Homeಮುಖಪುಟದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...