Homeದಲಿತ್ ಫೈಲ್ಸ್ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಪೆದ್ದನಹಳ್ಳಿಯಲ್ಲಿ ದಲಿತರ ಕೊಲೆ: ಮಾಹಿತಿ ಗೊತ್ತಿಲ್ಲ ಎಂದ ಸಚಿವ ಬಿ.ಸಿ.ನಾಗೇಶ್!

ಇಬ್ಬರು ಯುವಕರು ಕೊಲೆಯಾಗಿ 10 ದಿನ ಕಳೆದಿದೆ. ಉನ್ನತ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು ಪೆದ್ದನಹಳ್ಳಿಗೆ ಭೇಟಿ ನೀಡಿದ್ದಾರೆ. ಆದರೆ ಜಿಲ್ಲೆಯ ಸಚಿವರಿಗೆ ಘಟನೆ ಕುರಿತು ಮಾಹಿತಿ ಇಲ್ಲವಂತೆ!

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರು ಭೀಕರವಾಗಿ ಕೊಲೆಯಾಗಿ ಹತ್ತು ದಿನಗಳೇ ಕಳೆದವು. ಗಿರೀಶ್‌ ಎಂಬ ಹೆಸರಿನ ಇಬ್ಬರು ಯುವಕರು ಏ.21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಹತ್ಯೆಯಾದರು. ಈ ಘಟನೆಗೆ ರಾಜ್ಯದ ವಿವಿಧ ದಲಿತ ಸಂಘಟನೆಗಳು, ಹೋರಾಟಗಾರರು, ಅನೇಕ ರಾಜಕೀಯ ಮುಖಂಡರು ಪ್ರತಿಕ್ರಿಯಿಸಿ, ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ. ಆದರೆ ಇಷ್ಟೆಲ್ಲ ಬೆಳವಣಿಗೆಗಳಾದರೂ ಜಿಲ್ಲೆಯ ತಿಪಟೂರು ಕ್ಷೇತ್ರದ ಶಾಸಕ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪೆದ್ದನಹಳ್ಳಿಯ ಘಟನೆಯ ಕುರಿತು ಮಾಹಿತಿ ಇಲ್ಲವಂತೆ!

ಶಾಲಾ ಪಠ್ಯದಲ್ಲಿ ಕೋಮುರಾಜಕಾರಣ, ಹಿಜಾಬ್‌ ಹೆಸರಲ್ಲಿ ಗೊಂದಲ ಸೃಷ್ಟಿಗೆ ಥಟ್‌ ಅಂತ ಸ್ಪಂದಿಸುವ ಸಚಿವರು ದಲಿತ ಯುವಕರ ಹತ್ಯೆ ವಿಚಾರದಲ್ಲಿ ಬಹಳ ಉಢಾಪೆಯಾಗಿ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿಯಲ್ಲಿ ಇಬ್ಬರು ಯುವಕರ ಕೊಲೆಯಾಗುತ್ತದೆ. ಅಂದು ಗ್ರಾಮದಲ್ಲಿ ಕೊಲ್ಲಾಪುರದಮ್ಮನ ಜಾತ್ರೆಯನ್ನು ತಿಗಳ ಸಮುದಾಯದವರು ಹಮ್ಮಿಕೊಂಡಿರುತ್ತಾರೆ. ಅಂದು ಪೆದ್ದನಹಳ್ಳಿಯ ಮಾದಿಗ ಕುಟುಂಬದ ಗಿರೀಶ್ ಮನೆಗೆ ಗುಬ್ಬಿ ತಾಲ್ಲೂಕು ಹಾಗಲವಾಡಿ ಹೋಬಳಿಯ ಮಂಚಲದೊರೆ ನಿವಾಸಿ, ನಾಯಕ ಸಮುದಾಯದ ಗಿರೀಶ್ ಬಂದಿರುತ್ತಾರೆ. ಅಂದು ರಾತ್ರಿ ಲಿಂಗಾಯತ ಸಮುದಾಯದ ನಂದೀಶ್ ಎಂಬಾತ ಪೆದ್ದನಹಳ್ಳಿಯ ಗಿರೀಶ್‌ ಅವರನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾನೆ. ಮಂಚಲದೊರೆಯಿಂದ ಬಂದಿದ್ದ ಗಿರೀಶ್‌ ಕೂಡ ಗೆಳೆಯನನ್ನು ಹಿಂಬಾಲಿಸುತ್ತಾನೆ. ಆದರೆ ಬೆಳಿಗ್ಗೆ ನೋಡಿದರೆ ನೆಲ್ಲಿಗೆರೆ- ಸಿರಾ ರಸ್ತೆಯ ಪಕ್ಕದಲ್ಲಿನ ಹೊಂಡದ ಬಳಿ ಇಬ್ಬರು ಗಿರೀಶರೂ ಶವವಾಗಿ ಪತ್ತೆಯಾಗುತ್ತಾರೆ.

ಜಾತಿ ದೌರ್ಜನ್ಯ ಪ್ರಕರಣ ದಾಖಲಾಗುತ್ತದೆ. ಪೆದ್ದನಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ವಿಚಾರಿಸಿದ್ದಾರೆ. ತನಿಖೆ ಕೂಡ ಬಿರುಸಿನಿಂದ ಸಾಗಿದೆ. ಇಪ್ಪತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾದರೂ ಸಚಿವ ನಾಗೇಶ್‌ ಅವರ ಗಮನಕ್ಕೆ ಬಂದಿಲ್ಲ ಎಂದರೆ ನಂಬುವುದು ಹೇಗೆ? ಎಂಬುದು ಸದ್ಯದ ಪ್ರಶ್ನೆ

“ಪೆದ್ದನಹಳ್ಳಿಯಲ್ಲಿ ನಡೆದಿರುವ ದಲಿತ ಯುವಕರ ಕೊಲೆ ಪ್ರಕರಣದ ಘಟನೆ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಸಂಗ್ರಹಿಸಿ ಅಲ್ಲಿಗೆ ಭೇಟಿ ನೀಡುತ್ತೇನೆ” ಎಂದು ಬಿ.ಸಿ.ನಾಗೇಶ್‌ ಹೇಳಿರುವುದಾಗಿ ತುಮಕೂರಿನ ಪ್ರಾದೇಶಿಕ ಪತ್ರಿಕೆ ಪ್ರಜಾಪ್ರಗತಿ ವರದಿ ಮಾಡಿದೆ.

ಶನಿವಾರದಂದು ಪೆದ್ದನಹಳ್ಳಿಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ (ವಾಸು), ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದರು.

ಆ ಸಂದರ್ಭದಲ್ಲಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, “ಜಿಲ್ಲೆಯಲ್ಲಿ ಮೂವರು ಸಚಿವರಿದ್ದರೂ ಪೆದ್ದನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟಿಲ್ಲ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಸಿರಾದಲ್ಲಿ ಪ್ರತಿಕ್ರಿಯೆ ನೀಡಿರುವ ನಾಗೇಶ್‌ ಉಡಾಫೆಯಾಗಿ ಮಾತನಾಡಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

“ನಾನು ಪ್ರವಾಸದಲ್ಲಿದ್ದೆ. ಅದು ಜಿಲ್ಲಾ ಮಟ್ಟದ ಸುದ್ದಿಯಾಗಿದೆ. ಮಾಹಿತಿ ಪಡೆದು ಭೇಟಿ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, “ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಕೊಡಬೇಕೆಂದು ಈಗಾಗಲೇ ತಿರ್ಮಾನ ಮಾಡಲಾಗಿದೆ. ಅದಕ್ಕೊಂದು ಸಮಿತಿ ರಚನೆ ಮಾಡಲಾಗಿತ್ತು. ಅದನು ಏನೇನು ಇರಬೇಕೆಂದು ತೀರ್ಮಾನಿಸುತ್ತದೆ. ಭಗವದ್ಗೀತೆ ಜೊತೆಗೆ ಬೈಬಲ್, ಕುರಾನ್‌ ಇರಬೇಕೆಂದು ಕೆಲವರು ವಾದ ಮಾಡುತ್ತಾರೆ. ವಾದ ಮಾಡುವ ಗುಂಪು 60 ವರ್ಷದಲ್ಲಿ ನೈತಿಕ ಶಿಕ್ಷಣ ನೀಡುವ ಕೆಲಸ ಮಾಡಿದ್ದಿದ್ದರೆ ನಮಗೆ ಕೆಲಸ ಮಾಡುವಂತಹ ಅವಕಾಶನೇ ಇರ್ತಿರಲಿಲ್ಲ. ಮಾರಲ್ ಸೈನ್ಸ್‌ ಅನ್ನು ಯಾವ ಸರ್ಕಾರ ತೆಗೆದು ಹಾಕಿತ್ತು ಅನ್ನೋದನ್ನು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲವೂ ರಾಜಕೀಯ ಪ್ರೇರಿತ ನಿರ್ಧಾರಗಳಾಗಿರುವುದರಿಂದ ಶಿಕ್ಷಣ ಈ ಮಟ್ಟಕ್ಕೆ ಕುಸಿದಿದೆ” ಎಂದಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಧರ್ಮರಾಜಕಾರಣ, ಪಠ್ಯದ ಕೇಸರೀಕರಣದ ಕುರಿತು ಸದಾ ಧ್ಯಾನಿಸುವ ನಾಗೇಶ್ ಅವರಿಗೆ ತಮ್ಮ ಪಕ್ಕದ ಕ್ಷೇತ್ರವಾದ ತುರುವೇಕೆರೆಗೆ ಸೇರಿದ ಗ್ರಾಮವೊಂದರಲ್ಲಿ ನಡೆದಿರುವ ದುಷ್ಕೃತ್ಯವೊಂದು ತಿಳಿಯದೇ ಇರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಪ್ರಬಲ ಜಾತಿಗಳಿಗೆ ಸೇರಿದ್ದು, ದಲಿತರ ಮೇಲೆ ಸಚಿವರಿಗೆ ನಿಜವಾದ ಕಾಳಜಿ ಇಲ್ಲ ಎಂಬುದನ್ನು ಅವರು ಮಾತುಗಳು ಸೂಚಿಸುತ್ತಿವೆ ಎಂಬ ಅಭಿಪ್ರಾಯಗಳು ಬಂದಿವೆ.

ಇದನ್ನೂ ಓದಿರಿ: ಪೆದ್ದನಹಳ್ಳಿ ಪ್ರಕರಣ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!

ದಲಿತ ಹೋರಾಟಗಾರ ಕೊಟ್ಟ ಶಂಕರ್‌ ಹಾಕಿರುವ ಪೋಸ್ಟ್‌ಗೆ ಅನೇಕರು ಕಮೆಂಟ್ ಮಾಡಿ ನಾಗೇಶ್ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

“ಕೊಲೆ ಮಾಡಿದೋರು ಯಾರು ಅನ್ನೋದರ ಮೇಲೆ ಅವರಿಗೆ ಮಾಹಿತಿ ಹೋಗುತ್ತೆ. ಬಾಕಿ ಎಲ್ಲ ವಜಾ” ಎಂದು ಟೀನಾ ಶಶಿಕಾಂತ್‌ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯ ಮತ್ತು ದೇಶದಾದ್ಯಂತ ಪೆದ್ದನಹಳ್ಳಿ ಘಟನೆ ಬಗ್ಗೆ ಸುದ್ದಿಯಾಗಿದೆ. ಆದರೆ ಸಚಿವ ನಾಗೇಶ್ ಅವರಿಗೆ ಮಾತ್ರ ಗೊತ್ತಿಲ್ಲ ಅಂದ್ರೆ ಈ ಸಚಿವರು ನಿಷ್ಕ್ರಿಯರಾಗಿದ್ದಾರೆ. ಇವರಿಗೆ ಹಳ್ಳಿಗಳ ಮಕ್ಕಳ ವಿಷಯಗಳು ತಲುಪಲು ಸಾಧ್ಯವೆ ಇಲ್ಲ ಅಂದರೆ ಇವರು ಸಚಿವರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲವೆ? ಎಲ್ಲಿದ್ದೀರಿ ಸಚಿವರೆ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಪೆದ್ದನಹಳ್ಳಿಯಲ್ಲಿ ಘಟನೆ ನಡೆದಿದೆ. ನಿಮಗೆ ಮಾಹಿತಿ ಅಗತ್ಯವಿದ್ದರೆ ನಾವೇ ತಿಳಿಸುತ್ತೇವೆ” ಓಬಳೇಶ್‌ ಕೆ.ಬಿ. ತಿಳಿಸಿದ್ದಾರೆ.

“ಆರೆಸ್ಸೆಸ್ ಹಿಂದೂ ಸಂಘಟನೆಯ ಮುಖಂಡರುಗಳಿಗೆ ಚಿಕ್ಕ ಗಾಯ, ಚಿಕ್ಕ ಘಟನೆಯಾದರೂ ಓಡಿ ಓಡಿ ಅವರ ಬಳಿಗೆ ಹೋಗುತ್ತಾರೆ” ಎಂದು ರಾಮಯ್ಯ ಪಿ.ಎನ್‌.ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಾಪ ಈ ಮನುಷ್ಯ ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕ ಬರೀತಾ ಕೂತಿದ್ದಾನೆ. ಡಿಸ್ಟರ್ಬ್ ಮಾಡಬೇಡಿ….!!!

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...