Homeಕರ್ನಾಟಕBJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದು, ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ ಎಂದು ಅವರು ಘೋಷಿಸಿದ್ದಾರೆ

- Advertisement -
- Advertisement -

ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು “ಸಾಂಸ್ಕೃತಿಕ ಭಯೋತ್ಪಾದನೆ” ಎನ್ನದೆ ಬೇರೇನು ಹೇಳಲು ಸಾಧ್ಯ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, “ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು, ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು ‘ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ…’ ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

“ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ” ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

“ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

“ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ಬಗ್ಗೆ ನಮ್ಮ ಸಿದ್ದರಾಮಯ್ಯ ಧೈರ್ಯದಿಂದ ಮಾತನಾಡಿದ್ದಾರೆ. ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...