Homeರಾಷ್ಟ್ರೀಯಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಬಿಜೆಪಿ ಬೆಂಬಲದೊಂದಿಗೆ ಸರಪಂಚ್ ಕೂಡಾ ಆಗಿದ್ದ ಆರೋಪಿ, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಪಕ್ಷದ ನಾಯಕನನ್ನು ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದಾನೆ ಎಂಬ ಆರೋಪದಲ್ಲಿ ಎನ್‌ಐಎ ಬಂಧಿಸಿದೆ. ಭಯೋತ್ಪಾದನಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾಶ್ಮೀರದ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ ಪ್ರಕರಣದ ತನಿಖೆಯ ವೇಳೆ ಬಿಜೆಪಿ ನಾಯಕನ ಕೃತ್ಯಗಳು ಬೆಳಕಿಗೆ ಬಂದಿದೆ.

ಆರೋಪಿ ತಾರಿಕ್‌ ಮಿರ್‌‌ 2011ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್‌ನ ಸರಪಂಚ್ ಕೂಡಾ ಆಗಿದ್ದ ಎಂದು ವರದಿಯಾಗಿದ್ದು, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದನು. ಈತನನ್ನು ಎನ್‌ಐಎ ಬುಧವಾರ ಬಂಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಿಂದರ್‌ ಸಿಂಗ್ ಜೊತೆಗೆ ಬಂಧನಕ್ಕೆ ಒಳಗಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ ಶಂಕಿತ ಭಯೋತ್ಪಾದಕರನ್ನು ತನಿಖೆಗೆ ಒಳಪಡಿಸಿದಾಗ ಸಿಕ್ಕ ಮಾಹಿತಿಯಂತೆ ಆರೋಪಿ ತಾರೀಕ್ ಬಂಧನ ನಡೆದಿದೆ. ತಾರಿಕ್ ಮಿರ್‌‌ ವಿವಿಧ ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವಲ್ಲಿ ಒಳಗೊಂಡಿದ್ದನು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಆರೋಪಿ ತಾರಿಕ್‌ ಕಾಶ್ಮೀರದಲ್ಲಿ ಉಗ್ರಗಾಮಿಗಳಿಗೆ ಶಸ್ತ್ರಾಸ್ತ್ರ ತಲುಪಿಸುವ ಮಧ್ಯವರ್ತಿಯಾಗಿದ್ದನೆಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿದ ಅಧಿಕಾಗಳು ಆರು ದಿನಗಳ ಕಸ್ಟಡಿಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ.

ದೇವಿಂದರ್ ಸಿಂಗ್ ಬಂಧನ ಪ್ರಕರಣದಲ್ಲಿ ಆತ ನೇರವಾಗಿ ಭಾಗಿಯಾಗದಿದ್ದರೂ ಹಿಜ್ಬುಲ್ ಮುಜಾಹಿದ್ದೀನ್‌ ಸೇರಿದಂತೆ ಹಲವು ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎಂದು ಎನ್‌ಐಎ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ತಾರಿಕ್‌ ಮಿರ್ ಹಿಜ್ಬುಲ್‌ ನೆಟ್‌ವರ್ಕ್‌ನಲ್ಲಿ ಭಾಗಿಯಾಗಿದ್ದಾನೆ ಎಂದು ಸೂಚಿಸಲು ಎನ್‌ಐಎ ‘ಬಲವಾದ ಲಿಂಕ್‌ಗಳನ್ನು’ ಕಂಡುಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

2011 ರಲ್ಲಿ, ತಾರಿಕ್‌‌ ಮಿರ್‌‌ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು. 2014ರ ವಿಧಾನಸಭೆ ಚುನಾವಣೆಯಲ್ಲಿ ವಾಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದನು.

ಸಂಸತ್ ದಾಳಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಅಫ್ಜಲ್ ಗುರುವನ್ನು ಬಂಧಿಸಿದವರು ಎಂದು ಹೇಳಲಾಗುತ್ತಿರುವ ಉನ್ನತ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ನನ್ನು ಜನವರಿಯಲ್ಲಿ ಉಗ್ರರೊಂದಿಗೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ಹಿಜ್ಬುಲ್ ಮುಜಾಹಿದ್ದೀನ್‌ನ ಸಂಘಟನೆಯ ಉಗ್ರಗಾಮಿಗಳೊಂದಿಗೆ ದೇವಿಂದರ್‌ ಸಿಂಗ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದನು.  2018 ರಲ್ಲಿ, ಅವರು ಶೌರ್ಯಕ್ಕಾಗಿ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...