Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...