Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...