Homeಕರ್ನಾಟಕಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

- Advertisement -
- Advertisement -

ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಸಿಐಡಿ ಎಸ್‌.ಪಿ. ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾಗಿ ವರದಿಯಾಗಿದ್ದು, ಅವರನ್ನು ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ದಿವ್ಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ 18ನೇ ಆರೋಪಿಯಾಗಿದ್ದಾರೆ. ದಿವ್ಯಾ ಪತಿ ರಾಜೇಶ ಹಾಗರಗಿಯನ್ನು ಈ ಹಿಂದೆ ಬಂಧಿಸಲಾಗಿದ್ದು, ಆದರೆ ದಿವ್ಯ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ದಿವ್ಯಾ ಜೊತೆಗೆ ಬಂಧಿತರಾದವರನ್ನು, ದಿವ್ಯಾ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಅದೇ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಿವ್ಯಾ ಕಲಬುರಗಿಯಲ್ಲಿ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ಕಲಬುರಗಿ ಬಿಜೆಪಿಯ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಘಟನೆ ಬೆಳಕಿಗೆ ಬಂದ ನಂತರ ಪಕ್ಷ ಅವರಿಂದ ಅಂತರ ಕಾಪಾಡಿಕೊಂಡು, ಆಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಕ್ಷೇತ್ರ ಮರು ವಿಂಗಡಣೆ: ಹಿಂದೂಗಳು ಹೆಚ್ಚಿರುವ ಜಮ್ಮುವಿನಲ್ಲಿ 6 ಹೆಚ್ಚು ಕ್ಷೇತ್ರ ಸೃಷ್ಟಿ, ಮುಸ್ಲಿಮರು ಹೆಚ್ಚಿರುವ ಕಾಶ್ಮೀರಕ್ಕೆ ಕೇವಲ ಒಂದು!

ಆದಾಗ್ಯೂ, ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪಕ್ಷದಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ನೇಮಕಾತಿ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಫೆಬ್ರವರಿಯಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದಿವ್ಯಾ ಅವರನ್ನು ಭೇಟಿ ಮಾಡಿದ್ದರು.

ವೀರೇಶ್ ಎಂಬ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಯಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದರೂ 121 ಅಂಕಗಳನ್ನು ಪಡೆದಿದ್ದು ಬೆಳಕಿಗೆ ಬಂದ ನಂತರ ಸಿಐಡಿ ತನಿಖೆಯಲ್ಲಿ ದಿವ್ಯಾ ಹೆಸರು ಕೇಳಿ ಬಂದಿತ್ತು. ಅವರ ಪರೀಕ್ಷಾ ಕೇಂದ್ರ ಜ್ಞಾನ ಜ್ಯೋತಿ ಸಂಸ್ಥೆಯಾಗಿತ್ತು. ಪರೀಕ್ಷೆಯಲ್ಲಿ ವೀರೇಶ್ 7ನೇ ರ್‍ಯಾಂಕ್‌ ಪಡೆದಿದ್ದರು, ಆದರೆ ತನಿಖೆ ವೇಳೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ದಿವ್ಯಾ ಅವರ ಸಂಸ್ಥೆಯಲ್ಲಿ ಹಲವಾರು ಅಭ್ಯರ್ಥಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದ ಮಾಡಿದೆ.

ವಾಸ್ತವವಾಗಿ, ಸ್ಥಳೀಯ ಸಾರ್ವಜನಿಕ ಶಿಕ್ಷಣ ನಿರ್ದೇಶಕರು ದಿವ್ಯಾ ಅವರ ಸಂಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪರೀಕ್ಷೆಗಳನ್ನು ನಡೆಸದಂತೆ ಶಿಫಾರಸು ಮಾಡಿದ್ದರು. ಅದಾಗಿಯೂ ಪೊಲೀಸ್ ನೇಮಕಾತಿ ವಿಭಾಗವು ಅದೇ ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿತ್ತು. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೂಡಾ ಕಾರ್ಯನಿರ್ವಹಿಸಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ:  ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. ಒತ್ತಡ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರವು ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಪ್ರಕರಣ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.

ಈ ಮಧ್ಯೆ, ಸ್ಥಳೀಯ ನ್ಯಾಯಾಲಯ ದಿವ್ಯಾ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿ, ವಾರದಲ್ಲಿ ಶರಣಾಗಲು ಸೂಚಿಸಿತ್ತು. ಒಂದು ವೇಳೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನೂ ನೀಡಿತ್ತು.

ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ, ಅವರ ಸಹೋದರ ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ, ದಿವ್ಯಾ ಪತಿ ರಾಜೇಶ ಹಾಗರಗಿ ಸೇರಿದಂತೆ ಅಭ್ಯರ್ಥಿಗಳು, ಮೇಲ್ವಿಚಾರಕಿಯರು, ಸರ್ಕಾರಿ ಮಹಿಳಾ ಸಿಬ್ಬಂದಿ ಸೇರಿದಂತೆ 17 ಜನರನ್ನು ಸಿಐಡಿ ಪೊಲೀಸರು ಈ ವರೆಗೆ ಬಂಧಿಸಿದ್ದರು. ಆ ಪೈಕಿ ಏಳು ಅಭ್ಯರ್ಥಿಗಳು ಸಿಐಡಿ ವಶದಲ್ಲಿದ್ದಾರೆ ಎಂದು ಪ್ರಜಾವಾಣಿ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ  

545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ 54,041 ವಿದ್ಯಾರ್ಥಿಗಳು ಹಾಜರಾಗಿದ್ದು, ಜನವರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಿಎಸ್‌ಐ ಹಗರಣದಲ್ಲಿ ಹೊರಬೀಳುತ್ತಿರುವ ವಿವರಗಳು ನಾಡಿನ ನಾಗರಿಕ ಸಮಾಜವನ್ನು ದಿಘ್ಬ್ರಾಂತಗೊಳಿಸಿದೆ. ಇದು ಒಂದು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತವಾದ ವಿಷಯ ಎನ್ನಿಸುವುದಿಲ್ಲ! ಬದಲಿಗೆ, ದೊಡ್ಡ ಮಟ್ಟದ, ಹಿರಿಯ ವಲಯ ಶಾಮೀಲಾಗಿ ಮಾಡಿದ ದುಸ್ಸಾಹಸ ಎನ್ನಿಸುತ್ತದೆ. ಇಂತಹ ಅಭ್ಯರ್ಥಿಗಳಿಂದ ಸಮಾಜ ಏನನ್ನು ನಿರೀಕ್ಷೆ ಮಾಡಬಹುದು? ನಿಜಕ್ಕೂ ದಿಗಿಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...