Homeಕರ್ನಾಟಕಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

ಬೆಂಗಳೂರು: ಪಿಎಂ ಕಚೇರಿಯಲ್ಲಿ ಕೆಲಸದಲ್ಲಿದ್ದೇನೆಂದು ನಂಬಿಸಿ ₹89 ಲಕ್ಷ ವಂಚನೆ; ವ್ಯಕ್ತಿ ಬಂಧನ

- Advertisement -
- Advertisement -

ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಗೆ ವೀಸಾ ಕೊಡಿಸುವುದಾಗಿ ಭರವಸೆ ನೀಡಿ ₹89 ಲಕ್ಷ ವಂಚಿಸಿದ ಆರೋಪದ ಮೇಲೆ 33 ವರ್ಷದ ಬೆಂಗಳೂರಿನ ನಿವಾಸಿಯೊಬ್ಬನನ್ನು ಬುಧವಾರ ಪೊಲೀಸರು ಬಂಧಿಸಲಾಗಿದೆ.

ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಕೆಲಸ ಮಾಡಿರುವುದಾಗಿ ಹೇಳಿಕೊಂಡಿರುವ ಅರಹಂತ್ ಮೋಹನ್ ಕುಮಾರ್ ಲಕ್ಕವಳ್ಳಿ ಅವರು ಬಿಕಾಂ ಪದವೀಧರರಾಗಿದ್ದು, ಬೆಂಗಳೂರಿನ ರಾಜಾಜಿನಗರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತೆಯು 2019ರ ಜೂನ್‌ನಲ್ಲಿ ಕೌಲಾಲಂಪುರಕ್ಕೆ ಹೋಗುವಾಗ ವಿಮಾನದಲ್ಲಿ ಮೋಹನ್ ಕುಮಾರ್ ಅವರನ್ನು ಭೇಟಿಯಾಗಿದ್ದರು. ಏಪ್ರಿಲ್ 26 ರಂದು ಬೆಳ್ಳಂದೂರು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ಇಟಾಲಿಯನ್ ಮತ್ತು ಜೆಕ್ ರಿಪಬ್ಲಿಕ್ ವೀಸಾಗಳಿಗಾಗಿ ಮಹಿಳೆ ಅರ್ಜಿಯನ್ನು ಸಲ್ಲಿಸಿದಾಗ ತಿರಸ್ಕೃತವಾಗಿದ್ದವು. ಜನವರಿ 2020ರಲ್ಲಿ ಅವರು ವೀಸಾವನ್ನು ಪಡೆದರು. ಆದರೆ ಅರ್ಜಿಯನ್ನು ಮೊದಲು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ತಿಳಿದುಕೊಳ್ಳಲು ಬಯಸಿದ್ದರು.

ಮಹಿಳೆಗೆ ಸಹಾಯ ಮಾಡಲು ಮುಂದಾಗಿ ವಿಮಾನದಲ್ಲಿ ಮಹಿಳೆಯನ್ನು ಭೇಟಿಯಾದಾಗ ತನ್ನನ್ನು IB ಅಧಿಕಾರಿ ಎಂದು ಪರಿಚಯಿಸಿಕೊಂಡ ಕುಮಾರ್, ನಿಮ್ಮ ಪಾಸ್‌ಪೋರ್ಟ್ ಅನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ನಿಮ್ಮನ್ನು “ಶಂಕಿತ ಭಯೋತ್ಪಾದಕ ಚಟುವಟಿಕೆಗಳ ಕಾಯ್ದೆ”ಯಡಿ ಹೆಸರಿಸಲಾಗಿದೆ ಎಂದು ನಂಬಿಸಿದ್ದನು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಪೊಲೀಸರ ಪ್ರಕಾರ, ಮಹಿಳೆ ತನ್ನ ಹೆಸರನ್ನು ತೆರವುಗೊಳಿಸಲು ಕುಮಾರ್‌ನ ಸಹಾಯವನ್ನು ಕೋರಿದ್ದರು. ಆಸ್ಟ್ರಿಯಾ ಮತ್ತು ಜೆಕ್ ರಿಪಬ್ಲಿಕ್‌ನ ಅಧಿಕಾರಿಗಳಿಗೆ 5 ಲಕ್ಷ ಯುರೋ (ಅಂದಾಜು ₹ 4 ಕೋಟಿ) ಮತ್ತು 2 ಲಕ್ಷ ಯೂರೋ (ಅಂದಾಜು ₹ 2 ಕೋಟಿ) ಪಾವತಿಸಬೇಕಾಗುತ್ತದೆ ಎಂದು ಮೋಹನ್‌ ಬಂಬಿಸಿದ್ದನು. 2021ರ ಫೆಬ್ರವರಿ ಮತ್ತು ಸೆಪ್ಟೆಂಬರ್‌ನಲ್ಲಿ, ಈ ಉದ್ದೇಶಕ್ಕಾಗಿ ಮಹಿಳೆ ₹89 ಲಕ್ಷವನ್ನು ಮೋಹನ್‌ಗೆ ವರ್ಗಾಯಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆತನಿಂದ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದಾಗ ಸಂತ್ರಸ್ತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ಇದರ ಬೆನ್ನಲ್ಲೇ ಮರುದಿನ ಪೊಲೀಸರು ಆತನನ್ನು ಬಂಧಿಸಿದ್ದು, ಮಹಿಳೆಯಿಂದ ಸಾಕಷ್ಟು ದಾಖಲೆಗಳನ್ನು ಕೂಡ ಸಂಗ್ರಹಿಸಿರುವುದು ತಿಳಿದುಬಂದಿದೆ ಎಂದು ಹಿಂದೂಸ್ತಾನ್‌ ಟೈಮ್ಸ್ ವರದಿ ಮಾಡಿದೆ.

ಉಪ ಪೊಲೀಸ್ ಕಮಿಷನರ್ (ವೈಟ್‌ಫೀಲ್ಡ್) ಎಸ್ ಗಿರೀಶ್ ಪ್ರತಿಕ್ರಿಯೆ ನೀಡಿದ್ದು, “ಆತ ಯುರೋಪ್ ಮತ್ತು ಇತರ ದೇಶಗಳಲ್ಲಿ ಪ್ರಯಾಣಿಸಿದ್ದು, ತನಿಖೆಗೆ ಸಹಕರಿಸುತ್ತಿಲ್ಲ. ಇತರರಿಗೆ ಆತ ಮೋಸ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆತನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದೇವೆ. ಹಣವನ್ನು ವಾಪಸ್ ಪಡೆಯುತ್ತೇವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...