Homeಕರ್ನಾಟಕಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ನೇಮಕಾತಿ ಸಮಿತಿ ರದ್ದು ಮಾಡಿ, ಪರೀಕ್ಷೆಯೇ ಮಾನದಂಡ ಎಂದು ಪ್ರವೇಶ ಪರೀಕ್ಷೆಗಳನ್ನು ಆರಂಭಿಸಲಾಯಿತು. ಇದು ಆರಂಭವಾದ ನಂತರ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗೊಂದಲ ಉದ್ಭವಿಸಿದ್ದನ್ನು ನೋಡಿದ್ದೇವೆ. ಇದರ ವಿಚಾರಣೆ ನಡೆದಿದ್ದು, ಕೋರ್ಟ್ ಹಾಗೂ ಸರ್ಕಾರ ಭಿನ್ನ ತೀರ್ಮಾನ ಕೈಗೊಂಡಿರುವುದನ್ನು ನೋಡಿದ್ದೇವೆ. ಸರ್ಕಾರದ ಎಲ್ಲ ನೇಮಕಾತಿ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ, ಅಕ್ರಮ, ಹಗರಣಗಳ ಸರಮಾಲೆ ಇದೆ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ ಸೇರಿದಂತೆ ಅನೇಕ ಕಡೆಗಳಲ್ಲಿ ಅಕ್ರಮವಾಗಿದೆ. ರಾಜ್ಯದಲ್ಲಿ ಯುವಕರ, ಉದ್ಯೋಗಕಾಂಕ್ಷಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ಇಪ್ಪತ್ತು ದಿನಗಳ ನಂತರ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿಯವರು ಈ ಅಕ್ರಮದ ಆರೋಪವನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸಿದರು. ಬಿಜೆಪಿಯವರು ತಾವು ಹಣ್ಣು ತಿಂದು ಬೇರೆಯವರ ಮೂತಿ ಮೇಲೆ ಸಿಪ್ಪೆ ಇಡುವ ಪ್ರಯತ್ನ ಮಾಡುತ್ತಾರೆ. ಅದು ಯಶಸ್ಸಾಗುವುದಿಲ್ಲ ಎಂದು ಹೇಳಿದರು.

ಗೃಹಮಂತ್ರಿಗಳು ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಧಿವೇಶನದಲ್ಲೇ ಹೇಳಿದ್ದರು. ನಮ್ಮ ಶಾಸಕರು, ನಾಯಕರು ಈ ಅಕ್ರಮದ ವಿಚಾರ ಬಹಿರಂಗ ಪಡಿಸಿದರೆ, ಅವರನ್ನು ಬೆದರಿಸಲು ನೊಟೀಸ್ ನೀಡುತ್ತೀರಿ. ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಹೆದರುವುದಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ನಿಮ್ಮ ಮುಂಖಂಡರೇ ಗೌಪ್ಯ ಸ್ಥಳದಲ್ಲಿ ಇಟ್ಟಿದ್ದರು ಎಂದು ನಿಮಗೆ ಗೊತ್ತಿದೆ. ಅವರ ವಿಚಾರಣೆ ಮಾಡುವ ಮುನ್ನವೇ, ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಬಹಿರಂಗವಾಗುವ ಮುನ್ನವೇ ಈ ಹಿಂದೆ ನಡೆದಿರುವ ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆಗೆ ಆದೇಶ ನೀಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ಈ ನಿರ್ಣಯ ಕೈಗೊಳ್ಳಬೇಕಾದರೆ ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಖಚಿತವಾಗಿರಬೇಕು. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೇ ಈ ಪಿಎಸ್‌ಐ ನೇಮಕಾತಿಯಲ್ಲಿ ಯಾರು ಅಕ್ರಮ ಮಾಡಿದ್ದಾರೋ, ಅವರನ್ನು ಹೊರತುಪಡಿಸಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ ಸರ್ಕಾರ ಅವರ ಹೇಳಿಕೆ ನಿರ್ಲಕ್ಷಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಇದೊಂದು ಬಿಜೆಪಿ ಅಕ್ರಮವಾಗಿದ್ದು, ಬಿಜೆಪಿ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಿಂದ ರಾಜ್ಯದ ಘನತೆ ಏನಾಗಿದೆ ಎಂದು ಸರ್ಕಾರ ಅರಿತಿದೆಯೇ? ಪೊಲೀಸ್ ಅಧಿಕಾರಿಯಾಗುವ ಅಭ್ಯರ್ಥಿಗಳಲ್ಲಿ ಈ ಭ್ರಷ್ಟಾಚಾರದ ಭಾವನೆ ಮೂಡಿದರೆ ಮುಂದೆ ಏನಾಗಬಹುದು ಎಂಬ ಪರಿಜ್ಞಾನ ಸರ್ಕಾರಕ್ಕೆ ಇದೆಯಾ? ಇತರೆ ಇಲಾಖೆಗಳಲ್ಲಿ ನೇಮಕಾತಿ ಅಕ್ರಮದ ಬಗ್ಗೆ ಸಚಿವರು ಯಾಕೆ ಮಾತನಾಡುತ್ತಿಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ಕೆಲವು ಸಚಿವರ ರಾಜೀನಾಮೆ ಕೇಳಿದ್ದಾರೆ. ಆದರೆ ಕೊಡದಷ್ಟು ಅವರು ಭಂಡರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ತಪ್ಪುಗಳ ಸರಮಾಲೆ: 5 ಎಡವಟ್ಟುಗಳಿಗೆ ಮಾತ್ರ ಕೆಇಎ ಸಮಜಾಯಿಷಿ!

ಈ ಅಕ್ರಮಕ್ಕೆ ಮುಖ್ಯಮಂತ್ರಿಗಳೂ ಜವಾಬ್ದಾರರಾಗಿದ್ದಾರೆ. ನಿಮ್ಮ ಸರ್ಕಾರ ಅಕ್ರಮಗಳ ಸರಮಾಲೆ ಧರಿಸಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ನಿಮ್ಮ ನಾಯಕರು, ಅಧಿಕಾರಿಗಳ ಹೆಸರನ್ನು ನಾವು ಬಹಿರಂಗ ಪಡಿಸುವ ಮುನ್ನ ನೀವೇ ಬಹಿರಂಗ ಮಾಡಬೇಕು. ಇಡೀ ನಿಮ್ಮ ಪಕ್ಷ ಈ ನೇಮಕಾತಿ ಅಕ್ರಮದ ಕೊಳಕಿನಲ್ಲಿ ಮುಳುಗಿ ಒದ್ದಾಡುತ್ತಿದೆ. ಈ ಮಕ್ಕಳು ನ್ಯಾಯಾಲಯದ ಮೆಟ್ಟಿಲೇರಲು ನೀವೇ ದಾರಿ ಮಾಡಿಕೊಡುತ್ತಿದ್ದೀರಿ. ನ್ಯಾಯಾಲಯದ ವಿಚಾರಣೆ ಹೆಸರಲ್ಲಿ ಇದು ಮುಂದಕ್ಕೆ ಹೋಗಬೇಕು ಎಂಬುದು ನಿಮ್ಮ ಕುತಂತ್ರ ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿಇಟಿ ಆರಂಭಿಸಿ, ಒಂದು ಪ್ರಾಧಿಕಾರ ರಚಿಸಿ ಕಾಲೇಜು ಸೀಟು ಹಂಚಿಕೆಯಲ್ಲಿ ಪಾರದರ್ಶಕತೆಯನ್ನು ತಂದಿತು. ಈಗಿರುವ ತಂತ್ರಜ್ಞಾನ ಬಳಸಿಕೊಂಡು ಪಾರದರ್ಶಕತೆ ಹೆಚ್ಚಿಸಬೇಕು. ಆದರೆ ನೀವು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡಿ, ಒಂದೊಂದು ಹುದ್ದೆಗೂ 80 ಲಕ್ಷ ವಸೂಲಿ ಮಾಡಿಕೊಂಡಿದ್ದೀರಿ. ವರದಿಯಲ್ಲಿ ನಿಮ್ಮವರ ಹೆಸರು ಬರಲಿದೆ ಎಂಬ ಕಾರಣಕ್ಕೆ ಮರುಪರೀಕ್ಷೆಗೆ ಆದೇಶಿಸಿದ್ದೀರಿ. ನಿಮ್ಮ ಈ ತಪ್ಪಿಗೆ ಯಾರು ಶಿಕ್ಷೆ ನೀಡಬೇಕು? ನಿಮಗೆ ರಾಜ್ಯದ ಜನತೆ, ಯುವಕರು, ರಾಜ್ಯದ ತಂದೆ ತಾಯಂದಿರು, ಮತದಾರ ಪ್ರಭುಗಳು ಶಿಕ್ಷೆ ನೀಡಲಿದ್ದಾರೆ. ನಿಮ್ಮನ್ನು ಜನರೇ ಕಿತ್ತೊಗೆಯುತ್ತಾರೆ. ಆ ಕಾಲ ಸನಿಹವಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...