Homeಮುಖಪುಟಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

ಹಿಂದಿ ಇಷ್ಟಪಡದವರು ವಿದೇಶಿಗರು; ಅವರು ಭಾರತ ಬಿಟ್ಟು ಹೋಗಲಿ: ಯುಪಿ ಸಚಿವ ವಿವಾದ

- Advertisement -
- Advertisement -

ಹಿಂದಿ ಭಾಷೆಯ ಚರ್ಚೆಯ ನಡುವೆಯೇ ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ಅವರು ಹಿಂದಿಯನ್ನು ಇಷ್ಟಪಡದವರು ವಿದೇಶಿಗರಾಗಿದ್ದು, ಹಿಂದಿ ಬಾರದವರು ಭಾರತವನ್ನು ಬಿಟ್ಟು ಬೇರೆಡೆಗೆ ಹೋಗಲಿ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಕಿಚ್ಚ ಸುದೀಪ್ ನಡುವಿನ ಟ್ವಿಟರ್ ಸಮರದ ನಂತರ ಮತ್ತೆ ಮುನ್ನೆಲೆಗೆ ಬಂದಿರುವ ಭಾಷಾ ಚರ್ಚೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಉತ್ತರ ಪ್ರದೇಶದ ಮೀನುಗಾರಿಕಾ ಸಚಿವರಾಗಿರುವ ಸಂಜಯ್ ನಿಶಾದ್, “ಭಾರತದಲ್ಲಿ ವಾಸಿಸಲು ಬಯಸುವವರು ಹಿಂದಿಯನ್ನು ಪ್ರೀತಿಸಬೇಕು. ನೀವು ಹಿಂದಿಯನ್ನು ಪ್ರೀತಿಸದಿದ್ದರೆ, ನೀವು ವಿದೇಶಿ ಅಥವಾ ವಿದೇಶಿ ಶಕ್ತಿಗಳೊಂದಿಗೆ ಸಂಬಂಧ ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಪ್ರಾದೇಶಿಕ ಭಾಷೆಗಳನ್ನು ಗೌರವಿಸುತ್ತೇವೆ. ಆದರೆ ಇದು ಒಂದು ದೇಶ ಮತ್ತು ಈ ದೇಶವನ್ನು ಸಂವಿಧಾನವು, ಭಾರತ ಎಂದರೆ ‘ಹಿಂದೂಸ್ತಾನ್’ ಎಂದು ಹೇಳುತ್ತದೆ. ಅಂದರೆ ಹಿಂದಿ ಮಾತನಾಡುವವರ ಸ್ಥಳವಾಗಿದೆ ಎಂದು. ಹಿಂದುಸ್ತಾನವು ಹಿಂದಿ ಮಾತನಾಡದೇ ಇರುವವರಿಗೆ ಇರುವ ಸ್ಥಳವಲ್ಲ. ಅವರು ಈ ದೇಶವನ್ನು ಬಿಟ್ಟು ಬೇರೆಡೆ ಹೋಗಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ನಾಯಕರು ಕನ್ನಡ ಧಿಕ್ಕರಿಸಿ ಹಿಂದಿಯನ್ನು ಮೆರೆಸುತ್ತಿರುವುದು ‘ಸಾಂಸ್ಕೃತಿಕ ಭಯೋತ್ಪಾದನೆ’: ಸಿದ್ದರಾಮಯ್ಯ ಆಕ್ರೋಶ

ಸಂವಿಧಾನದ 343 ನೇ ವಿಧಿ ಮತ್ತು ನಂತರದ ತಿದ್ದುಪಡಿಯ ಪ್ರಕಾರ, ಹಿಂದಿಯನ್ನು ಇಂಗ್ಲಿಷ್ ಜೊತೆಗೆ ಅಧಿಕೃತ ಭಾಷೆಯಾಗಿ ಗುರುತಿಸಲಾಗಿದೆ. ಭಾರತಕ್ಕೆ ಯಾವುದೆ ರಾಷ್ಟ್ರೀಯ ಭಾಷೆ ಇಲ್ಲ. ಅಧಿಕೃತ ಭಾಷೆ ಎಂದರೆ ಸರ್ಕಾರ ಬಳಸುವ ಭಾಷೆ. ರಾಜ್ಯಗಳು ತಮ್ಮ ಅಧಿಕೃತ ಭಾಷೆಯಾಗಿ ಭಾಷೆಯನ್ನು ಗೊತ್ತುಪಡಿಸಬಹುದು. ಅದರಂತೆ ತಮಿಳುನಾಡಿನ ಅಧಿಕೃತ ಭಾಷೆ ತಮಿಳು, ಮತ್ತು ಪಶ್ಚಿಮ ಬಂಗಾಳದ ಅಧಿಕೃತ ಭಾಷೆ ಬಂಗಾಳಿ.

ನಟ ಸುದೀಪ್‌ ಅವರು ಹಿಂದಿ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಹಿಂದಿ ಚಿತ್ರ ನಟ ಅಜಯ್‌ ದೇವಗನ್‌‌ ಅವರು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, ‘ಹಿಂದಿ ರಾಷ್ಟ್ರ ಭಾಷೆ’ ಎಂದು ಪ್ರತಿಪಾದಿಸಿದ್ದರು. ಇದನ್ನು ವಿರೋಧಿಸಿ ಸುದೀಪ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

ಸುದೀಪ್ ಅವರ ಹೇಳಿಕೆಯನ್ನು ಬೆಂಬಲಿಸಿ ನಟಿ ರಮ್ಯ ದಿವ್ಯ ಸ್ಪಂದನ, ಶ್ರೀನಗರ ಕಿಟ್ಟಿ, ಚೇತನ್‌ ಅಹಿಂಸಾ ಮತ್ತು ನಿನಾಸಂ ಸತೀಶ್‌ ಸೇರಿದಂತೆ ಹಲವಾರು ಕನ್ನಡದ ನಟ-ನಟಿಯರು ಅಜಯ್ ದೇವಗನ್ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೆ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಕೂಡಾ ಸುದೀಪ್ ಅವರನ್ನು ಸಮರ್ಥಿಸಿ ಅಜಯ್ ದೇವಗನ್ ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ

ಈ ತಿಂಗಳ ಆರಂಭದಲ್ಲಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ರಾಜ್ಯಗಳ ಜನರು ಪರಸ್ಪರ ಹಿಂದಿಯಲ್ಲಿ ಮಾತನಾಡಬೇಕು. ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕು ಎಂದು ಸೂಚಿಸುವ ಮೂಲ ಚರ್ಚೆಯನ್ನು ಹುಟ್ಟುಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...