Homeರಾಷ್ಟ್ರೀಯಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

ಮುಸ್ಲಿಮರ ವಿರುದ್ದ ದ್ವೇಷ ಭಾಷಣ: ಕೇರಳದ ಮಾಜಿ ಶಾಸಕನ ಬಂಧನ, ಜಾಮೀನು

- Advertisement -
- Advertisement -

ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಇದರ ನಂತರ ಅವರಿಗೆ ತಿರುವನಂತಪುರಂನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.

ಪಿಸಿ ಜಾರ್ಜ್ ಅವರನ್ನು ಪೊಲೀಸರು ಅವರ ನಿವಾಸದಿಂದ ರಸ್ತೆ ಮಾರ್ಗವಾಗಿ ತಿರುವನಂತಪುರಕ್ಕೆ ಕರೆತಂದು ಅವರನ್ನು ಔಪಚಾರಿಕವಾಗಿ ಬಂಧನವನ್ನು ದಾಖಲಿಸಿದ್ದಾರೆ. ನಂತರ ಅವರನ್ನು ಡ್ಯೂಟಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಅವರು ಅವರಿಗೆ ಜಾಮೀನು ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಾಮೀನು ಮಂಜೂರು ಆದ ನಂತರ, ನ್ಯಾಯಾಲಯದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಪಿ.ಸಿ. ಜಾರ್ಜ್, “ತನಿಖೆಯಲ್ಲಿ ಮಧ್ಯಪ್ರವೇಶಿಸದಂತೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಅಥವಾ ಯಾವುದೇ ದ್ವೇಷದ ಭಾಷಣಗಳನ್ನು ಮಾಡದಂತೆ ಅಥವಾ ಯಾವುದೇ ವಿವಾದಗಳಲ್ಲಿ ಭಾಗಿಯಾಗದಂತೆ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ಅವರ ನಿವಾಸದಿಂದ ಮುಂಜಾನೆ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು. ನಂತರ ಅವರ ವೈಯಕ್ತಿಕ ವಾಹನದಲ್ಲಿ ತಿರುವನಂತಪುರಂ ಎ.ಆರ್. ಕ್ಯಾಂಪ್‌ಗೆ ರಸ್ತೆಯ ಮೂಲಕ ಕರೆದೊಯ್ದು, ಅಲ್ಲಿ IPC ಯ ಸೆಕ್ಷನ್ 153A ಅಡಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಅಪರಾಧ) ಯಲ್ಲಿ ಅವರ ಬಂಧನವನ್ನು ಔಪಚಾರಿಕವಾಗಿ ದಾಖಲಿಸಲಾಗಿದೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅನಿಲ್ ಕಾಂತ್ ಅವರ ನಿರ್ದೇಶನದ ಮೇರೆಗೆ ತಿರುವನಂತಪುರಂ ಫೋರ್ಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಪಿಸಿ ಜಾರ್ಜ್ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆವರನ್ನು ಕಸ್ಟಡಿಗೆ ತೆಗೆದುಕೊಂಡಾಗಿನಿಂದ ಆತನ ಬಂಧನ ದಾಖಲಾಗುವವರೆಗೆ ತಿರುವನಂತಪುರದ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಿದ್ದಾರೆ.

ಈ ಮಧ್ಯೆ ಎ.ಆರ್. ಕ್ಯಾಂಪ್‌ ಹೊರಗೆ ಡಿವೈಎಫ್‌ಐ ಕಾರ್ಯಕರ್ತರು ಕಪ್ಪು ಬಾವುಟವನ್ನು ಬೀಸಿ, ಪಿ.ಸಿ. ಜಾರ್ಜ್ ಅವರಿಗೆ ಧಿಕ್ಕಾರ ಕೂಗಿದ್ದು, ಆರೋಪಿ ಪಿಸಿ ಜಾರ್ಜ್ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೊಳೆತ ಮೊಟ್ಟೆಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರನ್ನು ಭೇಟಿ ಮಾಡಲು ಬಂದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರಿಗೆ ಎಆರ್ ಕ್ಯಾಂಪ್ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಏಪ್ರಿಲ್ 29 ರಂದು ತಿರುವನಂತಪುರಂನ ಅನಂತಪುರಿ ಹಿಂದೂ ಮಹಾ ಸಮ್ಮೇಳನದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಪಿ.ಸಿ ಜಾರ್ಜ್ ವಿರುದ್ಧ ಹಲವು ಸಂಘಟನೆಗಳು ದೂರು ದಾಖಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪಿ.ಸಿ. ಜಾರ್ಜ್, “ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ಗಳಿಗೆ ಹೋಗಬಾರದು. ಅವರು ದೇಶದ ಮೇಲೆ ಹಿಡಿತ ಸಾಧಿಸುವ ಉದ್ದೇಶದಿಂದ ಚಹಾದಲ್ಲಿ ಸಂತಾನಹರಣ ಆಗುವ ದ್ರವವನ್ನು ಅದರಲ್ಲಿ ಬಳಸುತ್ತಾರೆ” ಎಂದು ಹೇಳಿದ್ದರು.

33 ವರ್ಷಗಳ ಕಾಲ ರಾಜ್ಯ ವಿಧಾನಸಭೆಯಲ್ಲಿ ಪೂಂಜಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಜಾರ್ಜ್ ಅವರು ಮುಸ್ಲಿಮರು ನಡೆಸುತ್ತಿರುವ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಮುಸ್ಲಿಮೇತರರನ್ನು ಅಂದಿನ ಭಾಷಣದಲ್ಲಿ ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....