Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...