Homeಕರ್ನಾಟಕಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

- Advertisement -
- Advertisement -

ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಸಿಐಡಿ ಎಸ್‌.ಪಿ. ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾಗಿ ವರದಿಯಾಗಿದ್ದು, ಅವರನ್ನು ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ದಿವ್ಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ 18ನೇ ಆರೋಪಿಯಾಗಿದ್ದಾರೆ. ದಿವ್ಯಾ ಪತಿ ರಾಜೇಶ ಹಾಗರಗಿಯನ್ನು ಈ ಹಿಂದೆ ಬಂಧಿಸಲಾಗಿದ್ದು, ಆದರೆ ದಿವ್ಯ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ದಿವ್ಯಾ ಜೊತೆಗೆ ಬಂಧಿತರಾದವರನ್ನು, ದಿವ್ಯಾ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಅದೇ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಿವ್ಯಾ ಕಲಬುರಗಿಯಲ್ಲಿ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ಕಲಬುರಗಿ ಬಿಜೆಪಿಯ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಘಟನೆ ಬೆಳಕಿಗೆ ಬಂದ ನಂತರ ಪಕ್ಷ ಅವರಿಂದ ಅಂತರ ಕಾಪಾಡಿಕೊಂಡು, ಆಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಕ್ಷೇತ್ರ ಮರು ವಿಂಗಡಣೆ: ಹಿಂದೂಗಳು ಹೆಚ್ಚಿರುವ ಜಮ್ಮುವಿನಲ್ಲಿ 6 ಹೆಚ್ಚು ಕ್ಷೇತ್ರ ಸೃಷ್ಟಿ, ಮುಸ್ಲಿಮರು ಹೆಚ್ಚಿರುವ ಕಾಶ್ಮೀರಕ್ಕೆ ಕೇವಲ ಒಂದು!

ಆದಾಗ್ಯೂ, ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪಕ್ಷದಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ನೇಮಕಾತಿ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಫೆಬ್ರವರಿಯಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದಿವ್ಯಾ ಅವರನ್ನು ಭೇಟಿ ಮಾಡಿದ್ದರು.

ವೀರೇಶ್ ಎಂಬ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಯಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದರೂ 121 ಅಂಕಗಳನ್ನು ಪಡೆದಿದ್ದು ಬೆಳಕಿಗೆ ಬಂದ ನಂತರ ಸಿಐಡಿ ತನಿಖೆಯಲ್ಲಿ ದಿವ್ಯಾ ಹೆಸರು ಕೇಳಿ ಬಂದಿತ್ತು. ಅವರ ಪರೀಕ್ಷಾ ಕೇಂದ್ರ ಜ್ಞಾನ ಜ್ಯೋತಿ ಸಂಸ್ಥೆಯಾಗಿತ್ತು. ಪರೀಕ್ಷೆಯಲ್ಲಿ ವೀರೇಶ್ 7ನೇ ರ್‍ಯಾಂಕ್‌ ಪಡೆದಿದ್ದರು, ಆದರೆ ತನಿಖೆ ವೇಳೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ದಿವ್ಯಾ ಅವರ ಸಂಸ್ಥೆಯಲ್ಲಿ ಹಲವಾರು ಅಭ್ಯರ್ಥಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದ ಮಾಡಿದೆ.

ವಾಸ್ತವವಾಗಿ, ಸ್ಥಳೀಯ ಸಾರ್ವಜನಿಕ ಶಿಕ್ಷಣ ನಿರ್ದೇಶಕರು ದಿವ್ಯಾ ಅವರ ಸಂಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪರೀಕ್ಷೆಗಳನ್ನು ನಡೆಸದಂತೆ ಶಿಫಾರಸು ಮಾಡಿದ್ದರು. ಅದಾಗಿಯೂ ಪೊಲೀಸ್ ನೇಮಕಾತಿ ವಿಭಾಗವು ಅದೇ ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿತ್ತು. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೂಡಾ ಕಾರ್ಯನಿರ್ವಹಿಸಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ:  ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. ಒತ್ತಡ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರವು ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಪ್ರಕರಣ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.

ಈ ಮಧ್ಯೆ, ಸ್ಥಳೀಯ ನ್ಯಾಯಾಲಯ ದಿವ್ಯಾ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿ, ವಾರದಲ್ಲಿ ಶರಣಾಗಲು ಸೂಚಿಸಿತ್ತು. ಒಂದು ವೇಳೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನೂ ನೀಡಿತ್ತು.

ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ, ಅವರ ಸಹೋದರ ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ, ದಿವ್ಯಾ ಪತಿ ರಾಜೇಶ ಹಾಗರಗಿ ಸೇರಿದಂತೆ ಅಭ್ಯರ್ಥಿಗಳು, ಮೇಲ್ವಿಚಾರಕಿಯರು, ಸರ್ಕಾರಿ ಮಹಿಳಾ ಸಿಬ್ಬಂದಿ ಸೇರಿದಂತೆ 17 ಜನರನ್ನು ಸಿಐಡಿ ಪೊಲೀಸರು ಈ ವರೆಗೆ ಬಂಧಿಸಿದ್ದರು. ಆ ಪೈಕಿ ಏಳು ಅಭ್ಯರ್ಥಿಗಳು ಸಿಐಡಿ ವಶದಲ್ಲಿದ್ದಾರೆ ಎಂದು ಪ್ರಜಾವಾಣಿ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ  

545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ 54,041 ವಿದ್ಯಾರ್ಥಿಗಳು ಹಾಜರಾಗಿದ್ದು, ಜನವರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಿಎಸ್‌ಐ ಹಗರಣದಲ್ಲಿ ಹೊರಬೀಳುತ್ತಿರುವ ವಿವರಗಳು ನಾಡಿನ ನಾಗರಿಕ ಸಮಾಜವನ್ನು ದಿಘ್ಬ್ರಾಂತಗೊಳಿಸಿದೆ. ಇದು ಒಂದು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತವಾದ ವಿಷಯ ಎನ್ನಿಸುವುದಿಲ್ಲ! ಬದಲಿಗೆ, ದೊಡ್ಡ ಮಟ್ಟದ, ಹಿರಿಯ ವಲಯ ಶಾಮೀಲಾಗಿ ಮಾಡಿದ ದುಸ್ಸಾಹಸ ಎನ್ನಿಸುತ್ತದೆ. ಇಂತಹ ಅಭ್ಯರ್ಥಿಗಳಿಂದ ಸಮಾಜ ಏನನ್ನು ನಿರೀಕ್ಷೆ ಮಾಡಬಹುದು? ನಿಜಕ್ಕೂ ದಿಗಿಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...