Homeಅಂಕಣಗಳುಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

- Advertisement -
- Advertisement -

ಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ ಮುಖ್ಯಮಂತ್ರಿ ಪಟ್ಟಸಿಕ್ಕಿತು. ಒಂದು ವೇಳೆ ಅವರು ಹೈಕಮಾಂಡ್ ಮೆಚ್ಚುವಂತಹ ಆಡಳಿತ ನೀಡಿದ್ದರೆ ಈ ಜನ್ಮದಲ್ಲಿ ನಾನು ಮುಖ್ಯಮಂತ್ರಿಯಾಗುವಂತಿರಲಿಲ್ಲ. ಈ ಜನ್ಮದಲ್ಲಿ ತೀರಿಸಲಾಗದಂತಹ ಉಪಕಾರ ಮಾಡಿರುವ ಎಡೂರಪ್ಪನವರಿಗೆ ತಕ್ಕ ಉಪಕಾರ ಎಂದರೆ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡುವುದು. ಎಡೂರಪ್ಪನವರ ಇನ್ನೊಂದು ಸಾಧನೆಯೂ ಇಲ್ಲಿ ಪರಿಗಣಿತವಾಗುತ್ತದೆ. ಎಂತಹವರನ್ನೇ ಆಗಲಿ ಮುಖ್ಯಮಂತ್ರಿ ಮಾಡುವುದರಲ್ಲಿ ಅವರು ಎತ್ತಿದ ಕೈ. ಅವರು ಮನಸ್ಸು ಮಾಡಿದ್ದರಿಂದಲೇ ಕುಮಾರಸ್ವಾಮಿ ಮುಖ್ಯಮಂತ್ರಿಯಾದದ್ದು, ಅವರಿಂದಲೇ ಅಲ್ಲವೆ ಸದಾನಂದಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಮತ್ತೆ ನನ್ನಂಥವನು ಮುಖ್ಯಮಂತ್ರಿಯಾಗಿ ಹೆಲಿಕಾಪ್ಟರಿನಲ್ಲಿ ಹಾರಾಡುವಂತಾದದ್ದು. ಅದಕ್ಕೆ ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಟ್ಟದ್ದದು ಎಂದರಂತಲ್ಲಾ, ಥೂತ್ತೇರಿ.

******

ವಿಮಾನ ನಿಲ್ದಾಣಕ್ಕೆ ಎಡೂರಪ್ಪನ ಹೆಸರಿಡಲು ಮುಖ್ಯ ಕಾರಣ ಕೊಡುವ ಅವರ ಭಕ್ತರ ಪ್ರಕಾರ, “ನೋಡಿ ಸಾರ್ ಎಡೂರಪ್ಪ ಬೂಕನಕೆರೆಯಿಂದ ಬರಿಗೈಲಿ ಶಿಕಾರಿಪುರಕ್ಕೆ ಬಂದು ಶಿಕಾರಿ ಶುರುಮಾಡಿಕೊಂಡ್ರು; ಶಿಕಾರಿಪುರದ ಮುನಿಸಿಪಾಲಿಟಿಯಿಂದ ವಿಧಾನಸೌಧಕ್ಕೆ ಹೋದ್ರು. ವಿರೋಧಪಕ್ಷದ ನಾಯಕರಾದ್ರು; ಒಂದಲ್ಲ ಅಂತ ಮೂರುಸಲ ಮುಖ್ಯಮಂತ್ರಿಯಾದ್ರು. ಬೇಕಾದಷ್ಟು ಹಣ ಆಸ್ತಿ ಮಾಡಬಹುದಿತ್ತು ಮಾಡಲಿಲ್ಲ. ಕಾಲೇಜು, ಕಾಲೇಜಿಗೆ ಹಾಸ್ಟಲು, ಸ್ಟಾರ್ ಹೋಟ್ಲು ಕಟ್ಟಬಹುದಿತ್ತು, ಕಟ್ಟಲಿಲ್ಲ. ಯಾವನೋ ಚೆಕ್ ಮುಖಾಂತರ ಲಂಚಕೊಡಕ್ಕೆ ಬಂದ, ತಗಳ್ಳಿಲ್ಲ. ಪರಿಣಾಮ ಇವುರೇ ಜೈಲಿಗೋಗುವ ಸ್ಥಿತಿ ಬಂತು, ಹೆದರಲಿಲ್ಲ. ಹೋಗಿ ಬಂದ್ರು. ನಮ್ಮ ಶೋಭಕ್ಕನ್ನ ಬೆಳೆಸಿದ್ರು, ಕೈ ಬಿಡಲಿಲ್ಲ. ಇವತ್ತು ಯಾವುದೇ ನಾಯಕನಿಗೆ ನಮ್ಮ ಎಡೂರಪ್ಪನೋರ ಹೋಲಸಂಗೇಯಿಲ್ಲ. ಅದ್ಕೆ ವಿಮಾನ ನಿಲ್ದಾಣಕ್ಕೆ ಅವರೆಸರೇ ಸೂಕ್ತ ಸಾರು” ಅಂದನಲ್ಲ, ಥೂತ್ತೇರಿ.

ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಖಾಲಿ ವಿಮಾನ!
PC: ISTOCK

******

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ ಎಂಬ ಚರ್ಚೆ ನಡೆದಿರುವ ಸಮಯದಲ್ಲಿ, ಹಲವಾರು ದಿಕ್ಕಿನಿಂದ ಸಲಹೆ ಸೂಚನೆ ಬರತೊಡಗಿವೆಯೆಲ್ಲಾ. ಸಾಹಿತಿಗಳ ದಿಕ್ಕಿನಿಂದ “ನೋಡಿ ಸಾರ್ ನಮ್ಮ ಕುವೆಂಪು ಕಾವ್ಯ ಬರೀಬೇಕಾದ್ರೆ ಲೌಖಿಕ ಜೀವನದಿಂದ ಶುರುಮಾಡಿ ಪಾರಮಾರ್ಥಿಕಕ್ಕೆ ಹೋಗತಿದ್ರು. ಉದಾಹರಣೆಗೆ: ’ನಾನಿನಗೆ ನೀನನಗೆ ಜೇನಾಗುವ, ರಸದೇವಗಂಗೆಯಲ್ಲಿ ಮೀನಾಗುವ’ ಅಂತ ಎರಡನೇ ಜಿಗಿತಕ್ಕೆ ಆಕಾಶಕ್ಕೆ ಹಾರತಿದ್ರು, ಜೊತೆಗೆ ಎತ್ತರದ ಕನಸು ಕಾಣತಿದ್ರು, ಅವರು ಯಾವಾಗಲೂ ಊರ್ದ್ವಮುಖಿ. ’ನಾನೇರುವೆತ್ತರಕೆ ನೀನೇರಬಲ್ಲೆಯ’ ಅಂತಿದ್ರು. ’ಮನುಜಮತ ವಿಶ್ವಪಥ’ ಅಂತಿದ್ರು” ಅನ್ನುವ ವಾದ ಬಂತಂತೆಲ್ಲಾ. ಅವುರೆಸರು ಸೂಕ್ತ ಅನ್ನುವುದಾದರೆ ಅಳಿದುಳಿದ ರಾಜಕಾರಣಿಗಳ ಪ್ರಕಾರ, ಈ ದೇಶಕಂಡ ಅಪ್ರತಿಮ ರಾಜಕಾರಣಿ
ಗೋಪಾಲಗೌಡ ಹೆಸರಿಡಲು ಕೊಡುವ ಕಾರಣವೆಂದರೆ: “ಗೋಪಾಲಗೌಡ ಗುಡಿಸಲಿಂದ ಬಂದವರು. ಮೂರುಬಾರಿ ಶಾಸಕರಾದರೂ ಮನೆ ಇರಲಿಲ್ಲ, ಸೈಟ್ ಇರಲಿಲ್ಲ. ಬ್ಯಾಂಕ್‌ನ ಅಕೌಂಟೇ ಇರಲಿಲ್ಲ. ಇದ್ದ ಎರಡು ಮೂರು ಜುಬ್ಬ ಅಜೀಜ್ ಸೇಠ್ ಹೊಲಿಸಿಕೊಟ್ಟಿದ್ದು. ಇಂತಹ ವ್ಯಕ್ತಿಯ ನೆನಪನ್ನು ಹಸಿರಾಗಿಡಬೇಕಾದರೆ ಅಕಾಶದಲ್ಲಿ ಹಾರಾಡುವ ವಿಮಾನ ನಿಲ್ದಾಣಕ್ಕೆ ಅವರ ಹೆಸರು ಇಡಬೇಕೆಂದರಲ್ಲಾ”, ಥೂತ್ತೇರಿ.

*****

ಅಜೀಜ್ ಸೇಠ್ ಎಂದಕೂಡಲೇ ನೆನಪಾಯ್ತು. ಗೋಪಾಲಗೌಡರ ಹರಿದ ಜುಬ್ಬ ನೋಡಿ ಮನಕರಗಿದ ಸೇಠ್ ಜುಬ್ಬ ಹೊಲಿಸಿಕೊಟ್ಟಂತೆ, ನಮ್ಮ ನಡುವಿನ ಸಾಬರು ಹಳ್ಳಿಗಾಡಿನ ರೈತನ ಪಾಡಿನಲ್ಲಿ ಅನಾದಿಕಾಲದಿಂದ ಭಾಗಿಯಾಗುತ್ತ ಬಂದಿರುವುದು ಸಂಘಿಗಳ ಗಮನಕ್ಕೆ ಬಂದಿಲ್ಲವಂತಲ್ಲಾ. ಈಗ ಸಾಬರ ಬಳಿ ಮಾವಿನ ಹಣ್ಣು ಕೊಳ್ಳಬೇಡಿ ಎಂದು ಫತ್ವಾ ಹೊರಡಿಸಿರುವುದರ ಪರಿಣಾಮ ಮಾವಿನ ಹಣ್ಣಿನ ಕಂಟ್ರಾಕ್ಟಿಗೆ ಸಾಬರು ಬರುತ್ತಿಲ್ಲವಲ್ಲಾ. ಈ ಪುರೋಹಿತಶಾಹಿಗಳ ತಲೆಯಿಂದ ಮಂತ್ರಗಳು ಮಾಯವಾಗಿ ಮುಸ್ಲಿಂ ದ್ವೇಷ ತುಂಬಿಕೊಂಡ ಫಲವಾಗಿ ರೈತ ಬೆಳೆದ ಮಾವಿನಹಣ್ಣು, ವಾಣಿಜ್ಯ ಬೆಳೆಗಳಾದ ಹೊಂಗೆಬೀಜ, ಇಪ್ಪೆ ಅಳ್ಳು, ಬೇವಿನಬೀಜ, ಹಲಸಿನಹಣ್ಣು ಕೊಳ್ಳುವವರಿಲ್ಲವಾಗಿದೆಯಂತಲ್ಲಾ. ಇದಿನ್ನೂ ದೊಡ್ಡದಾಗಿ ಬೆಳೆದು, ಸದ್ಯದಲ್ಲೇ ದೇಶ ದಿವಾಳಿ ಎದ್ದು ಶ್ರೀಲಂಕಾದಂತಾಗುವ ಎಲ್ಲಾ ಸೂಚನೆಗಳು ಕಾಣುತ್ತಿವೆಯಲ್ಲಾ. ಅದಕ್ಕಿಂತ ಮುಖ್ಯ ಎತ್ತಿಗೆ ಲಾಳ ಕಟ್ಟುತ್ತಿದ್ದ ಸಾಬರು ಹಳ್ಳಿಕಡೆ ಬಾರದೆಯಿರುವುದರಿಂದ ಎತ್ತುಗಳ ಗೊರಸು ಸವೆದು ಕುಂಟತೊಡಗಿವೆ. ಇದೀಗ ರೈತರು ಎಚ್ಚೆತ್ತು “ಬಾರೊ ನಮ್ಮ ಎತ್ತಿಗೆ ಲಾಳ ಕಟ್ಟು” ಅಂದರೆ ಸಂಘಿಗಳ ಕತೆಯೇನೆಂದು ಉದ್ಘಾರ ತೆಗೆದರಲ್ಲಾ, ಥೂತ್ತೇರಿ.

*******

ಈ ಬಿಜೆಪಿಗಳು ಆಡಳಿತ ನಡೆಸಲು ಅಳವಡಿಸಿಕೊಂಡಿರುವುದು ಗೋಳವಲಕರನ ಅರ್ಥ ವ್ಯವಸ್ಥೆಯಂತಲ್ಲಾ. ಆತನ ಅರ್ಥಶಾಸ್ತ್ರದ ಪ್ರಕಾರ ನಾವು ಸುಖವಾಗಿ ಭೋಜನ ಬಾರಿಸುತ್ತ ಗರ್ಭಗುಡಿಯಲ್ಲಿರಬೇಕಾದರೆ ಈ ದೇಶದಲ್ಲಿ ಬಡವರಿರಬೇಕು ಅವರು ಆಸ್ತಿವಂತರಾಗಬಾರದು, ಅಕಸ್ಮಾತ್ ಆದರೆ ನಮ್ಮ ಮಾತನ್ನ ಕೇಳುವುದಿಲ್ಲ; ನಾವೇಳಿದ ಕೆಲಸ ಮಾಡುವುದಿಲ್ಲ; ಆದ್ದರಿಂದ ಅವರು ಆಸ್ತಿವಂತರಾಗದಂತೆ ನೋಡಿಕೊಳ್ಳಬೇಕು; ಅದರಲ್ಲೂ ಮುಸ್ಲಿಮರು ಆರ್ಥಿಕವಾಗಿ ಮುಂದೆ ಬರಲೇಬಾರದು ಎಂದಿದೆಯಂತಲ್ಲಾ. ಅದರ ಫಲವಾಗಿ ಚರ್ಮೋದ್ಯಮ ನಾಶವಾಯ್ತು. ಹಳ್ಳಿಗಳ ಕಡೆ ಹಬ್ಬವಾದರೆ ಚರ್ಮ ಕೊಳ್ಳಲು ಸಾಬರು ಬರುತ್ತಿದ್ದರು. ಈಗ ಗುಂಡಿ ತೆಗೆದು ಚರ್ಮವನ್ನೂ ಹೂಳುತ್ತಿದ್ದಾರೆ. ಇಲ್ಲಿಂದ ಶುರುವಾದ ಮುಸ್ಲಿಮರ ಆರ್ಥಿಕ ಅವನತಿ, ರೈತರ ಕಡೆಗೂ ತಿರುಗಿ ಸದ್ಯದಲ್ಲೇ ರೈತರ ಪತನವಾಗಿ ಅವರೆಲ್ಲಾ ಇನ್ನೂ ಬಡವರಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ, ಥೂಥೂ ಥೂತ್ತೇರಿ.


ಇದನ್ನೂ ಓದಿ: ಈಶ್ವರಪ್ಪ ಪರಸೆಂಟೇಜಲ್ಲಿ ಜಗದ್ಗುರುಗಳ ಪಾಲಿತ್ತಂತಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...