Homeಮುಖಪುಟ‘ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

‘ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

- Advertisement -
- Advertisement -

“ಕಷ್ಟಪಟ್ಟು ಗಳಿಸಿದ ನಮ್ಮ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವಾಗಿ ಪರಿವರ್ತಿಸುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ. ಅಸ್ಸಾಂ ಪೊಲೀಸರು ಕೂಡಾ ಅದೇ ವಿಚಾರದ ಬಗ್ಗೆ ಯೋಚಿಸುತ್ತಿದ್ದರೆ, ಅದು ವಿಕೃತ ಚಿಂತನೆ” ಎಂದು ಅಸ್ಸಾಂನ ಬಾರ್ಪೇಟಾ ಜಿಲ್ಲೆಯ ನ್ಯಾಯಾಲಯವು ಶುಕ್ರವಾರ ಹೇಳಿದೆ.

ದಲಿತ ಹಕ್ಕುಗಳ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್‌ ಮೇವಾನಿ ಅವರು ಮಹಿಳಾ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಪ್ರಕರಣದ ಜಾಮೀನು ವಿಚಾರಣೆ ನಡೆಸಿದ ನ್ಯಾಯಾಲಯವು, ‘ಪ್ರಕರಣದ ಬಗ್ಗೆ ಪೊಲೀಸರು ಸುಳ್ಳು ಎಫ್‌ಐಆರ್‌ ದಾಖಲಿಸಿದ್ದಾರೆ’ ಎಂದು ಹೇಳಿದ್ದು, ಅವರಿಗೆ ಜಾಮೀನು ಮಂಜೂರು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ರಾಜ್ಯದ ಪೊಲೀಸರನ್ನು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಕೋಮು ದ್ವೇಷ ಹರಡುವ ಯಾವುದೆ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಡಾಕ್ಟರ್‌ಗಳಿಗೆ ವೈದ್ಯಕೀಯ ಮಂಡಳಿ ಎಚ್ಚರಿಕೆ

ಏಪ್ರಿಲ್ 21 ರಂದು ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಸರ್ಕಾರಿ ವಾಹನದಲ್ಲಿ ಅವರನ್ನು ಕರೆದೊಯ್ಯುತ್ತಿದ್ದಾಗ ಜಿಗ್ನೇಶ್‌ ಮೇವಾನಿ ತನ್ನ ಮೇಲೆ, ‘ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ’, ‘ದೈಹಿಕವಾಗಿ ತಳ್ಳಿದ್ದಾರೆ’ ಎಂದು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಎಫ್‌ಐಆರ್ ಪ್ರಕಾರ, ವಾಹನದಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಅದಾಗ್ಯೂ, ಮಹಿಳಾ ಅಧಿಕಾರಿಯ ಹೇಳಿಕೆಯನ್ನು ಎಫ್‌ಐಆರ್‌ನಲ್ಲಿ ಸೇರಿಸುವುದಿಲ್ಲ ಎಂದು ನ್ಯಾಯಾಲಯ ಶುಕ್ರವಾರ ಹೇಳಿದೆ. “ಇದು ಆರೋಪಿಯನ್ನು ದೀರ್ಘಕಾಲದವರೆಗೆ ಬಂಧನದಲ್ಲಿಡಲು, ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶದಿಂದ ತಯಾರಿಸಲ್ಪಟ್ಟಿದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ 

“ಇಬ್ಬರು ಪುರುಷ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಗೌರವಕ್ಕೆ ಧಕ್ಕೆ ತರಲು ಯಾವುದೇ ವಿವೇಕಯುತ ವ್ಯಕ್ತಿ ಎಂದಿಗೂ ಪ್ರಯತ್ನಿಸುವುದಿಲ್ಲ. ಆರೋಪಿಯು ಹುಚ್ಚುತನದ ವ್ಯಕ್ತಿ ಎಂಬ ಯಾವ ದಾಖಲೆ ಕೂಡಾ ಇಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....