Homeಮುಖಪುಟಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ: ಜಿಗ್ನೇಶ್ ಮೇವಾನಿ

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ.

- Advertisement -
- Advertisement -

ಅಸ್ಸಾಂ ಜೈಲಿನಿಂದ ಬಿಡುಗಡೆಯಾಗಿರುವ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿ, ನನ್ನ ಬಂಧನದ ಹಿಂದೆ ಗುಜರಾತ್-ಅಸ್ಸಾಂ ಸರ್ಕಾರಗಳ ಪಿತೂರಿಯಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಗುಜರಾತ್‌ ವಿಧಾನಸಭೆ ಚುನಾವಣೆಗೆ ಮುನ್ನ ನನ್ನ ವ್ಯಕ್ತಿತ್ವ ನಾಶಪಡಿಸಲು ಮತ್ತು ಮಾನಹಾನಿ ಮಾಡುವ ಉದ್ದೇಶದಿಂದ ಪೂರ್ವ ಯೋಜಿತ ಪಿತೂರಿ ನಡೆಸಲಾಗಿದೆ. ಅದಕ್ಕಾಗಿ ಪೊಲೀಸರು ನನ್ನನ್ನು ಬಂಧಿಸಲು ಒಂದೇ ದಿನ 2500 ಕಿ,ಮೀ ಕ್ರಮಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನು 56 ಇಂಚಿನ ವ್ಯಕ್ತಿಯನ್ನು ಹೇಡಿ ಎಂದು ಕರೆಯುತ್ತೇನೆ. ಮಹಿಳೆಯೊಬ್ಬರನ್ನು ಬಳಸಿಕೊಂಡು ನನ್ನ ವಿರುದ್ಧ ಸುಳ್ಳು ಪ್ರಕರಣ ಹಾಕಲಾಗಿದೆ. ಕೆಲ ಗೋಡ್ಸೆ ಭಕ್ತರು ಪ್ರಧಾನಿ ಕಾರ್ಯಾಲಯದಲ್ಲಿದ್ದಾರೆ, ಅವರೆ ನನ್ನ ಬಂಧನಕ್ಕೆ ನೇರ ಕಾರಣ ಎಂದು ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಮತ್ತು ನನ್ನ ತಂಡದ ಸದಸ್ಯರಿಂದ ವಶಪಡಿಸಿಕೊಂಡಿರುವ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಿಗೆ ಸರ್ಕಾರವು “ಏನನ್ನಾದರೂ ತೂರಿಸಿರುವ” ಎಲ್ಲ ಅವಕಾಶಗಳಿವೆ. ಆದರೆ ನಾನು ಫ್ಲವರ್, ಫಯರ್ ಆಗಿದ್ದು ಸರ್ಕಾರದ ಎದುರು ತಗ್ಗುವ ಮಾತೆ ಇಲ್ಲ ಎಂದು ಪುಷ್ಪ ಸಿನಿಮಾದ ಸಂಭಾಷಣೆಯನ್ನು ಅನುಕರಿಸಿದ್ದಾರೆ.

ಗುಜರಾತ್‌ನಲ್ಲಿ 22 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಆದರೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ, ಯಾವುದೇ ಬಂಧನವಾಗಿಲ್ಲ ಅಥವಾ ಯಾವುದೇ ತನಿಖೆ ನಡೆಸಲಾಗಿಲ್ಲ. ಅದೇ ರೀತಿ ಮುಂದ್ರಾ ಬಂದರಿನಲ್ಲಿ ಸಿಕ್ಕಿದ ಬೃಹತ್ ಮಾದಕ ದ್ರವ್ಯ ಸಾಗಣೆಯ ಪ್ರಕರಣದ ಬಗ್ಗೆ ಯಾವುದೇ ತನಿಖೆಯಾಗಲಿಲ್ಲ. ದಲಿತ ಮಹಿಳೆಯೊಬ್ಬರು ಗುಜರಾತ್ ಸಚಿವರ ವಿರುದ್ಧ ಅತ್ಯಾಚಾರದ ಆರೋಪ ಮಾಡಿದರೂ ಅದರ ಬಗ್ಗೆ ತನಿಖೆಗಳು ಅಥವಾ ಬಂಧನಗಳು ನಡೆದಿಲ್ಲ. ಧರಮ್ ಸಂಸದ್‌ನಲ್ಲಿ ನಿರ್ದಿಷ್ಟ ಸಮುದಾಯದ ನರಮೇಧಕ್ಕೆ ಕರೆ ನೀಡಲಾಯಿತು ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ ನನ್ನನ್ನು ಮಾತ್ರ ಏಕೆ ಬಂಧಿಸಲಾಯಿತು ಎಂದು ಜಿಗ್ನೇಶ್ ಕಿಡಿಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಟ್ವೀಟ್ ಸರಳವಾಗಿತ್ತು. ಶಾಂತಿ ಮತ್ತು ಸೌಹಾರ್ದತೆಗಾಗಿ ಮನವಿ ಮಾಡುವಂತೆ ನಾನು ಪ್ರಧಾನಿಯನ್ನು ಕೇಳಿದ್ದೆ. ಅದಕ್ಕಾಗಿ ಅವರು ನನ್ನನ್ನು ಬಂಧಿಸಿದರು. ಇದು ಏನನ್ನು ತೋರಿಸುತ್ತದೆ? ಇದು ನನ್ನನ್ನು ನಾಶಮಾಡಲು ಪೂರ್ವ ಯೋಜಿತ ಸಂಚು ಅಲ್ಲವೇ? ನನಗೆ ಎಫ್‌ಐಆರ್‌ನ ಪ್ರತಿಯನ್ನು ನೀಡಲಾಗಿಲ್ಲ. ನನ್ನ ವಿರುದ್ಧದ ಸೆಕ್ಷನ್‌ಗಳನ್ನು ನನಗೆ ತಿಳಿಸಿಲ್ಲ. ನನ್ನ ವಕೀಲರೊಂದಿಗೆ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ. ಶಾಸಕನಾಗಿ ನನ್ನ ವಿಶೇಷತೆಯನ್ನು ಕಡೆಗಣಿಸಲಾಗಿದೆ. ನನ್ನ ಬಂಧನದ ಬಗ್ಗೆ ಗುಜರಾತ್ ಅಸೆಂಬ್ಲಿಯ ಸ್ಪೀಕರ್‌ಗೆ ಮಾಹಿತಿ ಇರಲಿಲ್ಲ. ಬಹುಶಃ ನನ್ನನ್ನು ಅಸ್ಸಾಂಗೆ ಕರೆದೊಯ್ದ ನಂತರ ಅವರಿಗೆ ತಿಳಿಸಲಾಗಿದೆ. ಇದು ಗುಜರಾತ್‌ನ ಹೆಮ್ಮೆಗೆ ಧಕ್ಕೆ ತಂದಿದೆ. ಗುಜರಾತ್ ಸರ್ಕಾರಕ್ಕೂ ನಾಚಿಕೆಯಾಗಬೇಕು ಎದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ರಾಜ್ಯ’ ಮಾಡುತ್ತಿರುವುದನ್ನು ಸರಳವಾಗಿ ಯೋಚಿಸಲು ಸಾಧ್ಯವಿಲ್ಲ: ಜಿಗ್ನೇಶ್‌ಗೆ ಜಾಮೀನು ನೀಡಿದ ಅಸ್ಸಾಂ ಜಿಲ್ಲಾ ನ್ಯಾಯಾಲಯ

ಜಿಗ್ನೇಶ್ ಮೇವಾನಿಯವರಿಗೆ ಜಾಮೀನು ನೀಡುವಾಗ ನ್ಯಾಯಾಲಯ, “ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ‘ಸುಳ್ಳು ಎಫ್‌ಐಆರ್’ ದಾಖಲಿಸಿದ್ದು, ‘ನ್ಯಾಯಾಲಯ ಮತ್ತು ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ’. “ಕಷ್ಟಪಟ್ಟು ಗಳಿಸಿದ ಪ್ರಜಾಪ್ರಭುತ್ವವನ್ನು ಪೊಲೀಸ್ ರಾಜ್ಯವನ್ನಾಗಿ ಪರಿವರ್ತಿಸುವುದರ” ವಿರುದ್ಧ ಪೊಲೀಸರಿಗೆ ಅದು ಎಚ್ಚರಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಧಾನಿಯೇ ಗೋಡ್ಸೆ ಭಕ್ತ. ದ್ವೇಷ ಹರಡುವುದರಲ್ಲಿ ಗೋಡ್ಸೆಯನ್ನೂ ಮೀರಿಸಿದಾತ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...