Homeರಾಷ್ಟ್ರೀಯ‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

- Advertisement -
- Advertisement -

ಕೈಯ್ಯಲ್ಲಿ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಧರಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಯನ್ನು ಇತರ ಮೂವರು ವಿದ್ಯಾರ್ಥಿಗಳು ಸೇರಿಕೊಂಡು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿಯ ಶಾಲೆಯೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಘಟನೆಯು ಎಪ್ರಿಲ್ 25 ರಂದು ನಡೆದಿದ್ದು, ನಂತರ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಎಪ್ರಿಲ್ 30 ರಂದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಬಾಲಾಪರಾಧಿಗಳ ವಿಚಾರಣೆ ನಡೆಸಿದ್ದು, ಬಾಲನ್ಯಾಯ ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಿರುನೆಲ್ವೇಲಿ ಸಮೀಪದ ಸರ್ಕಾರಿ ಶಾಲೆಯ 12ನೇ ತರಗತಿಯ 17 ವರ್ಷದ ವಿದ್ಯಾರ್ಥಿಯು 11ನೇ ತರಗತಿಯ ವಿದ್ಯಾರ್ಥಿಗೆ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಯಾಕೆ ಹಾಕುತ್ತಿದ್ದೀಯ ಎಂದು ಕೇಳಿದ್ದಾನೆ. ಇದು ಅವರಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಇದರ ನಂತರ 11 ನೇ ತರಗತಿಗೆ ಸೇರಿದ ಇತರ ಇಬ್ಬರು ವಿದ್ಯಾರ್ಥಿಗಳು ಅವರ ನಡುವೆ ಗಲಾಟೆಗೆ ಸೇರಿಕೊಂಡಿದ್ದು, ಇದರಿಂದಾಗಿ ಶಾಲೆಯ ಆವರಣದಲ್ಲಿ ಹೊಡೆದಾಟ ನಡೆದಿದೆ.

ಇದನ್ನೂ ಓದಿ: ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರವರಿಗೆ ಮಧ್ಯಂತರ ಜಾಮೀನು

ಬಲಿಯಾದ ವಿದ್ಯಾರ್ಥಿಯೂ ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹನ್ನೊಂದನೇ ತರಗತಿಯ ವಿದ್ಯಾರ್ಥಿಯು ದಲಿತನಾಗಿದ್ದು, ಆತನ ಇಬ್ಬರು ಸಹಪಾಠಿಗಳು ಬೇರೆ ಧರ್ಮದವರಾಗಿದ್ದಾರೆ.

ಈ ಹೊಡೆದಾಟದಲ್ಲಿ ಹನ್ನೆರಡನೆಯ ತರಗತಿಯ 17 ವರ್ಷದ ಬಾಲಕನ ಮೇಲೆ ಇತರ ವಿದ್ಯಾರ್ಥಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆತನ ಎಡ ಕಿವಿ ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ನಂತರ ಬಾಲಕ ಅಸ್ವಸ್ಥಗೊಂಡಿದ್ದು, ಆತನನ್ನು ತಿರುನೆಳ್‌ವೇಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಡೆದಾಟದಿಂದಾಗಿ ತಲೆಗೆ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಆದಾಗ್ಯೂ ಅವರು ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 30 ರಂದು ಬಲಿಯಾಗಿದ್ದಾರೆ.

ಹನ್ನೆರಡನೇ ತರಗತಿಯ ವಿದ್ಯಾರ್ಥಿಯ ಸಾವಿನಿಂದಾಗಿ ಪ್ರದೇಶದವು ಉದ್ವಿಗ್ನತೆ ಉಂಟಾಗಿದ್ದು, ಮೃತರ ಕುಟುಂಬ ಮತ್ತು ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ ರಸ್ತೆ ತಡೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ನಿರ್ದಿಷ್ಟ ಜಾತಿ ಗುರುತು ಕಾಣುವ ರಿಸ್ಟ್ ಬ್ಯಾಂಡ್‌ಗಳಿಗೆ ಅನುಮತಿ ನೀಡದಂತೆ ಖಾತ್ರಿಪಡಿಸಿಕೊಳ್ಳಲು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಶಾಲೆಯು ತಿರುನೆಲ್ವೇಲಿಯ ಸುಮಾರು 40 ಕಿಮೀ ದೂರದಲ್ಲಿರುವ ಅಂಬಾಸಮುದ್ರ ಪ್ರದೇಶದಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...