Homeರಾಷ್ಟ್ರೀಯಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಜಮ್ಮು ಕಾಶ್ಮೀರ: ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಬಿಜೆಪಿ ನಾಯಕನ ಬಂಧನ

ಬಿಜೆಪಿ ಬೆಂಬಲದೊಂದಿಗೆ ಸರಪಂಚ್ ಕೂಡಾ ಆಗಿದ್ದ ಆರೋಪಿ, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಪಕ್ಷದ ನಾಯಕನನ್ನು ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದಾನೆ ಎಂಬ ಆರೋಪದಲ್ಲಿ ಎನ್‌ಐಎ ಬಂಧಿಸಿದೆ. ಭಯೋತ್ಪಾದನಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾಶ್ಮೀರದ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ ಪ್ರಕರಣದ ತನಿಖೆಯ ವೇಳೆ ಬಿಜೆಪಿ ನಾಯಕನ ಕೃತ್ಯಗಳು ಬೆಳಕಿಗೆ ಬಂದಿದೆ.

ಆರೋಪಿ ತಾರಿಕ್‌ ಮಿರ್‌‌ 2011ರಲ್ಲಿ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್‌ನ ಸರಪಂಚ್ ಕೂಡಾ ಆಗಿದ್ದ ಎಂದು ವರದಿಯಾಗಿದ್ದು, 2014 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದನು. ಈತನನ್ನು ಎನ್‌ಐಎ ಬುಧವಾರ ಬಂಧಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಿಂದರ್‌ ಸಿಂಗ್ ಜೊತೆಗೆ ಬಂಧನಕ್ಕೆ ಒಳಗಾಗಿದ್ದ ಹಿಜ್ಬುಲ್ ಮುಜಾಹಿದ್ದೀನ್‌ ಶಂಕಿತ ಭಯೋತ್ಪಾದಕರನ್ನು ತನಿಖೆಗೆ ಒಳಪಡಿಸಿದಾಗ ಸಿಕ್ಕ ಮಾಹಿತಿಯಂತೆ ಆರೋಪಿ ತಾರೀಕ್ ಬಂಧನ ನಡೆದಿದೆ. ತಾರಿಕ್ ಮಿರ್‌‌ ವಿವಿಧ ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುವಲ್ಲಿ ಒಳಗೊಂಡಿದ್ದನು ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಶಂಕಿತ ಭಯೋತ್ಪಾದಕ ದೇವೀಂದರ್‌ ಸಿಂಗ್ ವಿರುದ್ದ ಚಾರ್ಜ್‌ಶೀಟ್ ಸಲ್ಲಿಸಿದ ಎನ್‌‌ಐಎ

ಆರೋಪಿ ತಾರಿಕ್‌ ಕಾಶ್ಮೀರದಲ್ಲಿ ಉಗ್ರಗಾಮಿಗಳಿಗೆ ಶಸ್ತ್ರಾಸ್ತ್ರ ತಲುಪಿಸುವ ಮಧ್ಯವರ್ತಿಯಾಗಿದ್ದನೆಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಕೋರ್ಟ್‌ನಲ್ಲಿ ಹಾಜರುಪಡಿಸಿದ ಅಧಿಕಾಗಳು ಆರು ದಿನಗಳ ಕಸ್ಟಡಿಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ.

ದೇವಿಂದರ್ ಸಿಂಗ್ ಬಂಧನ ಪ್ರಕರಣದಲ್ಲಿ ಆತ ನೇರವಾಗಿ ಭಾಗಿಯಾಗದಿದ್ದರೂ ಹಿಜ್ಬುಲ್ ಮುಜಾಹಿದ್ದೀನ್‌ ಸೇರಿದಂತೆ ಹಲವು ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎಂದು ಎನ್‌ಐಎ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ತಾರಿಕ್‌ ಮಿರ್ ಹಿಜ್ಬುಲ್‌ ನೆಟ್‌ವರ್ಕ್‌ನಲ್ಲಿ ಭಾಗಿಯಾಗಿದ್ದಾನೆ ಎಂದು ಸೂಚಿಸಲು ಎನ್‌ಐಎ ‘ಬಲವಾದ ಲಿಂಕ್‌ಗಳನ್ನು’ ಕಂಡುಕೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಪ್ರಿಂಟ್ ವರದಿ ಮಾಡಿದೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

2011 ರಲ್ಲಿ, ತಾರಿಕ್‌‌ ಮಿರ್‌‌ ಬಿಜೆಪಿ ಬೆಂಬಲದೊಂದಿಗೆ ಶೋಪಿಯಾನ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದನು. 2014ರ ವಿಧಾನಸಭೆ ಚುನಾವಣೆಯಲ್ಲಿ ವಾಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದನು.

ಸಂಸತ್ ದಾಳಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಅಫ್ಜಲ್ ಗುರುವನ್ನು ಬಂಧಿಸಿದವರು ಎಂದು ಹೇಳಲಾಗುತ್ತಿರುವ ಉನ್ನತ ಪೊಲೀಸ್ ಅಧಿಕಾರಿ ದೇವಿಂದರ್ ಸಿಂಗ್‌ನನ್ನು ಜನವರಿಯಲ್ಲಿ ಉಗ್ರರೊಂದಿಗೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ಹಿಜ್ಬುಲ್ ಮುಜಾಹಿದ್ದೀನ್‌ನ ಸಂಘಟನೆಯ ಉಗ್ರಗಾಮಿಗಳೊಂದಿಗೆ ದೇವಿಂದರ್‌ ಸಿಂಗ್‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದನು.  2018 ರಲ್ಲಿ, ಅವರು ಶೌರ್ಯಕ್ಕಾಗಿ ರಾಷ್ಟ್ರಪತಿ ಪ್ರಶಸ್ತಿಯನ್ನು ಪಡೆದಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...