Homeರಾಜಕೀಯಪಿಎಸ್‌ಐ ಪರೀಕ್ಷಾ ಅಕ್ರಮದ ಹಿಂದಿರುವ ಸಚಿವರ್ಯಾರು? ಕಾಂಗ್ರೆಸ್ ಪ್ರಶ್ನೆಗೆ ನಾನಲ್ಲ ಎಂದು ಸಚಿವ ಅಶ್ವಥ್ ನಾರಾಯಣ್

ಪಿಎಸ್‌ಐ ಪರೀಕ್ಷಾ ಅಕ್ರಮದ ಹಿಂದಿರುವ ಸಚಿವರ್ಯಾರು? ಕಾಂಗ್ರೆಸ್ ಪ್ರಶ್ನೆಗೆ ನಾನಲ್ಲ ಎಂದು ಸಚಿವ ಅಶ್ವಥ್ ನಾರಾಯಣ್

ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. - ಅಶ್ವಥ್ ನಾರಾಯಣ್

- Advertisement -
- Advertisement -

ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ ಈ ಹಗರಣದಲ್ಲಿ ಸಚಿವರೊಬ್ಬರು ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಉನ್ನತ ಶಿಕ್ಷಣ ಮತ್ತು ಐಟಿಬಿಟಿ ಸಚಿವ ಅಶ್ವಥ್ ನಾರಾಯಣ್‌ರವರ ತಮ್ಮ ಸತೀಶ್‌ರವರು ಮಾಗಡಿಯ ದರ್ಶನ್ ಎಂಬುವವರಿಂದ ಹಣ ಪಡೆದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.

ಪತ್ರಕರ್ತರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, “ನನಗೆ ಬಂದಿರುವ ಮಾಹಿತಿ ಪ್ರಕಾರ ಪಿಎಸ್ಐ ನೇಮಕ ಅಕ್ರಮದಲ್ಲಿ ಮಂತ್ರಿಗಳ ಸಂಬಂಧಿ ಭಾಗಿಯಾಗಿದ್ದಾರೆ ಎಂದು ಗೊತ್ತಾಗಿದೆ. ಆ ಆರೋಪಿಯನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ವೇಳೆ ಆ ಮಂತ್ರಿ ಫೋನ್ ಮಾಡಿ ಅವರನ್ನು ಕಳಿಸುವಂತೆ ಒತ್ತಡ ಹೇರಿದ್ದಾರೆ” ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದರೆ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡವರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ಬಿಜೆಪಿ ಶಾಸಕರು, ನಾಯಕರು, ಮಂತ್ರಿಗಳಾಗಿರಲಿ, ಕಾಂಗ್ರೆಸ್, ಜೆಡಿಎಸ್ ನವರಾಗಿರಲಿ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಂಡ್ಯದ ಬಿಜೆಪಿ ನಾಯಕರೊಬ್ಬರು ನನಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾತನಾಡಬೇಡಿ, ಅವರು ಮುಂದೆ ಮುಖ್ಯಮಂತ್ರಿ ಆಗುವವರು, ಅವರ ಹೆಸರು ಎಳೆದು ತರಬೇಡಿ, ಮುಚ್ಚಿಹಾಕಿ ಎನ್ನುತ್ತಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದಾರೆ.

ನನ್ನ ಹೆಸರಿಗೆ ಮಸಿ ಬಳಿಯುವ ಷಡ್ಯಂತ್ರ: ಸಚಿವ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ

ಈ ಕುರಿತು ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, “ಸೂಕ್ತ ಸಾಕ್ಷಿ ಆಧಾರಗಳಿಲ್ಲದೆ ಈ ರೀತಿ ಆರೋಪ ಮಾಡಿ ನನ್ನ ಹೆಸರಿಗೆ ಮಸಿ ಬಳಿಯುವುದು ಸರಿಯಲ್ಲ” ಎನ್ನುವ ಮೂಲಕ ಆರೋಪಗಳನ್ನು ನಿರಾಕರಿಸಿದ್ದಾರೆ.

ನಾನು ಸಿಎಂ ಆಗಿಬಿಡುತ್ತೇನೆ ಎನ್ನವ ಭಯ ಡಿ.ಕೆ ಶಿವಕುಮಾರ್‌ರವರನ್ನು ಕಾಡುತ್ತಿದೆ. ಒಬ್ಬ ನಾಯಕನ ಬೆಳವಣಿಗೆ ಸಹಿಸದೆ ಹೀಗೆಲ್ಲಾ ಪಿತೂರಿ ಮಾಡುತ್ತಿದ್ದಾರೆ. ಹೀಗಾಗಿ ವಿನಾಕಾರಣ ನನ್ನ ಮೇಲೆ ಆರೋಪ ಹೊರಿಸಿ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ಒಬ್ಬ ವ್ಯಕ್ತಿಗಾಗಿ ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ನನ್ನನ್ನು ಸಿಕ್ಕಿಸಲು ನನ್ನ ಹೆಸರು ಎಳೆದು ತರುತ್ತಿದ್ದಾರೆ. ಡಿ.ಕೆ ಶಿವಕುಮಾರ್‌ರವರಿಗೆ ಕರೆ ಮಾಡಿದ ಮಂಡ್ಯದ ಬಿಜೆಪಿ ಮುಖಂಡನ ಹೆಸರು ಹೇಳಲು ಎಂದು ಸವಾಲು ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಿರುಕನ ಕನಸು ಕಾಣುತ್ತಿರುವ ನಮ್ಮ ಮಂತ್ರಿಗೆ ಅವರ ತಮ್ಮ ಮಾಡಿದ ತಪ್ಪು ಕೆಲಸ ಅವರ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...