Homeಕರ್ನಾಟಕಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಆದೇಶಿಸಿರುವುದು ಖಂಡನೀಯ. ಇದು ಈ ಅಕ್ರಮದಲ್ಲಿ ಭಾಗಿಯಾಗಿರುವ ಆಡಳಿತ ಪಕ್ಷದ ನಾಯಕರ ರಕ್ಷಣೆಯ ಪ್ರಯತ್ನವಾಗಿದ್ದು, ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾಗಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ನೇಮಕಾತಿ ಸಮಿತಿ ರದ್ದು ಮಾಡಿ, ಪರೀಕ್ಷೆಯೇ ಮಾನದಂಡ ಎಂದು ಪ್ರವೇಶ ಪರೀಕ್ಷೆಗಳನ್ನು ಆರಂಭಿಸಲಾಯಿತು. ಇದು ಆರಂಭವಾದ ನಂತರ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಗೊಂದಲ ಉದ್ಭವಿಸಿದ್ದನ್ನು ನೋಡಿದ್ದೇವೆ. ಇದರ ವಿಚಾರಣೆ ನಡೆದಿದ್ದು, ಕೋರ್ಟ್ ಹಾಗೂ ಸರ್ಕಾರ ಭಿನ್ನ ತೀರ್ಮಾನ ಕೈಗೊಂಡಿರುವುದನ್ನು ನೋಡಿದ್ದೇವೆ. ಸರ್ಕಾರದ ಎಲ್ಲ ನೇಮಕಾತಿ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ, ಅಕ್ರಮ, ಹಗರಣಗಳ ಸರಮಾಲೆ ಇದೆ. ಪಿಡಬ್ಲ್ಯೂಡಿ, ಶಿಕ್ಷಣ ಇಲಾಖೆ ಸೇರಿದಂತೆ ಅನೇಕ ಕಡೆಗಳಲ್ಲಿ ಅಕ್ರಮವಾಗಿದೆ. ರಾಜ್ಯದಲ್ಲಿ ಯುವಕರ, ಉದ್ಯೋಗಕಾಂಕ್ಷಿಗಳ ಭವಿಷ್ಯಕ್ಕೆ ಕೊಳ್ಳಿ ಇಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ಇಪ್ಪತ್ತು ದಿನಗಳ ನಂತರ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿಯವರು ಈ ಅಕ್ರಮದ ಆರೋಪವನ್ನು ಬೇರೆಯವರ ಮೇಲೆ ಹಾಕಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸಿದರು. ಬಿಜೆಪಿಯವರು ತಾವು ಹಣ್ಣು ತಿಂದು ಬೇರೆಯವರ ಮೂತಿ ಮೇಲೆ ಸಿಪ್ಪೆ ಇಡುವ ಪ್ರಯತ್ನ ಮಾಡುತ್ತಾರೆ. ಅದು ಯಶಸ್ಸಾಗುವುದಿಲ್ಲ ಎಂದು ಹೇಳಿದರು.

ಗೃಹಮಂತ್ರಿಗಳು ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅಧಿವೇಶನದಲ್ಲೇ ಹೇಳಿದ್ದರು. ನಮ್ಮ ಶಾಸಕರು, ನಾಯಕರು ಈ ಅಕ್ರಮದ ವಿಚಾರ ಬಹಿರಂಗ ಪಡಿಸಿದರೆ, ಅವರನ್ನು ಬೆದರಿಸಲು ನೊಟೀಸ್ ನೀಡುತ್ತೀರಿ. ಕಾಂಗ್ರೆಸ್ ಪಕ್ಷ ಇದಕ್ಕೆಲ್ಲ ಹೆದರುವುದಿಲ್ಲ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ನಿಮ್ಮ ಮುಂಖಂಡರೇ ಗೌಪ್ಯ ಸ್ಥಳದಲ್ಲಿ ಇಟ್ಟಿದ್ದರು ಎಂದು ನಿಮಗೆ ಗೊತ್ತಿದೆ. ಅವರ ವಿಚಾರಣೆ ಮಾಡುವ ಮುನ್ನವೇ, ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಬಹಿರಂಗವಾಗುವ ಮುನ್ನವೇ ಈ ಹಿಂದೆ ನಡೆದಿರುವ ಪರೀಕ್ಷೆ ರದ್ದು ಮಾಡಿ ಮರುಪರೀಕ್ಷೆಗೆ ಆದೇಶ ನೀಡಿರುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ಈ ನಿರ್ಣಯ ಕೈಗೊಳ್ಳಬೇಕಾದರೆ ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಖಚಿತವಾಗಿರಬೇಕು. ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರೇ ಈ ಪಿಎಸ್‌ಐ ನೇಮಕಾತಿಯಲ್ಲಿ ಯಾರು ಅಕ್ರಮ ಮಾಡಿದ್ದಾರೋ, ಅವರನ್ನು ಹೊರತುಪಡಿಸಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ ಸರ್ಕಾರ ಅವರ ಹೇಳಿಕೆ ನಿರ್ಲಕ್ಷಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಇದೊಂದು ಬಿಜೆಪಿ ಅಕ್ರಮವಾಗಿದ್ದು, ಬಿಜೆಪಿ ನಾಯಕರ ರಕ್ಷಣೆಗೆ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಪ್ರಕರಣದಿಂದ ರಾಜ್ಯದ ಘನತೆ ಏನಾಗಿದೆ ಎಂದು ಸರ್ಕಾರ ಅರಿತಿದೆಯೇ? ಪೊಲೀಸ್ ಅಧಿಕಾರಿಯಾಗುವ ಅಭ್ಯರ್ಥಿಗಳಲ್ಲಿ ಈ ಭ್ರಷ್ಟಾಚಾರದ ಭಾವನೆ ಮೂಡಿದರೆ ಮುಂದೆ ಏನಾಗಬಹುದು ಎಂಬ ಪರಿಜ್ಞಾನ ಸರ್ಕಾರಕ್ಕೆ ಇದೆಯಾ? ಇತರೆ ಇಲಾಖೆಗಳಲ್ಲಿ ನೇಮಕಾತಿ ಅಕ್ರಮದ ಬಗ್ಗೆ ಸಚಿವರು ಯಾಕೆ ಮಾತನಾಡುತ್ತಿಲ್ಲ. ನಮ್ಮ ವಿರೋಧ ಪಕ್ಷದ ನಾಯಕರು ಕೆಲವು ಸಚಿವರ ರಾಜೀನಾಮೆ ಕೇಳಿದ್ದಾರೆ. ಆದರೆ ಕೊಡದಷ್ಟು ಅವರು ಭಂಡರಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿರಿ: ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ತಪ್ಪುಗಳ ಸರಮಾಲೆ: 5 ಎಡವಟ್ಟುಗಳಿಗೆ ಮಾತ್ರ ಕೆಇಎ ಸಮಜಾಯಿಷಿ!

ಈ ಅಕ್ರಮಕ್ಕೆ ಮುಖ್ಯಮಂತ್ರಿಗಳೂ ಜವಾಬ್ದಾರರಾಗಿದ್ದಾರೆ. ನಿಮ್ಮ ಸರ್ಕಾರ ಅಕ್ರಮಗಳ ಸರಮಾಲೆ ಧರಿಸಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ನಿಮ್ಮ ನಾಯಕರು, ಅಧಿಕಾರಿಗಳ ಹೆಸರನ್ನು ನಾವು ಬಹಿರಂಗ ಪಡಿಸುವ ಮುನ್ನ ನೀವೇ ಬಹಿರಂಗ ಮಾಡಬೇಕು. ಇಡೀ ನಿಮ್ಮ ಪಕ್ಷ ಈ ನೇಮಕಾತಿ ಅಕ್ರಮದ ಕೊಳಕಿನಲ್ಲಿ ಮುಳುಗಿ ಒದ್ದಾಡುತ್ತಿದೆ. ಈ ಮಕ್ಕಳು ನ್ಯಾಯಾಲಯದ ಮೆಟ್ಟಿಲೇರಲು ನೀವೇ ದಾರಿ ಮಾಡಿಕೊಡುತ್ತಿದ್ದೀರಿ. ನ್ಯಾಯಾಲಯದ ವಿಚಾರಣೆ ಹೆಸರಲ್ಲಿ ಇದು ಮುಂದಕ್ಕೆ ಹೋಗಬೇಕು ಎಂಬುದು ನಿಮ್ಮ ಕುತಂತ್ರ ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರ ಸಿಇಟಿ ಆರಂಭಿಸಿ, ಒಂದು ಪ್ರಾಧಿಕಾರ ರಚಿಸಿ ಕಾಲೇಜು ಸೀಟು ಹಂಚಿಕೆಯಲ್ಲಿ ಪಾರದರ್ಶಕತೆಯನ್ನು ತಂದಿತು. ಈಗಿರುವ ತಂತ್ರಜ್ಞಾನ ಬಳಸಿಕೊಂಡು ಪಾರದರ್ಶಕತೆ ಹೆಚ್ಚಿಸಬೇಕು. ಆದರೆ ನೀವು ನಿಮ್ಮ ಕಾರ್ಯಕರ್ತರಿಗೆ ಕುಮ್ಮಕ್ಕು ನೀಡಿ, ಒಂದೊಂದು ಹುದ್ದೆಗೂ 80 ಲಕ್ಷ ವಸೂಲಿ ಮಾಡಿಕೊಂಡಿದ್ದೀರಿ. ವರದಿಯಲ್ಲಿ ನಿಮ್ಮವರ ಹೆಸರು ಬರಲಿದೆ ಎಂಬ ಕಾರಣಕ್ಕೆ ಮರುಪರೀಕ್ಷೆಗೆ ಆದೇಶಿಸಿದ್ದೀರಿ. ನಿಮ್ಮ ಈ ತಪ್ಪಿಗೆ ಯಾರು ಶಿಕ್ಷೆ ನೀಡಬೇಕು? ನಿಮಗೆ ರಾಜ್ಯದ ಜನತೆ, ಯುವಕರು, ರಾಜ್ಯದ ತಂದೆ ತಾಯಂದಿರು, ಮತದಾರ ಪ್ರಭುಗಳು ಶಿಕ್ಷೆ ನೀಡಲಿದ್ದಾರೆ. ನಿಮ್ಮನ್ನು ಜನರೇ ಕಿತ್ತೊಗೆಯುತ್ತಾರೆ. ಆ ಕಾಲ ಸನಿಹವಾಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...