Homeಮುಖಪುಟಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಮೊಘಲ್‌ ಕಾಲದ ಹೆಸರುಳ್ಳ 40 ಗ್ರಾಮಗಳ ಮರುನಾಮಕರಣಕ್ಕೆ ದೆಹಲಿ ಬಿಜೆಪಿ ಆಗ್ರಹ

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಈಗ ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಸರ್ಕಾರದ ಮುಂದೆ ಹೆಸರು ಬದಲಾವಣೆಯ ಒತ್ತಾಯವನ್ನು ಬಿಜೆಪಿ ಮಾಡಿದೆ.

- Advertisement -
- Advertisement -

ಮೊಘಲ್ ಸಾಮ್ರಾಟರ ಅವಧಿಯ ಹೆಸರುಗಳನ್ನು ಸೂಚಿಸುವ 40 ಗ್ರಾಮಗಳಿಗೆ ಮರುನಾಮಕರಣ ಮಾಡಬೇಕು ಎಂದು ಆಗ್ರಹಿಸಿ ದೆಹಲಿ ಬಿಜೆಪಿಯು ಎಎಪಿ ನೇತೃತ್ವದ ದೆಹಲಿ ಸರ್ಕಾರವನ್ನು ಆಗ್ರಹಿಸಿದೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಸಾವಿಗೀಡಾದ ಐಬಿ ಸಿಬ್ಬಂದಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೆಬಲ್ ರತನ್ ಲಾಲ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು, ಕಲಾವಿದರು ಮತ್ತು ಹುತಾತ್ಮರ ಹೆಸರನ್ನು ಆ ಗ್ರಾಮಗಳಿಗೆ ಇಡಬೇಕು ಎಂದು ಆಗ್ರಹಿಸಲಾಗಿದೆ.

ಬಾಟ್ಲಾ ಹೌಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ದೆಹಲಿ ಪೊಲೀಸ್ ಅಧಿಕಾರಿ ಮೋಹನ್ ಚಂದ್ ಶರ್ಮಾ, ಕಾರ್ಗಿಲ್ ಯುದ್ಧದ ಸಮಯದಲ್ಲಿ ಹುತಾತ್ಮರಾದ ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮಹರ್ಷಿ ವಾಲ್ಮೀಕಿ, ಗಾಯಕರಾದ ಲತಾ ಮಂಗೇಶ್ಕರ್ ಮತ್ತು ಮೊಹಮ್ಮದ್ ರಫಿ, ಕ್ರಿಕೆಟಿಗ ಯಶಪಾಲ್ ಶರ್ಮಾ, ಅಥ್ಲೀಟ್ ಮಿಲ್ಕಾ ಸಿಂಗ್ ಅವರ ಹೆಸರುಗಳನ್ನು ಬಿಜೆಪಿ ಪ್ರಾಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜನರು ಮೊಘಲರ ಕಾಲದ ಹೆಸರುಗಳನ್ನು ಬದಲಾಯಿಸಬೇಕೆಂದು ಬಯಸುತ್ತಿರುವ ಕಾರಣ ನಾವು ಹಳ್ಳಿಗಳಿಗೆ ಬೇರೆ ಹೆಸರು ಇಡಲು ಪ್ರಸ್ತಾವನೆಯನ್ನು ಕಳುಹಿಸುತ್ತಿದ್ದೇವೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಮೊಘಲ ಸಾಮ್ರಾಜ್ಯಕ್ಕೆ ಸಂಬಂಧಿಸಿದ” ಮತ್ತು “ಗುಲಾಮತನದ ಮನಸ್ಥಿತಿಯನ್ನು ಸಂಕೇತಿಸುವ” ಹೆಸರುಗಳನ್ನು ಹೊಂದಿರುವ 40 ಹಳ್ಳಿಗಳಿವೆ ಎಂದು ಅವರು ಆರೋಪಿಸಿದ್ದಾರೆ.

“ಜಿಯಾ ಸರೈ, ಜಮ್ರೂದ್‌ಪುರ, ಮಸೂದ್‌ಪುರ್, ಜಾಫರ್‌ಪುರ್ ಕಲಾನ್, ತಾಜ್‌ಪುರ, ನಜಾಫ್‌ಗಢ್, ನೆಬ್ ಸರೈ ಮುಂತಾದ ಹೆಸರುಗಳಿರುವ ಗ್ರಾಮಗಳಿವೆ” ಎಂದು ಗುಪ್ತಾ ಹೇಳಿದ್ದಾರೆ.

“ಇನ್ನು ಮುಂದೆ ಈ ಗುಲಾಮಗಿರಿಯ ಸಂಕೇತಗಳನ್ನು ಮುಂದುವರಿಸಲು ಈ ಹಳ್ಳಿಗಳ ಯುವಕರು ಬಯಸುವುದಿಲ್ಲ. ದೇಶದ ಮಹಾನ್ ಪುತ್ರರು, ಪ್ರಖ್ಯಾತ ವ್ಯಕ್ತಿಗಳ ಹೆಸರಿನಿಂದ ಗುರುತಿಸಲ್ಪಡಬೇಕು ಎಂದು ಈ ಗ್ರಾಮಗಳ ಯುವಕರು ಬಯಸುತ್ತಾರೆ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಒಂದು ದಿನ ಮೊದಲು ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾದವಪುರ ಎಂದು ಬದಲಾಯಿಸುವಂತೆ ಒತ್ತಾಯಿಸಿ ಬೋರ್ಡ್ ಕೂಡ ಹಾಕಲಾಗಿತ್ತು. ಗುಪ್ತಾ ಸೈಯದ್ ಉಲ್ ಅಜೈಬ್, ಹೌಜ್ ಖಾಸ್ ಮತ್ತು ನಜಾಫ್‌ಗಢ್ ಹೆಸರನ್ನು ಸಹ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದರು.

ಪಂಚಾಯಿತಿಗಳು ಮತ್ತು ಸ್ಥಳೀಯರೊಂದಿಗೆ ಸಮಾಲೋಚಿಸಿದ ನಂತರ ಪ್ರಸ್ತಾವನೆಯನ್ನು ಮುಂದಿಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ದಿಲ್ಲಿ ಸಿಎಂ ರಾಜಕೀಯ ಮಾಡುವುದಿಲ್ಲ. ನಮ್ಮ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸ್ಥಳೀಯ ಬಿಜೆಪಿ ಕೌನ್ಸಿಲರ್ ಭಗತ್ ಸಿಂಗ್ ಟೋಕಾಸ್ ಅವರು ಮೊಹಮ್ಮದ್‌ಪುರ ಗ್ರಾಮವನ್ನು ಮಾಧವಪುರ ಎಂದು ಘೋಷಿಸುವ ಫಲಕಗಳನ್ನು ಹಾಕಿದ್ದರು. ಈ ಪ್ರದೇಶವನ್ನು ಮರುನಾಮಕರಣ ಮಾಡಲು ಕೆಲವು ಸ್ಥಳೀಯರೊಂದಿಗೆ ಗುಪ್ತಾ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹೆಸರುಗಳನ್ನು ಬದಲಾಯಿಸುವ ಅಂತಿಮ ಅಧಿಕಾರವು ದೆಹಲಿ ಸರ್ಕಾರಕ್ಕಿದೆ.

ಅಭಿವೃದ್ಧಿ ರಾಜಕೀಯವನ್ನು ಬದಿಗೆಸೆದಿರುವ ಬಿಜೆಪಿ ಕೋಮು ಕೇಂದ್ರಿತ ಹೆಸರು ಬದಲಾವಣೆಯ ರಾಜಕೀಯವನ್ನು ಮುಂದುವರಿಸಿದೆ ಎಂಬ ಆರೋಪಗಳು ಸಾಮಾನ್ಯವಾಗಿವೆ.

ಸಿಬಿಎಸ್‌ಇ ಪಠ್ಯದಲ್ಲಿ ಮೊಘಲ್ ಇತಿಹಾಸಕ್ಕೆ ಕತ್ತರಿ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಶನ್‌ (ಸಿಬಿಎಸ್‌ಇ) ಪಠ್ಯದಲ್ಲಿ ಮೊಘಲ್‌ ಇತಿಹಾಸಕ್ಕೆ ಕಡಿವಾಣ ಹಾಕುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿತ್ತು.

ಮೊಘಲ್‌ ಸಾಮ್ರಾಜ್ಯವನ್ನು ವೈಭವೀಕರಿಸುವ ಮತ್ತು ಇಸ್ಲಾಂ ಧರ್ಮದ ವಿಸ್ತರಣೆಯ ಕುರಿತು ಪಾಕಿಸ್ತಾನಿ ಕವಿಯ ನಜ್ಮ್‌ ಅವರ ಪಠ್ಯವನ್ನು ಹೈಯರ್‌ ಸೆಕೆಂಡರಿ ಪಠ್ಯಕ್ರಮದಿಂದ ಸಿಬಿಎಸ್‌ಇ ತೆಗೆದಿದೆ.

ಹೊಸ ಶೈಕ್ಷಣಿಕ ಅವಧಿಗೆ ಪ್ರಕಟಿಸಿದ ಪಠ್ಯಕ್ರಮದಲ್ಲಿ ಇತಿಹಾಸಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಎನ್‌ಸಿಇಆರ್‌ಟಿ ಪುಸ್ತಕದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕಗಳಿಂದ ಫೈಜ್ ಅಹಮದ್ ಫೈಜ್ ಅವರ ಶಾಯರಿ ಮತ್ತು 11ನೇ ತರಗತಿಯ ಇತಿಹಾಸ ಪುಸ್ತಕದಿಂದ ಇಸ್ಲಾಂ ಧರ್ಮದ ಸ್ಥಾಪನೆ, ಉದಯ ಮತ್ತು ವಿಸ್ತರಣೆಯ ಪಠ್ಯವನ್ನು ತೆಗೆದುಹಾಕಲಾಗಿದೆ. ಅದೇ ಸಮಯದಲ್ಲಿ, 12ನೇ ತರಗತಿ ಪುಸ್ತಕದಿಂದ ಮೊಘಲ್ ಸಾಮ್ರಾಜ್ಯದ ಆಡಳಿತ ಅಧ್ಯಾಯದಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...