Homeಮುಖಪುಟದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...