Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...