿಗಳನ್ನು ಸುರಿದು ರಸ್ತೆಯನ್ನು ಮುಚ್ಚಿಬಿಟ್ಟಿದ್ದಾರೆ. ಇದರಿಂದ ಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳು ಬೀರುವಳ್ಳಿ ಗ್ರಾಮ ಪಂಚಾಯ್ತಿಗೆ, ತಹಶೀಲ್ದಾರ್‌ರವರಿಗೆ ಹಲವಾರು ಮನವಿ ಮಾಡಿದರೂ ಪ್ರಯೋಜನವಾಗದೆ ದಿಕ್ಕುಕಾಣದಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಗ್ರಾಮದ ಯುವಕ ಶಂಕರ್, “ಮೂರು ವರ್ಷದ ಹಿಂದೆ ಎಸ್‌ಸಿಪಿ ಯೋಜನೆಯಡಿ ನಮ್ಮ ಕಾಲೋನಿಗೆ ಸರ್ವೆ ನಂಬರ್ 25 ರಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಮಾಡಲಾಯಿತು. ಆದರೆ ರಸ್ತೆ ಮಾಡಲು ತಮ್ಮ ಜಮೀನಿನ ಕೆಲ ಭಾಗ ಬಿಟ್ಟುಕೊಟ್ಟಿರುವ ತಮ್ಮೆಗೌಡ ಎಂಬುವವರ ಕುಟುಂಬ ತಮಗೆ ಸಮರ್ಪಕ ಪರಿಹಾರ ಸಿಕ್ಕಿಲ್ಲ ಎಂದು ರಸ್ತೆಯ ಎರಡೂ ಬದಿಗೆ ತೆಂಗಿನ ಮೊಟ್ಟೆಗಳನ್ನು ಸುರಿದು ರಸ್ತೆ ಮುಚ್ಚಿದ್ದಾರೆ. ಈ ಕುರಿತು ಗ್ರಾಮ ಪಂಚಾಯ್ತಿಯ ಪಿಡಿಓರವರನ್ನು ಕೇಳಿದರೆ ತಮ್ಮೆಗೌಡರು ಮನೆ ಕಟ್ಟಿಕೊಳ್ಳಲು ಎಸ್‌ಸಿಪಿ ಯೋಜನೆಯಡಿ 5 ಲಕ್ಷ ರೂ ಅನುದಾನ ನೀಡಿದ್ದೇವೆ. ಹಾಗಾಗಿ ಅವರಿಗೆ ಪರಿಹಾರ ಕೊಟ್ಟಾಂತಾಗಿದೆ ಎನ್ನುತ್ತಾರೆ. ತಹಶೀಲ್ದಾರರಿಗೆ ಎರಡು ಬಾರಿ ಮನವಿ ಮಾಡಿದರೂ ಅವರು ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಈ ನಮ್ಮ ಪುಟ್ಟ ಗ್ರಾಮದಲ್ಲಿ ಕೆಲವೇ ದಲಿತ ಕುಟುಂಬಗಳಿವೆ. ಅವರ್ಯಾರು ಸಮರ್ಣಿಯರ ವಿರುದ್ಧ ಮಾತನಾಡುವ ಧೈರ್ಯ ಹೊಂದಿಲ್ಲ. ಗ್ರಾಮ ಪಂಚಾಯ್ತಿಗೆ ದೂರು ಕೊಟ್ಟಿದ್ದೇವೆ. ಗ್ರಾಮ ಪಂಚಾಯ್ತಿಯು ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ರಸ್ತೆ ತೆರವು ಮಾಡಿಕೊಡಬೇಕೆಂದು ತಹಶೀಲ್ದಾರ್‌ರವರಿಗೆ ಒಂದೂವರೆ ತಿಂಗಳ ಹಿಂದೆಯೆ ಪತ್ರ ಬರೆದಿದೆ. ಆದರೆ ಸಮಸ್ಯೆ ಮಾತ್ರ ಇದುವರೆಗೂ ಬಗೆಹರಿದಿಲ್ಲ. ನಮ್ಮನ್ನು ಈ ರೀತಿಯ ಮೂಲಭೂತ ಸೌಲಭ್ಯಗಳಿಂದ ವಂಚಿಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸುತ್ತಾರೆ ಶಂಕರ್.

ನಮಗೆ ಪರ್ಯಾಯ ರಸ್ತೆ ಸಹ ಇಲ್ಲದ ಕಾರಣ ತೀವ್ರ ತೊಂದರೆ ಅನುಭವಿಸುತ್ತಿದ್ದೇವೆ. ವಾಹನಗಳನ್ನು ಮನೆಯಲ್ಲಿಯೇ ನಿಲ್ಲಿಸಿ ಹೊಲಗಳ ಮೇಲೆ ಬಹುದೂರಕ್ಕೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಂಡು ಬಗೆಹರಿಸಬೇಕು ಎಂದು ಅಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.

ಈ ಕುರಿತು ತಹಶೀಲ್ದಾರ್‌ರವರನ್ನು ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಿಕ್ಕ ನಂತರ ಅಪ್‌ಡೇಟ್‌ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...