Homeರಾಷ್ಟ್ರೀಯ‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

‘ಜಾತಿ ಸೂಚಕ ರಿಸ್ಟ್‌‌ ಬ್ಯಾಂಡ್ ವಿಚಾರ’: 17 ವರ್ಷದ ವಿದ್ಯಾರ್ಥಿಯನ್ನು ಥಳಿಸಿ ಕೊಂದ ಸಹಪಾಠಿಗಳು

- Advertisement -
- Advertisement -

ಕೈಯ್ಯಲ್ಲಿ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಧರಿಸಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಯನ್ನು ಇತರ ಮೂವರು ವಿದ್ಯಾರ್ಥಿಗಳು ಸೇರಿಕೊಂಡು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿಯ ಶಾಲೆಯೊಂದರಲ್ಲಿ ನಡೆದಿದೆ. ಘಟನೆ ಸಂಬಂಧ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಘಟನೆಯು ಎಪ್ರಿಲ್ 25 ರಂದು ನಡೆದಿದ್ದು, ನಂತರ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಎಪ್ರಿಲ್ 30 ರಂದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರು ಬಾಲಾಪರಾಧಿಗಳ ವಿಚಾರಣೆ ನಡೆಸಿದ್ದು, ಬಾಲನ್ಯಾಯ ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಿರುನೆಲ್ವೇಲಿ ಸಮೀಪದ ಸರ್ಕಾರಿ ಶಾಲೆಯ 12ನೇ ತರಗತಿಯ 17 ವರ್ಷದ ವಿದ್ಯಾರ್ಥಿಯು 11ನೇ ತರಗತಿಯ ವಿದ್ಯಾರ್ಥಿಗೆ ಜಾತಿ ಸೂಚಕ ರಿಸ್ಟ್ ಬ್ಯಾಂಡ್‌ ಯಾಕೆ ಹಾಕುತ್ತಿದ್ದೀಯ ಎಂದು ಕೇಳಿದ್ದಾನೆ. ಇದು ಅವರಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಇದರ ನಂತರ 11 ನೇ ತರಗತಿಗೆ ಸೇರಿದ ಇತರ ಇಬ್ಬರು ವಿದ್ಯಾರ್ಥಿಗಳು ಅವರ ನಡುವೆ ಗಲಾಟೆಗೆ ಸೇರಿಕೊಂಡಿದ್ದು, ಇದರಿಂದಾಗಿ ಶಾಲೆಯ ಆವರಣದಲ್ಲಿ ಹೊಡೆದಾಟ ನಡೆದಿದೆ.

ಇದನ್ನೂ ಓದಿ: ದಲಿತ ಹೋರಾಟಗಾರ ಹಾರೋಹಳ್ಳಿ ರವೀಂದ್ರವರಿಗೆ ಮಧ್ಯಂತರ ಜಾಮೀನು

ಬಲಿಯಾದ ವಿದ್ಯಾರ್ಥಿಯೂ ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹನ್ನೊಂದನೇ ತರಗತಿಯ ವಿದ್ಯಾರ್ಥಿಯು ದಲಿತನಾಗಿದ್ದು, ಆತನ ಇಬ್ಬರು ಸಹಪಾಠಿಗಳು ಬೇರೆ ಧರ್ಮದವರಾಗಿದ್ದಾರೆ.

ಈ ಹೊಡೆದಾಟದಲ್ಲಿ ಹನ್ನೆರಡನೆಯ ತರಗತಿಯ 17 ವರ್ಷದ ಬಾಲಕನ ಮೇಲೆ ಇತರ ವಿದ್ಯಾರ್ಥಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಆತನ ಎಡ ಕಿವಿ ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ನಂತರ ಬಾಲಕ ಅಸ್ವಸ್ಥಗೊಂಡಿದ್ದು, ಆತನನ್ನು ತಿರುನೆಳ್‌ವೇಳಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಡೆದಾಟದಿಂದಾಗಿ ತಲೆಗೆ ತೀವ್ರ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಆದಾಗ್ಯೂ ಅವರು ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 30 ರಂದು ಬಲಿಯಾಗಿದ್ದಾರೆ.

ಹನ್ನೆರಡನೇ ತರಗತಿಯ ವಿದ್ಯಾರ್ಥಿಯ ಸಾವಿನಿಂದಾಗಿ ಪ್ರದೇಶದವು ಉದ್ವಿಗ್ನತೆ ಉಂಟಾಗಿದ್ದು, ಮೃತರ ಕುಟುಂಬ ಮತ್ತು ಗ್ರಾಮಸ್ಥರು ನ್ಯಾಯಕ್ಕಾಗಿ ಒತ್ತಾಯಿಸಿ ರಸ್ತೆ ತಡೆ ನಡೆಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ನಿರ್ದಿಷ್ಟ ಜಾತಿ ಗುರುತು ಕಾಣುವ ರಿಸ್ಟ್ ಬ್ಯಾಂಡ್‌ಗಳಿಗೆ ಅನುಮತಿ ನೀಡದಂತೆ ಖಾತ್ರಿಪಡಿಸಿಕೊಳ್ಳಲು ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆ ನಡೆದ ಶಾಲೆಯು ತಿರುನೆಲ್ವೇಲಿಯ ಸುಮಾರು 40 ಕಿಮೀ ದೂರದಲ್ಲಿರುವ ಅಂಬಾಸಮುದ್ರ ಪ್ರದೇಶದಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...